ತರೂರ್ ಮತ್ತೆ ಸಲ್ಲದ ಮಾತು
Team Udayavani, Aug 7, 2018, 6:00 AM IST
ತಿರುವನಂತಪುರ/ನವದೆಹಲಿ: ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಸೋಮವಾರ ಮತ್ತೂಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಗಾಲ್ಯಾಂಡ್ ಮತ್ತು ಇತರ ಈಶಾನ್ಯ ರಾಜ್ಯಗಳಿಗೆ ಪ್ರವಾಸ ತೆರಳಿದಾಗ ನಾಗಾ ಜನರ ಸಾಂಪ್ರದಾಯಿಕ ಶಿರಸ್ತ್ರಾಣ ಧರಿಸುತ್ತಾರೆ. ಆದರೆ ಮುಸ್ಲಿಮರ ಟೋಪಿ ಧರಿಸಲು ನಿರಾಕರಿಸುತ್ತಾರೆ ಎಂದು ಹೇಳಿದ್ದಾರೆ. ಇಂದಿರಾ ಗಾಂಧಿ ಕೂಡ ವಿವಿಧ ರೀತಿಯ ದಿರಿಸುಗಳನ್ನು ಧರಿಸಿದ್ದರು. ಆದರೆ ಅವರು (ಮೋದಿ) ಅದೊಂದಕ್ಕೆ (ಮುಸ್ಲಿಮರ ಟೋಪಿ) ಮಾತ್ರ ಏಕೆ ಬೇಡವೆನ್ನುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ತಿರುವನಂತಪುರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಪುನರ್ರಚಿಸಲಿದ್ದಾರೆ ಮತ್ತು ಭಾರತವನ್ನು ಹಿಂದೂ ಪಾಕಿಸ್ತಾನವನ್ನಾಗಿ ಪರಿವರ್ತಿಸಲಿದ್ದಾರೆ ಎಂದಿದ್ದರು. ಕ್ಷಮೆ ಕೇಳಲಿ: ತಿರುವನಂತಪುರ ಕ್ಷೇತ್ರದ ಸಂಸದ ತರೂರ್ ಮಾತುಗಳು ವಿವಾದಕ್ಕೆ ಕಾರಣವಾಗಿದೆ. ತರೂರ್ ಹೇಳಿಕೆಗೆ ಕಾಂಗ್ರೆಸ್ ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಒತ್ತಾಯಿಸಿದ್ದಾರೆ.
ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಡಾ.ಜಿತೇಂದ್ರ ಸಿಂಗ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ರಾಜ್ಯವರ್ಧನ ಸಿಂಗ್ ರಾಥೋಡ್ ಕೂಡ ತರೂರ್ ಹೇಳಿಕೆ ಖಂಡಿಸಿದ್ದಾರೆ. ತರೂರ್ ಹೇಳಿಕೆ ಈಶಾನ್ಯ ರಾಜ್ಯದವರ ಸಂಸ್ಕೃತಿಗೆ ಅವಮಾನ ಮಾಡಿದಂತಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಂ ಮಾಧವ್ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ