ಮಾರಾಟಕ್ಕಿವೆ ಕೋಟ್ಯಂತರ ಷೇರು!


Team Udayavani, Jul 6, 2019, 3:04 AM IST

maratakkive

ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಪ್ರಕಟಿಸಿದ ಹೊಸ ನಿಯಮದಿಂದಾಗಿ ಟಿಸಿಎಸ್‌, ಎಚ್‌ಯುಎಲ್‌ ಸೇರಿದಂತೆ 100 ಕ್ಕೂ ಹೆಚ್ಚು ಕಂಪನಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಎದುರಾಗಿದೆ. ಕಂಪನಿಗಳು ಸಾರ್ವಜನಿಕರಿಂದ ಹೊಂದಬೇಕಾದ ಹೂಡಿಕೆಯ ಪ್ರಮಾಣವನ್ನು ಶೇ. 25 ರಿಂದ ಶೇ. 35 ಕ್ಕೆ ಏರಿಕೆ ಮಾಡಲು ಬಜೆಟ್‌ನಲ್ಲಿ ಪ್ರಕಟಿಸಲಾಗಿದ್ದು, ಉದ್ಯಮ ವಲಯವು ಇದನ್ನು ಹಿಂಪಡೆಯುವಂತೆ ಆಗ್ರಹಿಸುತ್ತಿದೆ.

ಸರ್ಕಾರದ ನಿರ್ಧಾರದಿಂದ 3.90 ಲಕ್ಷ ಕೋಟಿ ರೂ. ಮೌಲ್ಯದ ಷೇರುಗಳು ಮಾರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಷೇರು ಮಾರುಕಟ್ಟೆಯಲ್ಲಿ ವ್ಯಾಪಕ ಪ್ರಮಾಣದ ಷೇರು ಹರಿದಾಡಲಿದೆ. ಅಲ್ಲದೆ, ಹಲವು ಬಹುರಾಷ್ಟ್ರೀಯ ಕಂಪನಿಗಳು ಷೇರು ಮಾರುಕಟ್ಟೆಯಿಂದ ವಿಮುಖವಾಗುವ ಸಾಧ್ಯತೆಯೂ ಇರುತ್ತದೆ. ಆದರೆ ಹೂಡಿಕೆ ಪ್ರಮಾಣ ಏರಿಕೆ ಮಾಡಲು ಅಗತ್ಯ ಕಾಲಾವಧಿಯನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿಲ್ಲ.

2010ರಲ್ಲಿ ಶೇ. 25 ಕ್ಕೆ ಹೂಡಿಕೆ ಪ್ರಮಾಣ ಏರಿಕೆ ಮಾಡಲು ನಿರ್ಧರಿಸಿದಾಗ ಕಂಪನಿಗಳಿಗೆ ಮೂರು ವರ್ಷಗಳ ಕಾಲಾವಕಾಶ ಒದಗಿಸಲಾಗಿತ್ತು. ಷೇರು ಮಾರುಕಟ್ಟೆಯಲ್ಲಿ ಲಿಸ್ಟ್‌ ಆಗಿರುವ ನೂರಾರು ಕಂಪನಿಗಳು ಸದ್ಯ ಶೇ. 35 ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಬಂಡವಾಳವನ್ನು ಷೇರುಗಳ ಮೂಲಕ ಸಂಗ್ರಹಿಸಿವೆ. ಆದರೆ ಸರ್ಕಾರದ ಈ ನಿರ್ಧಾರ ಹಲವು ಕಂಪನಿಗಳ ಮಾಲೀಕತ್ವದ ವಿಧಾನದ ಮೇಲೆ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ. ಇದರಿಂದಾಗಿ ಷೇರು ಮಾರುಕಟ್ಟೆಯ ಮೌಲ್ಯವೂ ಇದೇ ವೇಳೆ ಹೆಚ್ಚಳವಾಗುವ ಸಾಧ್ಯತೆಯೂ ಇದೆ.

ಎಫ್ಡಿಐ ನಿಯಮ ಸಡಿಲ: ವಿದೇಶಿ ಹೂಡಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಾಧ್ಯಮ, ವಿಮಾನಯಾನ, ವಿಮೆ ಮತ್ತು ಸಿಂಗಲ್‌ ಬ್ರಾಂಡ್‌ ರಿಟೇಲ್‌ ವಲಯದಲ್ಲಿ ವಿದೇಶಿ ಹೂಡಿಕೆ ಮಿತಿಯನ್ನು ಏರಿಕೆ ಮಾಡಲಾಗಿದೆ. ವಿಮೆ ಕ್ಷೇತ್ರದಲ್ಲಿ ವಿಮೆ ಮಧ್ಯವರ್ತಿಗಳಿಗೆ ಶೇ. 100 ವಿದೇಶಿ ಹೂಡಿಕೆ ಅನುಮತಿ ನೀಡಲಾಗುತ್ತದೆ. ಸದ್ಯ ವಿಮೆ ವಲಯದಲ್ಲಿ ವಿಮೆ ಬ್ರೋಕಿಂಗ್‌, ವಿಮೆ ಕಂಪನಿಗಳಿಗೆ ಶೇ. 49ರಷ್ಟು ವಿದೇಶಿ ಹೂಡಿಕೆ ಅನುಮತಿ ಇದೆ. ಈ ನಿಯಮ ಹಾಗೆಯೇ ಮುಂದುವರಿಯಲಿದ್ದು, ವಿಮೆ ಮಧ್ಯವರ್ತಿ ಕಂಪನಿಗಳಿಗೆ ಮಾತ್ರವೇ ಶೇ. 100 ರಷ್ಟು ವಿದೇಶಿ ಹೂಡಿಕೆಗೆ ಅವಕಾಶ ನೀಡಲಾಗಿದೆ.

ಇದರೊಂದಿಗೆ ದಿನಪತ್ರಿಕೆ ಹಾಗೂ ನಿಯಕಾಲಿಕೆ ಕಂಪನಿಗಳಲ್ಲಿ ಶೇ. 26 ವಿದೇಶಿ ಹೂಡಿಕೆಗೆ ಅನುಮತಿ ನಿಡಲಾಗಿದೆ. ಅಷ್ಟೇ ಅಲ್ಲ, ವಿದೇಶದ ನಿಯತಕಾಲಿಕೆಗಳ ಭಾರತೀಯ ಆವೃತ್ತಿಯ ಪ್ರಕಟಣೆಯಲ್ಲೂ ಈ ನಿಯಮ ಅನ್ವಯಿಸಲಿದೆ. ವಿದೇಶ ಮೂಲದ ಬೃಹತ್‌ ಕಂಪನಿಗಳಿಗೆ ಒಂದು ಸಿಹಿ ಸುದ್ದಿ ನೀಡಿರುವ ಸರ್ಕಾರ, ಸಿಂಗಲ್‌ ಬ್ರಾಂಡ್‌ ರಿಟೇಲ್‌ ಮಳಿಗೆಗಳು ಶೇ 30 ರಷ್ಟು ದೇಶೀಯ ಸಾಮಗ್ರಿಗಳನ್ನು ಖರೀದಿಸುವಲ್ಲಿ ವಿನಾಯಿತಿ ನೀಡಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.