JK ವಿಧಾನಸಭಾ ಕ್ಷೇತ್ರ ಪುನರ್ ವಿಂಗಡನೆ: ಅಮಿತ್ ಶಾ ದಿಟ್ಟ ಹೆಜ್ಜೆಗೆ ಶಿವ ಸೇನೆ ಪ್ರಶಂಸೆ
Team Udayavani, Jun 6, 2019, 11:35 AM IST
ಹೊಸದಿಲ್ಲಿ : ಭಾರತೀಯ ಜನತಾ ಪಕ್ಷ ಮತ್ತು ಅದರ ನೀತಿಗಳನ್ನು ಹಿಂದೆಲ್ಲ ಕಟುವಾಗಿ ಟೀಕಿಸುತ್ತಿದ್ದ ಮಿತ್ರ ಪಕ್ಷ ಶಿವ ಸೇನೆ ಇದೀಗ ತನ್ನ ಮುಖವಾಣಿ ಸಾಮ್ನಾ ದಲ್ಲಿ ಜಮ್ಮು ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡನೆ ಕೈಗೊಳ್ಳುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದಿಟ್ಟ ನಿರ್ಧಾರವನ್ನು ಬಹುವಾಗಿ ಕೊಂಡಾಡಿದೆ.
ಕಳೆದ ಆವರ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅಮಿತ್ ಶಾ ಅವರು ಜಮ್ಮು ಕಾಶ್ಮೀರ ಕುರಿತ ತಮ್ಮ ದೃಢ ಉದ್ದೇಶಗಳನ್ನು ದಿಟ್ಟತನದಿಂದ ಬಹಿರಂಗ ಪಡಿಸಿದ್ದಾರೆ. ಇಂತಹ ಒಂದು ದೃಢ ಉಪಕ್ರಮವು ಬಹಳ ಹಿಂದಿನ ಅಗತ್ಯವಾಗಿ ಬಾಕಿ ಉಳಿದು ಬಂದಿತ್ತು ಎಂದು ಶಿವ ಸೇನೆ ಹೇಳಿದೆ.
ಜಮ್ಮು ಕಾಶ್ಮೀರ ವಿಧಾನ ಸಭಾ ಕ್ಷೇತ್ರಗಳ ಪುನರ್ವಿಂಗಡನೆ ಬಗ್ಗೆ ಕೇಂದ್ರ ಸರಕಾರ ಅಧಿಕೃತವಾಗಿ ತನ್ನ ನಿರ್ಧಾರ ಈ ವರೆಗೆ ಪ್ರಕಟಿಸಿಲ್ಲವಾದರೂ ಅದರ ಉದ್ದೇಶಗಳು ಅನೌಪಚಾರಿಕವಾಗಿ ಈಗ ದೃಢೀಕರಿಸಲ್ಪಟ್ಟಿವೆ ಎಂದು ಸಾಮ್ನಾ ಸಂಪಾದಕೀಯದಲ್ಲಿ ಪ್ರಶಂಸಿಸಲಾಗಿದೆ.
‘ಜಮ್ಮು ಕಾಶ್ಮೀರದ ಪ್ರಾದೇಶಿಕ ಪಕ್ಷಗಳು ಸ್ಥಳೀಯರು ಸಿಟ್ಟಿಗೇಳುತ್ತಾರೆ ಎಂಬ ನೆಪ ಒಡ್ಡಿ ರಾಜ್ಯದಲ್ಲಿನ ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡನೆಯನ್ನು ವಿರೋಧಿಸುತ್ತಾ ಬಂದಿದ್ದವು. ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಅದರ ಗೃಹ ಸಚಿವರು ಜಮ್ಮು ಕಾಶ್ಮೀರ ವಿಷಯದಲ್ಲಿ ಸಂಪೂರ್ಣ ಶರಣಾಗತಿ ತೋರಿದ್ದರು. ಈಗ ಕಾಲ ಬದಲಾಗಿದೆ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರದ ವಿಷಯಗಳಿಗೆ ಆದ್ಯತೆ ನಿಡುತ್ತಿದ್ದಾರೆ; ಈಗಿನ ಕೇಂದ್ರ ಸರಕಾರ ಅನಗತ್ಯ ಮತ್ತು ನಿಷ್ಪ್ರಯೋಜಕ ಚರ್ಚೆಯಲ್ಲಿ ಕಾಲ ಹರಣ ಮಾಡದು’ ಎಂದು ಶಿವ ಸೇನೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!