ಸಿಎಎ ಭಿನ್ನಮತ : ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಅಕಾಲಿದಳ ನಿರ್ಧಾರ
Team Udayavani, Jan 20, 2020, 10:19 PM IST
ನವದೆಹಲಿ: ತನ್ನ ಮಿತ್ರಪಕ್ಷ ಭಾರತೀಯ ಜನತಾ ಪಕ್ಷದೊಂದಿಗೆ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿನ ಕೆಲವೊಂದು ಅಂಶಗಳ ಕುರಿತಾಗಿರುವ ಭಿನ್ನಮತದ ಕಾರಣದಿಂದ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಲು ಶಿರೋಮಣಿ ಅಕಾಲಿ ದಳ ನಿರ್ಧರಿಸಿದೆ.
ಅರವಿಂದ ಕೇಜ್ರಿಮಾಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ದೆಹಲಿ ಗದ್ದುಗೆಯನ್ನು ಏರುವ ಕನಸು ಕಾಣುತ್ತಿರುವ ಬಿಜೆಪಿಗೆ ಇದೊಂದು ಹಿನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ. ದೆಹಲಿಯಲ್ಲಿ ಕನಿಷ್ಟ ನಾಲ್ಕು ಸ್ಥಾನಗಳಲ್ಲಿ ಅಕಾಲಿದಳ ಪಕ್ಷದ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿತ್ತು.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳನ್ನು ಬಿಜೆಪಿ ಶಿರೋಮಣಿ ಅಕಾಲಿ ದಳಕ್ಕೆ ಬಿಟ್ಟುಕೊಟ್ಟಿತ್ತು ಹಾಗೂ ಒಬ್ಬ ಅಕಾಲಿ ದಳ ಅಭ್ಯರ್ಥಿ ಬಿಜೆಪಿ ಪಕ್ಷದ ಚಿಹ್ನೆಯ ಅಡಿಯಲ್ಲಿ ಸ್ಪರ್ಧಿಸಿದ್ದರು. ಇದು ಆ ಎರಡು ಪಕ್ಷಗಳ ನಡುವೆ ನಡೆದಿದ್ದ ಚುನಾವಣಾ ಪೂರ್ವ ಒಪ್ಪಂದವಾಗಿತ್ತು. ಅಕಾಲಿದಳ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಬಿಜೆಪಿ ಚಿಹ್ನೆಯಡಿಯಲ್ಲಿ ರಜೌರಿ ಗಾರ್ಡನ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಒಂದು ಸಮುದಾಯವನ್ನು ಹೊರಗಿಟ್ಟಿರುವುದರ ಕುರಿತಾಗಿ ಅಕಾಲಿದಳದ ಮುಖ್ಯಸ್ಥ ಸುಖ್ಬೀರ್ ಬಾದಲ್ ತನ್ನ ಅಸಮಧಾನವನ್ನು ವ್ಯಕ್ತಪಡಿಸಿದ್ದರು ಮಾತ್ರವಲ್ಲದೇ ಈ ಅಂಶವನ್ನು ಪುನರ್ ಪರಿಶೀಲಿಸುವಂತೆ ಅವರು ತಮ್ಮ ದೀರ್ಘಕಾಲದ ಮಿತ್ರ ಬಿಜೆಪಿಗೆ ಸೂಚಿಸಿದ್ದರು.
ಆದರೆ ಬಿಜೆಪಿ ನಾಯಕರು ಸುಖ್ಬೀರ್ ಅವರ ಈ ಕೋರಿಕೆಯನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ತಮ್ಮ ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೇ ಇರಲು ನಿರ್ಧರಿಸಿರುವ ಅಕಾಲಿದಳ ಮುಖಂಡರು ಬದಲಾಗಿ ದೆಹಲಿ ಚುನಾವಣೆಯಲ್ಲಿ ತಮ್ಮ ಮೈತ್ರಿ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳದೇ ಇರಲು ನಿರ್ಧರಿಸಿದ್ದಾರೆ.
ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಮತ್ತು ರಾಮ್ ವಿಲಾಸ್ ಪಾಸ್ವಾನ್ ನಾಯಕತ್ವದ ಎಲ್.ಜೆ.ಪಿ. ಜೊತೆ ಸೀಟು ಹಂಚಿಕೊಳ್ಳಲು ನಿರ್ಧರಿಸಿದೆ. ಜೆಡಿಯುಗೆ ಎರಡು ಮತ್ತು ಎಲ್.ಜೆ.ಪಿ.ಗೆ ಒಂದು ಸ್ಥಾನವನ್ನು ಬಿಜೆಪಿ ಈ ಬಾರಿ ಬಿಟ್ಟುಕೊಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ