ರಾಜ್ ಠಾಕ್ರೆಯಿಂದ ಹತಾಶೆಯ ಹೇಳಿಕೆ: ಸಂಜಯ್ ರಾವುತ್ ಟೀಕೆ
Team Udayavani, May 22, 2022, 6:23 PM IST
ಮುಂಬಯಿ: ಪಕ್ಷದ ಕಾರ್ಯಕರ್ತರನ್ನು ಕಾನೂನಿನ ಕುಣಿಕೆಯೊಳಗೆ ಸಿಲುಕಿಸಲು ಸಂಚು ರೂಪಿಸಲಾಗಿರುವುದರಿಂದ ತಮ್ಮ ಅಯೋಧ್ಯಾ ಭೇಟಿಯನ್ನು ಮುಂದೂಡಿರುವುದಾಗಿ ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ನೀಡಿರುವ ಹೇಳಿಕೆಯನ್ನು ಟೀಕಿಸಿರುವ ಶಿವಸೇನಾ ವಕ್ತಾರ ಸಂಜಯ್ ರಾವುತ್ ಅವರು ಇದೊಂದು ಹತಾಶೆಯಿಂದ ಕೂಡಿದ ಹೇಳಿಕೆ ಎಂದು ಮೂದಲಿಸಿದ್ದಾರೆ.
ರಾಜ್ ಠಾಕ್ರೆ ಹೇಳಿಕೆ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಂಜಯ್ ರಾವುತ್, ನಿಮ್ಮ ಅಯೋಧ್ಯಾ ಭೇಟಿಯನ್ನು ಯಾರು ತಡೆಯಲು ಸಾಧ್ಯ?, ಇದರ ಹಿಂದೆ ಇರುವ ಷಡ್ಯಂತ್ರವಾದರೂ ಏನು ಎಂದು ರಾಜ್ ಠಾಕ್ರೆ ಅವರನ್ನು ಪ್ರಶ್ನಿಸಿದರು.
ರಾಜ್ ಠಾಕ್ರೆ ಅವರದು ಅಯೋಧ್ಯಾ ಭೇಟಿ ಬಿಜೆಪಿ ಪ್ರಾಯೋಜಿತವಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರವಿದೆ. ಅಲ್ಲಿನ ಓರ್ವ ಬಿಜೆಪಿ ಸಂಸದರಿಂದ ರಾಜ್ ಠಾಕ್ರೆ ಅವರ ಭೇಟಿಗೆ ವಿರೋಧ ವ್ಯಕ್ತವಾಗಿದೆ.
ಆದರೆ ಈ ವಿರೋಧಕ್ಕೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲವಾಗಿದ್ದು ಅಯೋಧ್ಯೆಗೆ ಭೇಟಿ ನೀಡಿ. ಯಾರು ನಿಮ್ಮನ್ನು ತಡೆಯುತ್ತಾರೆ ಎಂದು ರಾವುತ್ ಪ್ರಶ್ನಿಸಿದರು.
ರಾಜ್ ಠಾಕ್ರೆ ಅವರ ಈ ಎಲ್ಲ ಹೇಳಿಕೆಗಳು ಕೇವಲ ಹತಾಶೆಯ ಮಾತುಗಳಾಗಿವೆ. ಇದಕ್ಕಾಗಿ ರಾಜ್ ಅವರು ಕೌನ್ಸೆಲಿಂಗ್ ಮತ್ತು ಚಿಕಿತ್ಸೆ ಪಡೆಯುವ ಅಗತ್ಯವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್ ಅಭಿಷೇಕ ಮಾಡಿದ ಯುವಕರು!
ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ
ಹೊಸ ಕಾರುಗಳಿಗೆ ಇನ್ನು ದೇಶದಲ್ಲೇ ಕ್ರ್ಯಾಶ್ ಟೆಸ್ಟ್: ಏನಿದು ಕಾರ್ ಕ್ರ್ಯಾಶ್ ಟೆಸ್ಟ್?
ವಾಹನ ನಿಲುಗಡೆಗೆ ಜಾಗವಿಲ್ಲವಾ? ಡಾಬಾಗಳು ಬಂದ್!
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್