ಎಲ್ಲಾ ಕ್ಯಾಬಿನೆಟ್ ಸಮಿತಿಗಳಲ್ಲಿ ಶಾಗೆ ಪ್ರಾತಿನಿಧ್ಯ


Team Udayavani, Jun 7, 2019, 6:10 AM IST

shah1

ನವದೆಹಲಿ: ಬುಧವಾರವಷ್ಟೇ ‘ಆರ್ಥಿಕ ಬೆಳವಣಿಗೆ ಹಾಗೂ ಬಂಡವಾಳ ಹೂಡಿಕೆ ಸಮಿತಿ’ ಮತ್ತು ‘ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ’ ಎಂಬ ಎರಡು ಹೊಸ ಸಮಿತಿಗಳನ್ನು ರಚಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಗುರುವಾರ ಈ ಹಿಂದಿನ ಸರ್ಕಾರದಲ್ಲಿ ರಚಿಸಲಾಗಿದ್ದ ಐದು ಸಂಪುಟ ಸಮಿತಿಗಳನ್ನು ಪುನಾರಚಿಸಿದ್ದಾರೆ.

ನೂತನ ಸಮಿತಿಗಳೂ ಸೇರಿದಂತೆ, ಈಗ ಪುನಾರಚನೆಗೊಂಡಿರುವ ಎಲ್ಲಾ 8 ಸಮಿತಿಗಳಲ್ಲೂ ಅಮಿತ್‌ ಶಾ ಅವರಿಗೆ ಸ್ಥಾನ ನೀಡಲಾಗಿದ್ದು, ಇದು ಸಂಪುಟದಲ್ಲಿ ಶಾ ಅವರ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದೆ. ಅದರಲ್ಲೂ ‘ನೇಮಕಾತಿ ಸಂಪುಟ ಸಮಿತಿ’ಯಲ್ಲಿ ಮೋದಿ ಮತ್ತು ಶಾ ಇಬ್ಬರೇ ಇರುವುದು ಗಮನಾರ್ಹ. ಆದರೆ, ಎರಡು ಸಮಿತಿಗಳನ್ನು ಬಿಟ್ಟು ಉಳಿದೆಲ್ಲವುಗಳಿಂದ ರಾಜನಾಥ್‌ ಸಿಂಗ್‌ ಅವರನ್ನು ಕೈಬಿಡಲಾಗಿತ್ತು. ಆದರೆ, ರಾತ್ರಿ ವೇಳೆಗೆ 6 ಸಮಿತಿಗಳಲ್ಲಿ ರಾಜನಾಥ್‌ಗೆ ಸ್ಥಾನ ನೀಡಲಾಗಿದೆ.

ಬುಧವಾರದ ಎರಡು ಸಮಿತಿಗಳಲ್ಲೂ ರಾಜನಾಥ್‌ ಹೆಸರಿರಲಿಲ್ಲ. ಗುರುವಾರ ಎಲ್ಲಾ ಸಮಿತಿಗಳನ್ನೂ ಪುನರ್‌ ರಚಿಸಿದ್ದು ಪ್ರಧಾನಿ ನಂತರದ ಸ್ಥಾನವನ್ನೇ ರಾಜನಾಥ್‌ಗೆ ನೀಡಲಾಗಿದೆ.

•ಭದ್ರತಾ ಸಮಿತಿ ಅತ್ಯಂತ ಮಹತ್ವವೆನಿಸಿರುವ ರಾಷ್ಟ್ರೀಯ ಸುರಕ್ಷತೆಗೆ ಸಂಬಂಧಿಸಿದ ಭದ್ರತಾ ಸಮಿತಿಯಲ್ಲಿ ಹೊಸದಾಗಿ ಅಮಿತ್‌ ಶಾ ಹಾಗೂ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರನ್ನು ಸೇರ್ಪಡೆಗೊಳಿಸಿದ್ದು ಬಿಟ್ಟರೆ, ಇನ್ನುಳಿದ ಸದಸ್ಯರನ್ನು ಹಾಗೇ ಮುಂದುವರಿಸಲಾಗಿದೆ. ಪ್ರಧಾನಿ ಮೋದಿಯವರ ಅಧ್ಯಕ್ಷತೆಯ ಈ ಸಮಿತಿಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇದ್ದಾರೆ. •ಆರ್ಥಿಕ ವ್ಯವಹಾರಗಳ ಸಮಿತಿ ನರೇಂದ್ರ ಮೋದಿ, ರಾಜನಾಥ್‌ ಸಿಂಗ್‌, ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌, ಜೈಶಂಕರ್‌, ನಿತಿನ್‌ ಗಡ್ಕರಿ, ಪಿಯೂಶ್‌ ಗೋಯೆಲ್, ನರೇಂದ್ರ ತೋಮರ್‌, ರವಿಶಂಕರ್‌ ಪ್ರಸಾದ್‌, ಹರ್‌ಸಿಮ್ರತ್‌ ಕೌರ್‌ ಬಾದಲ್, ಧರ್ಮೇಂದ್ರ ಪ್ರಧಾನ್‌ (ಪೆಟ್ರೋಲಿಯಂ), ಸದಾನಂದ ಗೌಡ (ರಾಸಾಯನಿಕ ಮತ್ತು ರಸಗೊಬ್ಬರ).

•ರಾಜಕೀಯ ವ್ಯವಹಾರಗಳ ಸಮಿತಿ ನರೇಂದ್ರ ಮೋದಿ, ರಾಜನಾಥ್‌ ಸಿಂಗ್‌, ಅಮಿತ್‌ ಶಾ, ನಿತಿನ್‌ ಗಡ್ಕರಿ, ನಿರ್ಮಲಾ ಸೀತಾರಾಮನ್‌ , ನರೇಂದ್ರ ತೋಮರ್‌, ರವಿಶಂಕರ್‌ ಪ್ರಸಾದ್‌, ಪಿಯೂಶ್‌ ಗೋಯೆಲ್, ಪ್ರಹ್ಲಾದ್‌ ಜೋಷಿ, ರಾಮ್‌ ವಿಲಾಸ್‌ ಪಾಸ್ವಾನ್‌, ಹರ್‌ಸಿಮ್ರತ್‌ ಕೌರ್‌ ಬಾದಲ್, ಅರವಿಂದ್‌ ಸಾವಂತ್‌, ಹರ್ಷವರ್ಧನ್‌, •ಸಂಸದೀಯ ವ್ಯವಹಾರಗಳ ಸಮಿತಿ ರಾಜನಾಥ್‌ ಸಿಂಗ್‌, ಅಮಿತ್‌ ಶಾ, ಪ್ರಹ್ಲಾದ್‌ ಜೋಷಿ, ನರೇಂದ್ರ ಸಿಂಗ್‌ ತೋಮರ್‌, ನಿರ್ಮಲಾ ಸೀತಾರಾಮನ್‌, ರವಿಶಂಕರ್‌ ಪ್ರಸಾದ್‌, ಪ್ರಕಾಶ್‌ ಜಾವಡೇಕರ್‌, ತಾವರ್‌ಚಂದ್‌ ಗೆಹ್ಲೋಟ್, ರಾಮ್‌ ವಿಲಾಸ್‌ ಪಾಸ್ವಾನ್‌ •ಸಚಿವರ ವಸತಿ ಹಂಚಿಕೆ ಸಮಿತಿ ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌, ನಿತಿನ್‌ ಗಡ್ಕರಿ, ಫಿಯೂಶ್‌ ಗೋಯೆಲ್, ಹರ್‌ದೀಪ್‌ ಪುರಿ (ನಗರಾಭಿವೃದ್ಧಿ) ಹಾಗೂ ವಿಶೇಷ ಆಹ್ವಾನಿತರಾಗಿ ಜಿತೇಂದ್ರ ಸಿಂಗ್‌ (ಪ್ರಧಾನಿ ಕಾರ್ಯಾಲಯ ಸಹಾಯಕ ಸಚಿವ) ಇರುತ್ತಾರೆ. ಈ ಸಮಿತಿಯಲ್ಲಿ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲ. ಇದಕ್ಕೆ ಅಮಿತ್‌ ಶಾ ನೇತೃತ್ವ ವಹಿಸಿದ್ದಾರೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.