ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?
ವಿಡಿಯೋ ಚಿತ್ರೀಕರಣ ಮಾಡುವ ತಂಡದಲ್ಲಿ ಅಜಯ್ ಮಿಶ್ರಾ ಕೂಡಾ ಒಬ್ಬರಾಗಿದ್ದರು.
Team Udayavani, May 19, 2022, 6:14 PM IST
ನವದೆಹಲಿ: ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಆವರಣದ ವಿಡಿಯೋ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಹಲವಾರು ಹಿಂದೂ ದೇವತೆಗಳ ವಿಗ್ರಹದ ಮುರಿದ ತುಣುಕುಗಳು ಪತ್ತೆಯಾಗಿರುವುದಾಗಿ ಹಿಂದೂ ಅರ್ಜಿದಾರರ ಪರವಾಗಿ ಗುರುವಾರ (ಮೇ 19) ಕೋರ್ಟ್ ಗೆ ಹಾಜರಾಗಿದ್ದ ವಕೀಲ ಅಜಯ್ ಮಿಶ್ರಾ ಅವರು ತಿಳಿಸಿರುವುದಾಗಿ ವರದಿ ಹೇಳಿದೆ.
ಇದನ್ನೂ ಓದಿ:ಸಾಧನೆಗೆ ಬಡತನವೇ ಪ್ರೇರಣೆ :ಗೋವಾಕ್ಕೆ ಗುಳೆ ಹೋಗಿರುವ ಕಾರ್ಮಿಕನ ಮಗ ಟಾಪರ್
ಅವಶೇಷಗಳು ದೇವಾಲಯದಂತೆ ಇದ್ದು, ಅದು ಶೇಷನಾಗನ ಪಳಯುಳಿಕೆಯಂತಿದೆ. ಆದರೆ ನನಗೆ ನೆಲಮಾಳಿಗೆಗೆ ಹೋಗಲು ಅವಕಾಶ ನೀಡಲಿಲ್ಲ. ಈ ಅವಶೇಷಗಳು 500-600 ವರ್ಷಗಳಷ್ಟು ಪುರಾತನದ್ದಾಗಿದೆ ಎಂದು ಅಜಯ್ ಮಿಶ್ರಾ ಆಜ್ ತಕ್ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ವಿಡಿಯೋ ಚಿತ್ರೀಕರಣ ಮಾಡುವ ತಂಡದಲ್ಲಿ ಅಜಯ್ ಮಿಶ್ರಾ ಕೂಡಾ ಒಬ್ಬರಾಗಿದ್ದರು. ಆದರೆ ಸಮೀಕ್ಷೆ ಸಂದರ್ಭದಲ್ಲಿ ತನಗೆ ಜಿಲ್ಲಾಡಳಿತ ತನಗೆ ಸಹಕಾರ ನೀಡಿರಲಿಲ್ಲ ಎಂದು ಆರೋಪಿಸಿದ್ದಾರೆ.
ಮಸೀದಿ ಆವರಣದೊಳಗೆ ಗುಮ್ಮಟ ಆಕಾರದ ರಚನೆ ಇದ್ದಿರುವುದಾಗಿ ಮಿಶ್ರಾ ಖಚಿತಪಡಿಸಿದ್ದಾರೆ. ಆದರೆ ಅದನ್ನು ತಮ್ಮ ವರದಿಯಲ್ಲಿ ಉಲ್ಲೇಖಿಸಿಲ್ಲ ಎಂದು ತಿಳಿಸಿದ್ದಾರೆ. ಆ ಆಕಾರ ಹಿಂದೂಗಳ ಶಿವಲಿಂಗದಂತಿದೆ ಎಂದು ಮಿಶ್ರಾ ಹೇಳಿದ್ದಾರೆ. ಮತ್ತೊಂದೆಡೆ ಮಸೀದಿ ಆಡಳಿತ ಮಂಡಳಿ ಇದನ್ನು ಅಲ್ಲಗಳೆದಿದ್ದು, ಅದೊಂದು ಕಾರಂಜಿ ಎಂದು ತಿಳಿಸಿದೆ.
ಅಷ್ಟೇ ಅಲ್ಲ ಸ್ಪೆಷಲ್ ಕೋರ್ಟ್ ಕಮಿಷನರ್ ವಿಶಾಲ್ ಸಿಂಗ್ ಅವರು ಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ಈ ರಚನೆ ಬಗ್ಗೆ ಉಲ್ಲೇಖಿಸಿದ್ದಾರೆ. ಮಸೀದಿಯೊಳಗೆ ಸನಾತನ ಸಂಸ್ಕೃತಿಯ ಹಲವಾರು ಕುರುಹುಗಳು ಇದ್ದಿರುವುದಾಗಿ ತಿಳಿಸಿದ್ದಾರೆ.
ನೆಲಮಾಳಿಗೆಯ ಗೋಡೆಯಲ್ಲಿ ಕಮಲ, ಡಮರುಗ, ತ್ರಿಶೂಲ ಪತ್ತೆಯಾಗಿರುವುದಾಗಿ ವರದಿಯಲ್ಲಿ ತಿಳಿಸಿದೆ. ವಿಡಿಯೋ ಸಮೀಕ್ಷೆಯ ಮೆಮೊರಿ ಚಿಪ್ ಅನ್ನು ಕೋರ್ಟ್ ಗೆ ಸಲ್ಲಿಸಿರುವುದಾಗಿ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ