ನಾವೇ ರಿಮೋಟ್‌ ಕಂಟ್ರೋಲ್‌: ಸಮಾನ ಅಧಿಕಾರಕ್ಕಾಗಿ ಶಿವಸೇನೆ ಆಗ್ರಹ


Team Udayavani, Oct 28, 2019, 7:50 AM IST

aditya

ಮುಂಬಯಿ: ಮಹಾರಾಷ್ಟ್ರ ವಿಧಾನ ಸಭೆಯ ರಿಮೋಟ್‌ ಕಂಟ್ರೋಲ್‌ ನಮ್ಮ ಕೈಯಲ್ಲಿದೆ. ಆದುದರಿಂದ ನಮ್ಮ ಮಾತಿಗೂ ಮಾನ್ಯತೆ ಇರಲೇಬೇಕು ಎಂದು ಶಿವಸೇನೆ ಹೇಳಿದೆ.

2014ಕ್ಕೆ ಹೋಲಿಸಿದರೆ 2019ರ ವಿಧಾನಸಭಾ ಚುನಾ ವಣೆಯಲ್ಲಿ ಪಕ್ಷವು ಕಡಿಮೆ ಸ್ಥಾನಗಳನ್ನು ಪಡೆದಿದ್ದರೂ ಈಗ ಮಹಾರಾಷ್ಟ್ರದಲ್ಲಿ ಅಧಿಕಾರದ ರಿಮೋಟ್‌ ಕಂಟ್ರೋಲ್‌ ಅನ್ನು ಹೊಂದಿದೆ ಎಂದು ಶಿವಸೇನೆ ಹೇಳಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗಿಂತ ಕಡಿಮೆ ಸಾಧನೆ ತೋರಿದ ಅನಂತರ ಉಭಯ ಮಿತ್ರಪಕ್ಷಗಳು ಸರಕಾರ ರಚನೆಯ ವಿಷಯ ದಲ್ಲಿನ ಮಾತುಕತೆ ನಿರೀಕ್ಷಿಸಿದಷ್ಟು ಸರಾಗವಾಗಿ ನಡೆಯುತ್ತಿಲ್ಲ. ಬಿಜೆಪಿ 2014ರಲ್ಲಿ 122 ಸ್ಥಾನ ಪಡೆದಿದ್ದರೆ, ಈ ಬಾರಿ 105 ಸ್ಥಾನಗಳನ್ನಷ್ಟೇ ಪಡೆಯಲು ಶಕ್ತವಾಗಿದೆ.

50-50ರ ಅಧಿಕಾರ ಹಂಚಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಲಿಖೀತ ಭರವಸೆ ನೀಡಬೇಕು ಮತ್ತು ಮುಖ್ಯಮಂತ್ರಿ  ಹುದ್ದೆಯನ್ನು ಅರ್ಧ ಅವಧಿಗೆ ಉದ್ಧವ್‌ ಠಾಕ್ರೆ ಪುತ್ರ, ಯುವ ನಾಯಕ ಆದಿತ್ಯ ಠಾಕ್ರೆ ಅವರಿಗೆ ಬಿಟ್ಟು ಕೊಡಬೇಕೆಂದು ಶಿವಸೇನೆ ಆಗ್ರಹಿಸಿದೆ.

ಶಿವಸೇನೆ ಈ ಬಾರಿ ಕಡಿಮೆ ಸ್ಥಾನಗಳನ್ನು ಗೆದ್ದಿದೆ ಯಾದರೂ ಅಧಿಕಾರದ ರಿಮೋಟ್‌ ಕಂಟ್ರೋಲ್‌ ಅನ್ನು ತನ್ನ ಬಳಿ ಹೊಂದಿದೆ ಎಂದು ಶಿವಸೇನೆ ಮುಖವಾಣಿ “ಸಾಮ್ನಾ’ದಲ್ಲಿನ “ರೋಖ್‌ಟೋಕ್‌’ ಎಂಬ ಅಂಕಣದಲ್ಲಿ ಸಂಜಯ್‌ ರಾವುತ್‌ ಅವರು ಹೇಳಿದ್ದಾರೆ.

ಶಿವಸೇನೆಯನ್ನು ಬಿಜೆಪಿಯ ಹಿಂದೆ ಇರಿಸುವ ಕನಸು ಭಗ್ನವಾಗಿದೆ. ಕೈಯಲ್ಲಿ ಕಮಲವನ್ನು (ಬಿಜೆಪಿಯ ಚಿಹ್ನೆ) ಹಿಡಿದಿಟ್ಟುಕೊಂಡಿರುವ ಹುಲಿಯನ್ನು (ಶಿವಸೇನೆಯ ಗುರುತು) ತೋರಿಸುವ ವ್ಯಂಗ್ಯಚಿತ್ರವು ಪ್ರಸ್ತುತ ಸನ್ನಿವೇಶದ ಬಗ್ಗೆ ಬಹಳಷ್ಟು ಹೇಳುತ್ತದೆ. ಪ್ರಸ್ತುತ ಜನಾದೇಶವು ಯಾರನ್ನೂ ಲಘುವಾಗಿ ತೆಗೆದುಕೊಳ್ಳಬಾರದು ಎಂಬ ಸಂದೇಶವನ್ನು ನೀಡಿದೆ ಎಂದು ಶಿವಸೇನೆ ಸಂಸದ ರಾವುತ್‌ ತಮ್ಮ ಅಂಕಣದಲ್ಲಿ ಉಲ್ಲೇಖೀಸಿದ್ದಾರೆ. ರಾವುತ್‌ ಸಾಮ್ನಾದ ಕಾರ್ಯನಿರ್ವಾಹಕ ಸಂಪಾದಕ ಮತ್ತು ಸಂಸತ್ತಿನಲ್ಲಿ ಪಕ್ಷದ ಮುಖ್ಯ ವಿಪ್‌ ಕೂಡ ಆಗಿದ್ದಾರೆ.

ಈ ಚುನಾವಣ ಫಲಿತಾಂಶವು ಕಾಂಗ್ರೆಸ್‌-ಎನ್‌ಸಿಪಿಯ ಪ್ರಮುಖ ನಾಯಕರಿಗೆ ಆಮಿಷವೊಡ್ಡುವ ಮೂಲಕ ಅಥವಾ ಬೆದರಿಕೆ ಹಾಕುವ ಮೂಲಕ ಅವರನ್ನು° ಪಕ್ಷಕ್ಕೆ ಸೇರಿಸಿಕೊಂಡು ಸಂಖ್ಯಾಬಲ ವನ್ನು ಹೆಚ್ಚಿಸುವ ಅನೈತಿಕ ಆಲೋಚನೆಗಳ ಸೋಲು ಆಗಿದೆ ಎಂದಿದ್ದಾರೆ.

ನಾಲ್ವರು ಪಕ್ಷೇತರರು ಶಿವಸೇನೆಗೆ ಬೆಂಬಲ
ವಿಧಾನಸಭಾ ಚುನಾವಣೆ ಫಲಿತಾಂಶದ ವೇಳೆ 56 ಶಾಸಕರ ಸಂಖ್ಯಾಬಲವನ್ನು ಹೊಂದಿದ ಶಿವಸೇನೆಯು ಪಕ್ಷೇತರ ಶಾಸಕರ ಬೆಂಬಲದಿಂದ ತನ್ನ ಬಲವನ್ನು ಹೆಚ್ಚಿಸಿದೆ. ಇಲ್ಲಿಯ ತನಕ ನಾಲ್ವರು ಪಕ್ಷೇತರ ಶಾಸಕರು ಶಿವಸೇನೆಗೆ ಬೆಂಬಲ ಘೋಷಿಸುವ ಮೂಲಕ ಈ ಸಂಖ್ಯಾಬಲ 60ಕ್ಕೆ ತಲುಪಿದೆ.

ಪ್ರಹಾರ್‌ ಜನಶಕ್ತಿ ಪಕ್ಷವು ಶಿವಸೇನೆಯನ್ನು ಬೆಂಬಲಿಸಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನೂ ಭೇಟಿಯಾದ ಪ್ರಹಾರ್‌ ಜನಶಕ್ತಿಯ ಇಬ್ಬರು ಶಾಸಕರು ಶಿವಸೇನೆ ಬೆಂಬಲಿಸಿದ್ದಾರೆ. ಶಿವಸೇನೆ ನಾಯಕ ಏಕನಾಥ ಶಿಂಧೆ ಅವರ ಉಪಸ್ಥಿತಿಯಲ್ಲಿ ಶಾಸಕ ಬಚ್ಚು ಕಡೂ ಹಾಗೂ ಶಾಸಕ ರಾಜ್‌ಕುಮಾರ್‌ ಪಟೇಲ್‌ ಅವರು ಉದ್ಧವ್‌ ಠಾಕ್ರೆ ಅವರನ್ನು ಭೇಟಿಯಾಗಿ ಬೆಂಬಲವನ್ನು ಘೋಷಿಸಿದ್ದಾರೆ.

ವಿಧಾನಸಭಾ ಚುನಾವಣೆಯ ಫಲಿತಾಂಶದ ಅನಂತರ ರಾಮ್‌ಟೇಕ್‌ ವಿಧಾನಸಭಾ ಕ್ಷೇತ್ರ ದಿಂದ ಪಕ್ಷೇತರ ಶಾಸಕ ಆಶಿಶ್‌ ಜೈಸ್ವಾಲ್‌ ಮತ್ತು ಭಂಡಾರದ ಪಕ್ಷೇತರ ಶಾಸಕ ನರೇಂದ್ರ ಗೊಂಡೇಕರ್‌ ಅವರು ಈಗಾಗಲೇ ಶಿವಸೇನೆಗೆ ತಮ್ಮ ಬೆಂಬಲವನ್ನು ಘೋಷಿಸಿದ್ದರು. ಪ್ರಸಕ್ತ ಪ್ರಹಾರ್‌ ಜನಶಕ್ತಿಯ ಇಬ್ಬರು ಶಾಸಕರು ಶಿವಸೇನೆಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಆದ್ದರಿಂದ ಶಿವಸೇನೆಯ ಶಾಸಕರ ಸಂಖ್ಯಾಬಲ 60ಕ್ಕೆ ತಲುಪಿದೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.