ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಗೆ ‘ಅವಿರೋಧ ವಿಶ್ವಾಸ’
Team Udayavani, Mar 25, 2020, 1:23 AM IST
ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ರಾತ್ರಿ ಪ್ರಮಾಣವಚನ ಸ್ವೀಕರಿಸಿದ ಶಿವರಾಜ್ ಸಿಂಗ್ ಚೌಹಾಣ್, ಮಂಗಳವಾರ ಸದನದಲ್ಲಿ ತಮ್ಮ ಸರಕಾರದ ವಿಶ್ವಾಸಮತ ಸಾಬೀತುಪಡಿಸಿದ್ದಾರೆ.
ಮಂಗಳವಾರ ಬೆಳಗ್ಗೆ 11 ಗಂಟೆಗೆ ಸದನ ಶುರುವಾದಾಗ ಬಿಜೆಪಿಯ ಸದಸ್ಯರನ್ನು ಹೊರತು ಪಡಿಸಿ, ಪ್ರಮುಖ ವಿಪಕ್ಷ ಕಾಂಗ್ರೆಸ್ ಮತ್ತು ಇಬ್ಬರು ಪಕ್ಷೇತರ ಶಾಸಕರು ಕಲಾಪದಲ್ಲಿ ಭಾಗವಹಿಸಿರಲಿಲ್ಲ. ಸಭಾಧ್ಯಕ್ಷರ ಸ್ಥಾನದಲ್ಲಿದ್ದ ಬಿಜೆಪಿಯ ಹಿರಿಯ ನಾಯಕ ಜಗದೀಶ್ ದೇವ್ಡಾ, ಧ್ವನಿಮತದ ಮೂಲಕ ವಿಶ್ವಾಸಮತ ಪಡೆಯಲು ಮುಂದಾದರು.
ಆಗ ಮಾತನಾಡಿದ ಚೌಹಾಣ್, ಒಂದೇ ಸಾಲಿನಲ್ಲಿ ವಿಶ್ವಾಸಮತ ಯಾಚನೆ ಮಾಡಿದರು. ಇದಕ್ಕೆ ಸದನದಲ್ಲಿ ಹಾಜರಿದ್ದ ಎಲ್ಲ 107 ಬಿಜೆಪಿ ಸದಸ್ಯರು, ಬೆಂಬಲ ವ್ಯಕ್ತಪಡಿಸಿದರು. ಬಿಎಸ್ಪಿಯ ಇಬ್ಬರು ಶಾಸಕರು, ಇಬ್ಬರು ಪಕ್ಷೇತರ ಶಾಸಕರು, ಒಬ್ಬ ಎಸ್ಪಿ ಶಾಸಕ ಕೂಡ ಚೌಹಾಣ್ ಸರಕಾರಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಹೀಗಾಗಿ ಚೌಹಾನ್ ಅವರು ಅವಿರೋಧವಾಗಿ ವಿಶ್ವಾಸ ಮತ ಗಳಿಸಿದರು. ವಿಶ್ವಾಸಮತ ಪ್ರಕ್ರಿಯೆ ಮುಗಿದ ಮೇಲೆ, ಹಂಗಾಮಿ ಸ್ಪೀಕರ್ ದೇವ್ಡಾ ಅವರು ಮಾ. 27ರ ಬೆಳಗ್ಗೆ 11ರವರೆಗೆ ಸದನದ ಕಲಾಪವನ್ನು ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್