ರಾಜ್ಯಸಭಾ ಚುನಾವಣೆ: ಶಿವಸೇನೆಗೆ ಅಡ್ಡ ಮತದಾನ ಭೀತಿ
ನಾವು ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದೇವೆ ಎನ್ನುವುದನ್ನು ಬಿಜೆಪಿ ಮರೆಯಬಾರದು: ರಾವುತ್
Team Udayavani, Jun 4, 2022, 3:26 PM IST
ಮುಂಬೈ: ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನ, ಶಿವಸೇನೆಯು ತನ್ನ ಶಾಸಕರನ್ನು ಮುಂಬೈಗೆ ಕರೆಸಿದ್ದು, ಅಡ್ಡಮತದಾನದ ಸಾಧ್ಯತೆಗಳನ್ನು ತಪ್ಪಿಸಲು ಹೋಟೆಲ್ನಲ್ಲಿ ಇರಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿದೆ.
ಮಹಾರಾಷ್ಟ್ರದಿಂದ ಆರು ಮೇಲ್ಮನೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಏಳು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಶುಕ್ರವಾರ ಯಾವುದೇ ಅಭ್ಯರ್ಥಿ ಹಿಂದೆ ಸರಿಯದೇ ಇರುವುದರಿಂದ ಸ್ಪರ್ಧೆ ಸನ್ನಿಹಿತವಾಗಿದೆ.
ಚುನಾವಣೆಯ ಮೊದಲು ಶಾಸಕರನ್ನು ಕರೆಯುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಶಿವಸೇನೆ ನಾಯಕ ಅನಿಲ್ ದೇಸಾಯಿ ಹೇಳಿದ್ದಾರೆ.
ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕೇಂದ್ರ ಸಚಿವ ಪಿಯೂಷ್ ಗೋಯಲ್, ಅನಿಲ್ ಬೋಂಡೆ ಮತ್ತು ಧನಂಜಯ್ ಮಹಾದಿಕ್. ಎನ್ಸಿಪಿ ಪ್ರಫುಲ್ ಪಟೇಲ್ ಹೆಸರನ್ನು ಮರುನಾಮಕರಣ ಮಾಡಿದೆ. ಶಿವಸೇನೆಯು ಸಂಜಯ್ ರಾವುತ್ ಮತ್ತು ಸಂಜಯ್ ಪವಾರ್ ಅವರನ್ನು ಕಣಕ್ಕಿಳಿಸಿದೆ. ಇಮ್ರಾನ್ ಪ್ರತಾಪಗಢ ಕಾಂಗ್ರೆಸ್ ಉಮೇದುವಾರರಾಗಿದ್ದಾರೆ.
ಯಾವುದೇ ಕುದುರೆ ವ್ಯಾಪಾರ ನಡೆಯದಂತೆ ರಾಜ್ಯಸಭಾ ಚುನಾವಣೆಯ ದಿನಾಂಕಗಳನ್ನು ಮುಂದೂಡಲು ನಾವು ಬಯಸಿದ್ದೇವೆ. ವಾತಾವರಣ ಹಾಳು ಮಾಡಲು ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲು ಬಿಜೆಪಿಯ ಉದ್ದೇಶ ಸ್ಪಷ್ಟವಾಗಿದೆ. ನಾವು ಇಲ್ಲಿ ಅಧಿಕಾರದಲ್ಲಿದ್ದೇವೆ, ಎನ್ನುವುದನ್ನು ಮರೆಯಬಾರದು ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ