ಮೂತ್ರ ವಿಸರ್ಜನೆ ಘಟನೆ: ಬುಡಕಟ್ಟು ಕಾರ್ಮಿಕನ ಪಾದಪೂಜೆ ಮಾಡಿದ ಮಧ್ಯಪ್ರದೇಶ ಸಿಎಂ ಚೌಹಾಣ್
Team Udayavani, Jul 6, 2023, 11:43 AM IST
ಭೋಪಾಲ್: ಬುಡಕಟ್ಟು ಸಮುದಾಯದ ಕಾರ್ಮಿಕರೊಬ್ಬರ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸಿದ ಘಟನೆ ಮಧ್ಯಪ್ರದೇಶದಲ್ಲಿ ದೊಡ್ಡ ಸುದ್ದಿ ಮಾಡಿತ್ತು. ಇದೀಗ ಆ ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕರೆದು ಪಾದಪೂಜೆ ಮಾಡಿದ್ದಾರೆ.
ಬುಡಕಟ್ಟು ಸಮಾಜದ ಕಾರ್ಮಿಕ ದಶ್ಮೇಶ್ ರಾವತ್ ಅವರನ್ನು ಇಂದು ಸಿಎಂ ಚೌಹಾಣ್ ತಮ್ಮ ನಿವಾಸಕ್ಕೆ ಕರೆಸಿದ್ದಾರೆ. ಬಳಿಕ ಆತನ ಪಾದಪೂಜೆ ಮಾಡಿ ಸನ್ಮಾನಿಸಿದ್ದಾರೆ. ‘ನಿಮ್ಮ ವಿಡಿಯೋ ನೋಡಿ ನನಗೆ ಬೇಸರವಾಯಿತು. ನಾನು ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ, ನಿಮ್ಮಂತಹ ಜನರು ನನಗೆ ದೇವರಂತೆ’ ಎಂದರು.
ಬಳಿಕ ದಶ್ಮೇಶ್ ರಾವತ್ ನನ್ನು ಪಕ್ಕದ ಸ್ಮಾರ್ಟ್ ಸಿಟಿ ಪಾರ್ಕ್ ಗೆ ಕರೆದುಕೊಂಡು ಹೋದ ಸಿಎಂ ಚೌಹಾಣ್, ಅಲ್ಲಿ ಗಿಡವೊಂದನ್ನು ನೆಟ್ಟರು.
#WATCH | Madhya Pradesh Chief Minister Shivraj Singh Chouhan meets Dashmat Rawat and washes his feet at CM House in Bhopal. In a viral video from Sidhi, accused Pravesh Shukla was seen urinating on Rawat.
CM tells him, “…I was pained to see that video. I apologise to you.… pic.twitter.com/5il2c3QATP
— ANI (@ANI) July 6, 2023
ಸಿಧಿ ಜಿಲ್ಲೆಯಲ್ಲಿ ಪ್ರವೇಶ್ ಶುಕ್ಲಾ ಎಂಬಾತ ದಶ್ಮೇಶ್ ರಾವತ್ ಎಂಬ ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿ ಅದನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದ. ಇದು ವೈರಲ್ ಆಗಿತ್ತು. ಪ್ರವೇಶ ಶುಕ್ಲಾನನ್ನು ಮಂಗಳವಾರ ತಡರಾತ್ರಿ ಬಂಧಿಸಲಾಯಿತು.
ಘಟನೆಯ ನಂತರ ಮಧ್ಯಪ್ರದೇಶ ಸರ್ಕಾರವು ಬುಧವಾರ ಆರೋಪಿಯ ಒಡೆತನದ ಆಸ್ತಿಯ ಭಾಗಗಳನ್ನು ನೆಲಸಮಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್