
ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ನಾಮಪತ್ರ ಅರ್ಜಿ ಪಡೆದುಕೊಂಡ ತರೂರ್
ಅಶೋಕ್ ಗೆಹ್ಲೋಟ್ ಎದುರಿಸುವ ನಿರೀಕ್ಷೆ
Team Udayavani, Sep 24, 2022, 4:22 PM IST

ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಶನಿವಾರ ಎಐಸಿಸಿ ಅಧ್ಯಕ್ಷೀಯ ಚುನಾವಣೆಯ ನಾಮನಿರ್ದೇಶನ ಅರ್ಜಿಗಳನ್ನು ಪಕ್ಷದ ಪ್ರಧಾನ ಕಚೇರಿಯಿಂದ ಪಡೆದುಕೊಂಡಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಪಕ್ಷದ ಉನ್ನತ ಹುದ್ದೆಗೆ ಚುನಾವಣಾ ಮುಖಾಮುಖಿಯನ್ನು ಖಚಿತಪಡಿಸಲಾಗಿದ್ದು,ನಾಮಪತ್ರ ಸಲ್ಲಿಕೆ ಆರಂಭದ ಮೊದಲ ದಿನವೇ ಎಐಸಿಸಿ ಕೇಂದ್ರ ಕಚೇರಿಯಲ್ಲಿರುವ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರ ಕಚೇರಿಯಿಂದ ತರೂರ್ ಅವರ ಆಪ್ತ ಸಹಾಯಕ ಆಲಿಂ ಜವೇರಿ ಅರ್ಜಿಗಳನ್ನು ಸಂಗ್ರಹಿಸಿದ್ದಾರೆ.
ಇದನ್ನೂ ಓದಿ : ಪುಣೆಯಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ : ಹಲವರ ಬಂಧನ
ಎರಡು ದಶಕಗಳ ನಂತರ,ಅಧ್ಯಕ್ಷ ಹುದ್ದೆಗೆ ಕಾಂಗ್ರೆಸ್ ಸ್ಪರ್ಧೆ ನಡೆಸಲು ಸಿದ್ಧವಾಗಿದೆ, ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಅವರು ತಮ್ಮ ಉಮೇದುವಾರಿಕೆಯನ್ನು ಘೋಷಿಸಿದ್ದಾರೆ, ಅವರು ತರೂರ್ ಅವರನ್ನು ಎದುರಿಸುವ ನಿರೀಕ್ಷೆಯಿದೆ.
ಸೋಮವಾರ ತರೂರ್ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು, ಆದರೆ ಅವರು ಚುನಾವಣೆಯಲ್ಲಿ “ತಟಸ್ಥ” ಎಂದು ತಿಳಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಹೆಚ್ಚಿನ ಜನರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವನ್ನು ಸೋನಿಯಾ ಗಾಂಧಿ ಸ್ವಾಗತಿಸಿದ್ದರು ಮತ್ತು ಅಧಿಕೃತ ಅಭ್ಯರ್ಥಿ ಇರುವುದಿಲ್ಲ ಎಂಬ ಕಲ್ಪನೆಯನ್ನು ಹೋಗಲಾಡಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
