ಏಕ ರಾಷ್ಟ್ರ -ಏಕ ಚುನಾವಣೆಗೆ ಶಿವಸೇನೆ ಭಿನ್ನರಾಗ


Team Udayavani, Jul 2, 2019, 9:54 AM IST

uddhav-thackeray

ಮುಂಬಯಿ: ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಭಾರತೀಯ ಜನತಾ ಪಕ್ಷದ ಪ್ರಸ್ತಾಪಕ್ಕೆ ಹಿನ್ನಡೆಯಾಗಿದೆ. ಬಿಜೆಪಿಯ ಮಿತ್ರಪಕ್ಷ ಶಿವಸೇನೆ ಅದರ ಅನುಷ್ಠಾನದ ಬಗ್ಗೆ ಅನುಮಾನಗಳೊಂದಿಗೆ ಎಲೆಕ್ಟ್ರಾನಿಕ್‌ ಮತದಾನ ಯಂತ್ರಗಳ (ಇವಿಎಂ) ಬಳಕೆ ಮತ್ತು ಮತದಾರ-ಪರಿಶೀಲಿಸಬಹುದಾದ ಪೇಪರ್‌ ಆಡಿಟ್‌ ಟ್ರಯಲ್‌ (ವಿವಿಪಿಎಟಿ) ವ್ಯವಸ್ಥೆಯ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸೇನಾ ಮುಖಂಡ ಮತ್ತು ರಾಜ್ಯಸಭಾ ಸಂಸದ ಸಂಜಯ್‌ ರಾವುತ್‌ ಅವರು ಈ ಯೋಜನೆಯನ್ನು ಅಸಾಧ್ಯ ಎಂದು ತಿಳಿಸಿದ್ದು, ಇದು ಪ್ರಾದೇಶಿಕ ಪಕ್ಷಗಳನ್ನು ಅನನುಕೂಲಕ್ಕೆ ತಳ್ಳುತ್ತದೆ ಎಂದು ಆಪಾದಿಸಿದ್ದಾರೆ. ಕಳೆದ ಜೂ. 19ರಂದು ಪ್ರಧಾನಿ ನರೇಂದ್ರ ಮೋದಿ ಅವರ ಏಕ ರಾಷ್ಟ್ರ-ಏಕ ಚುನಾವಣೆ ಯೋಜನೆಯ ಬಗ್ಗೆ ಒಮ್ಮತ ಮೂಡಿಸುವ ಪ್ರಯತ್ನದಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದರು. ಆದರೆ ಇದರಲ್ಲಿ ಸೇನಾ ಪ್ರತಿನಿಧಿಗಳು ಭಾಗವಹಿಸದಿರುವುದು ಕುತೂಹಲಕ್ಕೆಡೆಮಾಡಿತ್ತು.

ಪ್ರಧಾನಿಯವರ ಈ ಯೋಜನೆಯ ವಿಚಾರ ವಾಗಿ ಚರ್ಚಿಸಬೇಕು ಎಂದು ರಾವುತ್‌ ತಿಳಿಸಿ ದ್ದಾರೆ. ಬೃಹತ್‌ ದೇಶದಲ್ಲಿ ಸರಕಾರವನ್ನು ಒಂದು ಮತದಿಂದ ಕೆಳಗಿಳಿಸಲಾಗುತ್ತದೆ ಅಥವಾ ರಚಿಸಲಾಗುತ್ತದೆ. ಆಗ ಏಕ ರಾಷ್ಟ್ರ-ಏಕ ಚುನಾವಣೆ’ ಕಾರ್ಯಸಾಧ್ಯವಾಗಲಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಒಬ್ಬರು ಮೂರು ವರ್ಷಗಳ ಕಾಲ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತವನ್ನು ಹೊಂದಲು ಸಾಧ್ಯವಿಲ್ಲ. ಇದಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿವೆ. ಇದನ್ನು ಚರ್ಚಿಸಬೇಕಾಗಿದೆ. ಇದೀಗ ಅದು ಪ್ರಾಯೋಗಿಕವಾಗಿ ಅಸಮರ್ಥವಾಗಿದೆ ಎಂದು ರಾವುತ್‌ ತಿಳಿಸಿದ್ದಾರೆ.

ಏಕಕಾಲಿಕ ಮತದಾನ ವ್ಯವಸ್ಥೆಯು ರಾಷ್ಟ್ರೀಯ ಪಕ್ಷಗಳಿಗೆ ಪ್ರಯೋಜನವನ್ನು ನೀಡುತ್ತದೆ, ಆದರೆ ಶಿವಸೇನೆಯಂತಹ ಪ್ರಾದೇಶಿಕ ಪಕ್ಷಗಳು ತೊಂದರೆ ಅನುಭವಿಸುತ್ತವೆ ಮತ್ತು ರಾಜ್ಯದ ಸಮಸ್ಯೆಗಳು ದುರ್ಬಲಗೊಳ್ಳುತ್ತವೆ ಎಂದು ಶಿವಸೇನೆಯ ನಾಯಕರು ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸೇನೆಯ ಗುಂಪಿನ ಮುಖಂಡ ವಿನಾಯಕ ರಾವುತ್‌ ಅವರು, ಈ ಯೋಜನೆಯ ಬಗ್ಗೆ ಕೇಂದ್ರ ಸರಕಾರಕ್ಕೆ ಪಕ್ಷದ ಅಂತಿಮ ಅಭಿಪ್ರಾಯವನ್ನು ಇನ್ನೂ ಸಲ್ಲಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಮತ್ತು ಕೇಂದ್ರ ಚುನಾವಣೆಗಳು ಏಕಕಾಲದಲ್ಲಿ ನಡೆದಾಗ, ರಾಷ್ಟ್ರೀಯ ವಿಷಯಗಳ ಮೇಲೆ ಚುನಾವಣೆಗಳು ನಡೆಯುತ್ತವೆ. ಅಂತಹ ಸಂದರ್ಭದಲ್ಲಿ, ಪ್ರಾದೇಶಿಕ ಪಕ್ಷಗಳು ದುರ್ಬಲವಾಗುತ್ತವೆ. ನಾವು ಎಲ್ಲಾ ಸಮಸ್ಯೆಗಳು ಮತ್ತು ಕಳವಳಗಳನ್ನು ಸಮಿತಿಯ ಮುಂದೆ ಇಡಲಿದ್ದೇವೆ ಎಂದು ಸೇನಾ ಮುಖಂಡ ಸಂಜಯ್‌ ರಾವುತ್‌ ತಿಳಿಸಿದ್ದಾರೆ. ಏಕಕಾಲದಲ್ಲಿ ಮತದಾನ ಜಾರಿಗೆ ಬರಬೇಕಾದರೆ ಇವಿಎಂ ಮತ್ತು ವಿವಿಪಿಎಟಿಗಳು ನ್ಯಾಯ ಸಮ್ಮತವಾಗಿರಬೇಕು. ಇವಿಎಂಗಳು ಮತ್ತು ವಿವಿಪಿಎಟಿಗಳಲ್ಲಿ ಬಹಳಷ್ಟು ಪ್ರಶ್ನೆಗಳಿವೆ. ಆದ್ದರಿಂದ ಈ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ಮತ್ತು ಸುಧಾರಣೆಯನ್ನು ಮಾಡುವುದು ನಮ್ಮ ಬೇಡಿಕೆಯಾಗಿದೆ.

ಹಿಂದಿನ ಚುನಾವಣೆಗಳಲ್ಲಿ, ಶೇ. 100 ರಷ್ಟು ಮತದಾನ ಇವಿಎಂ ಮತ್ತು ವಿವಿಪಿಎಟಿಗಳಲ್ಲಿ ನಡೆದಿತ್ತು. ಆದರೆ ವಿವಿಪಿಎಟಿಗಳೊಂದಿಗೂ ಜನರು ಅನುಮಾನಗಳನ್ನು ಹುಟ್ಟುಹಾಕುತ್ತಿದ್ದಾ ರೆ. ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಬಳಸುವುದ ರಿಂದ ಯಾವುದೇ ಹಾನಿ ಇಲ್ಲ. ಮತ ಪತ್ರವು ಅತ್ಯುತ್ತಮ ಮತದಾನ ವ್ಯವಸ್ಥೆಯಾಗಿದ್ದು, ಮತದಾರರು ತಾವು ಯಾರಿಗೆ ಮತ ಹಾಕಿದ್ದೇವೆ ಎಂಬ ಭರವಸೆಯನ್ನು ಹೊಂದಿರುತ್ತಾರೆ ಎಂದು ರಾವುತ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.