

Team Udayavani, Jul 19, 2024, 6:13 PM IST
ತಿರುವನಂತಪುರಂ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಮಸೂದೆ ಜಾರಿಗೆ ಮಾಡಲು ಮುಂದಾದ ಕರ್ನಾಟಕದ ಕಾಂಗ್ರೆಸ್ ಸರಕಾರದ ನಿರ್ಧಾರ ಅಸಂವಿಧಾನಿಕ ಮತ್ತು ಅವಿವೇಕ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಟೀಕಾ ಪ್ರಹಾರ ನಡೆಸಿದ್ದಾರೆ.
ಸುದ್ದಿಗಾರರರೊಂದಿಗೆ ಮಾತನಾಡಿದ ಸಂಸದ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ತರೂರ್ ‘ ‘ಇದು ಬುದ್ಧಿವಂತ ನಿರ್ಧಾರವಲ್ಲ. ಪ್ರತಿ ರಾಜ್ಯವೂ ಇಂತಹ ಕಾನೂನು ತಂದರೆ ಅದು ಸಂವಿಧಾನ ಬಾಹಿರವಾಗುತ್ತದೆ. ಸಂವಿಧಾನದ ಪ್ರಕಾರ, ಪ್ರತಿಯೊಬ್ಬ ನಾಗರಿಕನಿಗೆ ಭಾರತದ ಯಾವುದೇ ಭಾಗದಲ್ಲಿ ಮುಕ್ತವಾಗಿ ವಾಸಿಸುವ, ಕೆಲಸ ಮಾಡುವ ಮತ್ತು ಪ್ರಯಾಣಿಸುವ ಹಕ್ಕಿದೆ, ”ಎಂದರು.
“ಕರ್ನಾಟಕ ಸರಕಾರವು ಇದರ ಬಗ್ಗೆ ಏಕೆ ಯೋಚಿಸಿದೆ, ಯಾವ ಆಧಾರದ ಮೇಲೆ ನನಗೆ ತಿಳಿದಿಲ್ಲ. ಇಂತಹ ಕಾನೂನು ಜಾರಿಗೆ ಬಂದರೆ ರಾಜ್ಯದ ವ್ಯವಹಾರಗಳನ್ನು ತಮಿಳುನಾಡು ಮತ್ತು ಕೇರಳದಂತಹ ನೆರೆಯ ರಾಜ್ಯಗಳಿಗೆ ಸ್ಥಳಾಂತರಿಸಲಾಗುತ್ತದೆ’ ಎಂದು ಹೇಳಿದರು.
‘ಹರಿಯಾಣದ ಸರ್ಕಾರವೊಂದು ಇದೇ ವಿಧೇಯಕವನ್ನು ಮಂಡಿಸಲು ಯತ್ನಿಸಿದಾಗ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು ಎಂದರು ಮಾತ್ರವಲ್ಲದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮಸೂದೆ ತಡೆಹಿಡಿಯುವ ನಿರ್ಧಾರ ಕೈಗೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.
ಉದ್ಯಮ ವಲಯದ ಹಲವರ ವಿರೋಧದ ಬಳಿಕ ಇಕ್ಕಟ್ಟಿಗೆ ಸಿಲುಕಿದ ರಾಜ್ಯ ಸರಕಾರ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಮಸೂದೆ ಜಾರಿಗೆ ತಾತ್ಕಾಲಿಕ ತಡೆ ನೀಡಿದೆ.
Ad
ಕ್ಯಾಂಟೀನ್ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್
Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್
ನ್ಯಾ.ವರ್ಮ ವಿರುದ್ಧ ಲೋಕಸಭೇಲಿ ಪದಚ್ಯುತಿ ಮಂಡನೆ: ಮೂಲಗಳು
Oldest Elephant: ಬದುಕಿನ ಯಾನ ನಿಲ್ಲಿಸಿದ ವತ್ಸಲಾ.. ಏಷ್ಯಾದ ಅತ್ಯಂತ ಹಿರಿಯ ಆನೆ ಇನ್ನಿಲ್ಲ
ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್ ರದ್ದುಗೊಳಿಸಿದ ಸರಕಾರ
You seem to have an Ad Blocker on.
To continue reading, please turn it off or whitelist Udayavani.