ಕಾಂಗ್ರೆಸ್ಗೆ ಶಾಶ್ವತ ಅಧ್ಯಕ್ಷರೊಬ್ಬರು ಬೇಕು
Team Udayavani, Sep 19, 2021, 7:30 AM IST
ತಿರುವನಂತಪುರ: ಕಾಂಗ್ರೆಸ್ಗೆ ಶಾಶ್ವತ ಅಧ್ಯಕ್ಷರೊಬ್ಬರು ಬೇಕಾಗಿದ್ದಾರೆ ಎಂದು ಆ ಪಕ್ಷದ ಸಂಸದ ಶಶಿ ತರೂರ್ ತಿಳಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ನಲ್ಲಿನ ಬೆಳವಣಿಗೆ ಬೆನ್ನಲ್ಲೇ ತರೂರ್ ಹೇಳಿಕೆ ಮಹತ್ವ ಪಡೆದಿದೆ. ಕೇರಳದ ಇಡುಕ್ಕಿ ಜಿಲ್ಲೆಯ ತೋಡುಪ್ಪುಳ ಎಂಬಲ್ಲಿ ಪಕ್ಷದ ಸಮಾರಂಭವೊಂದರಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ. “”ಪಕ್ಷಕ್ಕೆ ಶಾಶ್ವತ ನಾಯಕರೊಬ್ಬರು ಇರದಿದ್ದರೆ ಪಕ್ಷದ ಸ್ಥಿತಿ ಏನಾಗುತ್ತದೆ ಎಂಬುದು ಮುಂಬರುವ ದಿನಗಳಲ್ಲಿ ತಿಳಿದು ಬರಲಿದೆ.
ಸೋನಿಯಾ ಗಾಂಧಿಯವರು ದಶಕಗಳ ಕಾಲ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾ ಬಂದಿದ್ದಾರೆ. ಆದರೆ, ತಮ್ಮ ಜವಾಬ್ದಾರಿಯಿಂದ ತಮ್ಮನ್ನು ವಿಮುಕ್ತಿಗೊಳಿಸಬೇಕೆಂದು ಅವರು ಕೋರಿರುವುದರಿಂದ ಅವರ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯನ್ನು ಆರಿಸಿಕೊಳ್ಳುವುದು ಅನಿವಾರ್ಯವಾಗಿದೆ” ಎಂದು ಅವರು ಹೇಳಿದ್ದಾರೆ.
“ರಾಹುಲ್ ಗಾಂಧಿಯವರು ಆ ಜವಾಬ್ದಾರಿ ಹೊರಲು ಸಿದ್ಧರಿಲ್ಲ. ಹಾಗಾಗಿ, ಬೇರೊಬ್ಬ ನಾಯಕರನ್ನು ಹುಡುಕಿಕೊಳ್ಳಬೇಕೆಂದು ನನ್ನಂಥ ನಾಯಕರು ಆಶಿಸುತ್ತಿದ್ದಾರೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ