ಶಶಿಕಲಾಗೆ ನಕಲಿ ಕಂಪೆನಿಗಳ ನಂಟು


Team Udayavani, Nov 13, 2017, 6:15 AM IST

shashikala.jpg

ಚೆನ್ನೈ: ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾಗೆ ಶೆಲ್‌ ಕಂಪೆನಿಗಳ ನಂಟು ಇತ್ತೇ ಎಂಬ ಶಂಕೆ ವ್ಯಕ್ತವಾಗಿದೆ. ಐಟಿ ದಾಳಿ ನಡೆದ ಸಂದರ್ಭ ಜಯಾ ಟಿವಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ವಿವೇಕ್‌ ಜಯರಾಮನ್‌ಗೆ ಸೇರಿದ 100 ಬ್ಯಾಂಕ್‌ ಖಾತೆಗಳನ್ನು ಗುರುತಿಸ ಲಾಗಿದೆ. ಮಾತ್ರವಲ್ಲ ನೋಟು ಅಪಮೌಲ್ಯದ ಬಳಿಕ ಬಹುಕೋಟಿ ರೂ. ಮೊತ್ತವನ್ನು ಅವುಗಳಲ್ಲಿ ಠೇವಣಿಯಾಗಿ ಇರಿಸಿದ್ದರ ಬಗ್ಗೆ ಅನುಮಾನ ಗಳೂ ವ್ಯಕ್ತವಾಗಿವೆ.

ವಿವೇಕ್‌ ಸದ್ಯ ಬೆಂಗಳೂರಿನ ಪರ ಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿ ಸುತ್ತಿರುವ ವಿ.ಕೆ. ಶಶಿಕಲಾರ ಸೋದರ ಸಂಬಂಧಿ. ಆದಾಯ ತೆರಿಗೆ ಅಧಿಕಾರಿಗಳು ಈ ಬ್ಯಾಂಕ್‌ ಖಾತೆ ಗಳನ್ನು ಜಪ್ತಿ ಮಾಡಿಕೊಂಡಿದ್ದು, ಶುಕ್ರವಾರ ನಡೆದಿದ್ದ ದಾಳಿಯಲ್ಲಿ 6 ಕೋಟಿ ರೂ. ನಗದು, 8.5 ಕೆಜಿ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಜತೆಗೆ ಕಾಲೇಜೊಂದರ ಹಾಸ್ಟೆಲ್‌ ಕಪಾಟಿನಿಂದ ಬಹುಕೋಟಿ ರೂ. ಮೌಲ್ಯದ ವಜ್ರಗಳನ್ನೂ ವಶಪಡಿಸಿಕೊಳ್ಳಲಾಗಿತ್ತು.

ಜಯಾ ಟಿವಿ ಎಂ.ಡಿ. ವಿವೇಕ್‌ ಜಯರಾಮನ್‌ 20ಕ್ಕೂ ಅಧಿಕ ಕಂಪೆನಿಗಳ ಹೆಸರಲ್ಲಿ ಬ್ಯಾಂಕ್‌ ಖಾತೆ ಹೊಂದಿರುವುದು ದಾಖಲೆಗಳ ಪರಿಶೀಲನೆ ವೇಳೆ ಗೊತ್ತಾಗಿದೆ. ನೋಟು ಅಪಮೌಲ್ಯದ ಬಳಿಕ ಕೋಟಿಗಟ್ಟಲೆ ರೂ. ಮೊತ್ತವನ್ನು ಅವುಗಳಲ್ಲಿ ತೊಡಗಿಸಲಾಗಿತ್ತು. ದಾಳಿ ಸಂದರ್ಭ ಖಾತೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅವರ ಸಹೋದರಿ ಕೃಷ್ಣ ಪ್ರಿಯಾ ಮತ್ತು ಆಡಿಟರ್‌ ನಿವಾಸಕ್ಕೆ ದಾಳಿ ನಡೆಸಿದ ವೇಳೆ ಇನ್ನೂ ಹಲವು ಕಾಗದ ಪತ್ರ ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ ಆದಾಯ ತೆರಿಗೆ ಇಲಾಖೆ ಹಿರಿಯ ಅಧಿಕಾರಿಗಳು. ಈ ಖಾತೆಯಲ್ಲಿ ತೊಡಗಿಸಲಾಗಿರುವ ಮೊತ್ತದಿಂದ ಕೋಟಿಗಟ್ಟಲೆ ರೂ. ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ ಖರೀದಿಗೆ ವಿನಿಯೋಗಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ದಾಳಿ ಮುಕ್ತಾಯ: ಕೊಡನಾಡ್‌ ಎಸ್ಟೇಟ್‌, ಇತರ ಸ್ಥಳಗಳಲ್ಲಿ ರವಿ ವಾರವೂ ಶೋಧಕಾರ್ಯ ಮುಂದು ವರಿದಿತ್ತು. ಒಟ್ಟಾರೆ ಬೆಳವಣಿಗೆ ಬಗ್ಗೆ ಚೆನ್ನೈಯಲ್ಲಿ ಪ್ರತಿಕ್ರಿಯೆ ನೀಡಿದ ಆದಾಯ ತೆರಿಗೆ ಅಧಿಕಾರಿಗಳು, ಇಲಾಖೆ ದಾಳಿ ಬಹುತೇಕ ಪೂರ್ಣ ಗೊಂಡಿದೆ ಎಂದು ತಿಳಿಸಿದೆ. ಇನ್ನೇನಿದ್ದರೂ ಹೇಳಿಕೆ ದಾಖಲಿಸುವುದು, ಅದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಪ್ರಕ್ರಿಯೆ ಮಾತ್ರ ಉಳಿದಿದೆ ಎಂದಿದ್ದಾರೆ.

ವಿ.ಕೆ. ಶಶಿಕಲಾ ಮತ್ತು ಇತರರ 
ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದರಲ್ಲಿ ಯಾವ ಸಂಚೂ ಇಲ್ಲ. ಸೂಕ್ತ ಮಾಹಿತಿ ಮತ್ತು ದಾಖಲೆಗಳ ಆಧಾರದಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ.

-ಪೊನ್‌ ರಾಧಾಕೃಷ್ಣನ್‌, ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.