ಸುನಂದಾ ಸಾವು;ತರೂರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇಸ್!
Team Udayavani, May 14, 2018, 4:10 PM IST
ಹೊಸದಿಲ್ಲಿ : ಸುನಂದಾ ಪುಷ್ಕರ್ ನಿಗೂಢ ಸಾವಿಗೆ ಸಂಬಂಧಿಸಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕ, ಪತಿ ಶಶಿ ತರೂರ್ ವಿರುದ್ಧ ಸೋಮವಾರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇಸ್ ದಾಖಲಿಸಿದ್ದಾರೆ.
ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಧರ್ಮೇಂದರ್ ಸಿಂಗ್ ಅವರ ಎದುರು ಪೊಲೀಸರು ಐಪಿಸಿ ಸೆಕ್ಷನ್ 498 ಎ(ಪತಿ ಅಥವಾ ಸಂಬಂಧಿಯಿಂದ ಮಹಿಳೆಯ ಮೇಲೆ ದೌರ್ಜನ್ಯ) ಮತ್ತು 306(ಆತ್ಮಹತ್ಯೆಗೆ ಪ್ರೇರಣೆ) ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುನಂದಾ ಸಾವಿನ 4 ವರ್ಷಗಳ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಸುಮಾರು 3,000 ಪುಟಗಳ ಚಾರ್ಜ್ ಶೀಟನ್ನು ಸಲ್ಲಿಸಲಾಗಿದೆ.
ಸುನಂದಾ 2014 ರ ಜನವರಿ 17 ರಂದು ದೆಹಲಿಯ ಲೀಲಾ ಪ್ಯಾಲೇಸ್ ಹೊಟೇಲ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಆದರೆ ಪೊಲೀಸರು 2015 ಜನವರಿ 1 ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆಗಿಳಿದಿದ್ದರು.
ತರೂರ್ ಅವರು ಪ್ರಕರಣದಲ್ಲಿ ಏಕೈಕ ಆರೋಪಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್