ಮತದಾರರ ಪಟ್ಟಿಯಲ್ಲಿ ಶಿರ್ಡಿ ಸಾಯಿಬಾಬಾ ಹೆಸರು ಪತ್ತೆ, ಕೇಸು ದಾಖಲು
Team Udayavani, Aug 30, 2018, 11:42 AM IST
ಶಿರ್ಡಿ : ಅಹ್ಮದ್ನಗರ ಜಿಲ್ಲೆಯ ಸ್ಥಳೀಯ ಅಸೆಂಬ್ಲಿ ಕ್ಷೇತ್ರದ ಮತದಾರರ ಪಟ್ಟಿಗೆ ಚುನಾವಣಾ ಆಯೋಗದ ಆನ್ಲೈನ್ ವ್ಯವಸ್ಥೆಯ ಮೂಲಕ ಶಿರ್ಡಿ ಸಾಯಿಬಾಬಾ ಹೆಸರನ್ನು ಸೇರಿಸಲು ಅಪರಿಚಿತ ವ್ಯಕ್ತಿಯೋರ್ವ ಯತ್ನಿಸಿರುವ ವಿಲಕ್ಷಣಕಾರಿ ಮತ್ತು ಆಘಾತಕಾರಿ ಘಟನೆ ವರದಿಯಾಗಿದೆ.
ಆನ್ಲೈನ್ ಫಾರ್ಮುಗಳ ಪರಿಶೀಲನೆಯ ವೇಳೆ ಇದನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಒಡನೆಯೇ ಪೊಲೀಸರನ್ನು ಸಂಪರ್ಕಿಸಿದರು. ಅರ್ಜಿಯಲ್ಲಿ ಸಾಯಿ ಬಾಬಾ ಅವರ ವಿಳಾಸವಾಗಿ ಶಿರ್ಡಿ ದೇವಾಲಯದ ವಿಳಾಸವನ್ನು ನಮೂದಿಸಲಾಗಿರುವುದು ಕಂಡು ಬಂದಿದೆ.
ಮತದಾರರ ಸೇರ್ಪಡೆಯ ಆನ್ಲೈನ್ ಅರ್ಜಿ ಪರಿಶೀಲನೆಯ ವೇಳೆ ಇದು ಪತ್ತೆಯಾದಾಗ ಚುನಾವಣಾ ಶಾಖೆಯ ನಯಾಬ್ ರಹತಾ ತಹಶೀಲ್ದಾರ್ ಸಚಿನ್ ಮಾಸ್ಕೆ ಅವರು ಪೊಲೀಸರಿಗೆ ದೂರು ನೀಡಿದರು.
ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಟಿ ಕಾಯಿದೆಯ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರಂಭದಲ್ಲಿ ಈ ಕೇಸನ್ನು ಅಹ್ಮದ್ನಗರ್ ಜಿಲ್ಲೆಯ ಸೈಬರ್ ಕ್ರೈಮ್ ಶಾಖೆಗೆ ವರ್ಗಾಯಿಸಲಾಗಿತ್ತು. ಆದರೆ ಅನಂತರ ಅದನ್ನು ರಹತಾ ಪೊಲೀಸರಿಗೆ ಮರಳಿಸಲಾಯಿತು. ಪರಿಣಾಮವಾಗಿ ಪ್ರಕರಣದ ತನಿಖೆಯಲ್ಲಿ ವಿಳಂಬವಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ