ಜೂ. 6: ರಾಯಗಢ್‌ ಕೋಟೆಯಲ್ಲಿ ಶಿವಾಜಿ ಪಟ್ಟಾಭಿಷೇಕ ವಾರ್ಷಿಕೋತ್ಸವ

5 ರಾಷ್ಟ್ರಗಳ ರಾಜತಾಂತ್ರಿಕರ ಆಗಮನ, ನಾಲ್ಕು ಲಕ್ಷ ಜನರು ಸಭೆ ಸೇರುವ ನಿರೀಕ್ಷೆ

Team Udayavani, Jun 4, 2019, 12:30 PM IST

5

ಮುಂಬಯಿ: ಜೂನ್‌ 6 ರಂದು ಮಹಾರಾಷ್ಟ್ರದ ಐತಿಹಾಸಿಕ ರಾಯಗಢ್‌ ಕೋಟೆಯಲ್ಲಿ ಮರಾಠ ವೀರ ಯೋಧಛತ್ರಪತಿ ಶಿವಾಜಿ ಮಹಾರಾಜ್‌ ಅವರ ಪಟ್ಟಾಭಿಷೇಕ ಸಮಾರಂಭದ ವಾರ್ಷಿಕೋತ್ಸವವನ್ನು ಆಚರಿಸಲು ಸುಮಾರು ನಾಲ್ಕು ಲಕ್ಷ ಜನರು ಸಭೆ ಸೇರುವ ನಿರೀಕ್ಷೆಯಿದೆ ಎಂದು ಕಾರ್ಯಕ್ರಮದ ಆಯೋಜಕರು ಹೇಳಿದ್ದಾರೆ.

ರಾಯಗಢ ಕೋಟೆಯು ಛತ್ರಪತಿ ಶಿವಾಜಿ ಮಹಾರಾಜ್‌ ಅವರ ಸಾಮ್ರಾಜ್ಯದ ರಾಜಧಾನಿಯಾಗಿತ್ತು. 1674ರ ಜೂನ್‌ 6ರಂದು ಈ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್‌ ಅವರ ಪಟ್ಟಾಭಿಷೇಕ ಮಾಡಲಾಯಿತು ಮತ್ತು ಅನಂತರ ಇಲ್ಲಿಂದ ಅವರು ಮರಾಠ ಸಾಮ್ರಾಜ್ಯವನ್ನು ಸ್ಥಾಪಿಸಿದ್ದರು.

ಶಿವಾಜಿ ಮಹಾರಾಜ್‌ ಅವರ ಪಟ್ಟಾಭಿಷೇಕದ ವಾರ್ಷಿಕೋತ್ಸವದ ಪ್ರಯುಕ್ತ ಜರಗಲಿರುವ ‘ರಾಯಗಢ್‌ ಶಿವರಾಜ್ಯಾಭಿಷೇಕ್‌ -2019’ ಸಮಾರಂಭದ ಸಂದರ್ಭದಲ್ಲಿ ಮುಂಬಯಿಯಿಂದ ಸುಮಾರು 170 ಕಿ.ಮೀ ದೂರದಲ್ಲಿರುವ ರಾಯಗಢ್‌ ಜಿಲ್ಲೆಯ ರಾಯಗಢ್‌ ಕೋಟೆಯಲ್ಲಿ ಜೂನ್‌ 5 ಮತ್ತು 6ರಂದು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಜೂ.5ರಂದು ವಿಶ್ವ ಪರಿಸರ ದಿನ ಬರುತ್ತದೆ ಮತ್ತು ಜೂ. 6ರಂದು ಶಿವಾಜಿ ಮಹಾರಾಜ್‌ ಅವರ ಪಟ್ಟಾಭಿಷೇಕದ ವಾರ್ಷಿಕೋತ್ಸವ. ಈ ಹಿನ್ನೆಲೆಯಲ್ಲಿ ನಾವು ಕೋಟೆಗಳು ಮತ್ತು ಅವುಗಳ ಸಂರಕ್ಷಣೆ, ಪರಂಪರೆ, ಇತಿಹಾಸ ಹಾಗೂ ಪರಿಸರಕ್ಕೆ ಸಂಬಂಧಿಸಿರುವ ವಿವಿಧ ವಿಷಯಗಳನ್ನು ಸೇರಿಸಿಕೊಂಡು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಕೊಲ್ಲಾಪುರದ ರಾಜ ಮನೆತನದವರಾದ ಮತ್ತು ಛತ್ರಪತಿ ಶಿವಾಜಿ ಮಹಾರಾಜ್‌ ಅವರ 13ನೇ ನೇರ ವಂಶಸ್ಥನಾದ ಸಂಭಾಜಿರಾಜೇ ಛತ್ರಪತಿ ಅವರು ಹೇಳಿದ್ದಾರೆ. ಛತ್ರಪತಿ ಪ್ರಸ್ತುತ ರಾಯಗಢ ಡೆವಲಪೆ¾ಂಟ್‌ ಅಥಾರಿಟಿಯ (ಆರ್ಡಿಎ) ಕಾರ್ಯಾಧ್ಯಕ್ಷ ಮತ್ತು ರಾಷ್ಟ್ರಪತಿ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರಾಗಿದ್ದಾರೆ.

5 ರಾಷ್ಟ್ರಗಳ ರಾಜತಾಂತ್ರಿಕರ ಆಗಮನ ಶಿವಾಜಿ ಮಹಾರಾಜ್‌ ಅವರ ಪಟ್ಟಾಭಿಷೇಕ ಮಾಡುವಾಗ ಬ್ರಿಟಿಷಿಗ ಹೆನ್ರಿ ಆಕ್ಸೆನೆxನ್‌ ಅವರು ಉಪಸ್ಥಿತರಿದ್ದರು. ಈ ವರ್ಷ ನಾವು ಐದು ರಾಷ್ಟ್ರಗಳ ರಾಜತಾಂತ್ರಿಕರನ್ನು ಹೊಂದಲಿದ್ದೇವೆ ಎಂದು ಸಂಭಾಜಿರಾಜೇ ಛತ್ರಪತಿ ಅವರು ತಿಳಿಸಿದ್ದಾರೆ. ಅವರ ಪ್ರಕಾರ, ಚೀನಾ, ಪೋಲ್ಯಾಂಡ್‌ ಗ್ರೀಸ್‌, ಬಲ್ಗೇರಿಯಾ ಮತ್ತು ಟ್ಯುನೀಷಿಯಾದ ರಾಯಭಾರಿಗಳು ಗುರುವಾರದ ಕಾರ್ಯಕ್ರಮದಲ್ಲಿ ಹಾಜರಾಗಲಿದ್ದಾರೆ.

ಬುಧವಾರದಿಂದ ಜನರು ಕೋಟೆಯ ಸುತ್ತಲೂ ಜಮಾಯಿಸಲು ಪ್ರಾರಂಭಿಸಲಿದ್ದಾರೆ. ಅಂದು ಸರಪಂಚ್‌ಗಳು (ಗ್ರಾಮ ಮುಖ್ಯಸ್ಥರು) ಮತ್ತು ಕೋಟೆಯ ಸುತ್ತಲಿನ 21 ಗ್ರಾಮಗಳ ಜನರ ಉಪಸ್ಥಿತಿಯಲ್ಲಿ ಪೂಜೆಯೊಂದನ್ನು ನಡೆಸಲಾಗುವುದು ಎಂದವರು ಹೇಳಿದ್ದಾರೆ.

ಶಿವಾಜಿ ಯುಗದ ಸಮರ ಕಲೆಗಳ ಪ್ರದರ್ಶನ ಮತ್ತು ರಾಯಗಢ್‌ ಕೋಟೆಯಲ್ಲಿ ಐತಿಹಾಸಿಕ ವಸ್ತುಗಳ ಪ್ರದರ್ಶನ ನಡೆಯಲಿದೆ. ಇದರ ಜತೆಗೆ, ಆರ್‌ಡಿಎ ಕೈಗೊಂಡ ವಿವಿಧ ಕಾರ್ಯಗಳ ಬಗ್ಗೆ ಪ್ರಸ್ತುತಿಯನ್ನು ನೀಡಲಾಗುವುದು. ಅನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಛತ್ರಪತಿ ಅವರು ತಿಳಿಸಿದ್ದಾರೆ.

ಗುರುವಾರದಂದು ಶಿವಾಜಿ ಮಹಾರಾಜ್‌ ಅವರ ಪಲ್ಲಕ್ಕಿಯ ಆಗಮನದ ಅನಂತರ ಧ್ವಜಾರೋಹಣ ನಡೆಯಲಿದೆ ಎಂದವರು ಹೇಳಿದ್ದಾರೆ. ಶಿವಾಜಿ ಮಹಾರಾಜ್‌ ಅವರ ವಂಶಸ್ಥರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.