UPಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಮಿತಿಮೀರುತ್ತಿದೆ : ಯೋಗಿಗೆ ಚಾಟಿ ಬೀಸಿದ ನುಸ್ರತ್..!

ಮಹಿಳಾ ಸುರಕ್ಷತೆಗಿಂತ ಬಂಗಾಳದ ಚುನಾವಣೆಯೇ ತುಂಬಾ ಮುಖ್ಯವಾಗಿದೆಯಾ ಬಿಜೆಪಿಗೆ ..? : ನುಸ್ರತ್

Team Udayavani, Mar 3, 2021, 2:14 PM IST

Shocking”: Nusrat Jahan’s Attack As Yogi Adityanath Campaigns In Bengal

ಕೊಲ್ಕತ್ತಾ/ ನವ ದೆಹಲಿ : ತೃಣ ಮೂಲ ಕಾಂಗ್ರೆಸ್ ನ ಸಂಸದೆ ನುಸ್ರತ್ ಜಹಾನ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಸಂಭವಿಸುತ್ತಿರುವ ಹಿಂಸಾತಕ ಅಪರಾಧಗಳನ್ನು ಉಲ್ಲೇಖಿಸಿ ಯೋಗಿ ವಿರುದ್ಧ ನುಸ್ರತ್ ದಾಳಿ ಮಾಡಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ನ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಆಕೆಯ ತಂದೆಯನ್ನು ಗುಂಡಿಕ್ಕಿ ಕೊಂದ ಘಟನೆಯ ಬಗೆಗಿನ ರಾಷ್ಟ್ರೀಯ ಸುದ್ದಿ ಸಂಸ್ಥೆ ಎನ್  ಡಿ ಟಿವಿ ಮಾಡಿದ ವರದಿಯನ್ನು ಟ್ವೀಟ್ ಮಾಡುವುದರೊಂದಿಗೆ ನಿಮ್ಮ ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಮಿತಿ ಮೀರುತ್ತಿದೆ ಎಂದು ನುಸ್ರತ್ ಬರೆದುಕೊಂಡಿದ್ದಾರೆ.

ಓದಿ : ಕಡಬ: ಮರ ಲೂಟಿ ಪ್ರಕರಣದ ದೂರು ನೀಡಿದ ವ್ಯಕ್ತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಅಧಿಕಾರಿಗಳು

ಆಶ್ಚರ್ಯಕರ ..! ಉತ್ತರ ಪ್ರದೇಶದ ಭೀಕರ ಸ್ಥಿತಿಯನ್ನು ವಿವರಿಸಲು ಶಬ್ದಗಳು ಸಿಗುತ್ತಿಲ್ಲ. ಬಿಜೆಪಿ ಅಧಿಕಾರವಿರುವ ಉತ್ತರ ಪ್ರದೇಶದಲ್ಲಿ, ಮುಖ್ಯಮಂತ್ರಿ ಯೋಗಿ ಯಾಕೆ ಈ ಕುಟುಂಬಕ್ಕೆ ಸುರಕ್ಷತೆಯನ್ನು ನೀಡುತ್ತಿಲ್ಲ..? ಬಂಗಾಳದ ಚುನಾವಣೆಯೇ ತುಂಬಾ ಮುಖ್ಯವಾಗಿದೆಯಾ ಬಿಜೆಪಿಗೆ ..? ಎಂದು ಅವರು ಟ್ವೀಟರ್ ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಭೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸುವ ಸ್ವಲ್ಪ ಸಮಯದ ಮುನ್ನಾ ನುಸ್ರತ್ ಈ ರೀತಿ ಟ್ವೀಟ್ ಮಾಡಿದ್ದಾರೆ.

ಇನ್ನು, ಪ್ರಚಾರ ಸಭೆಯಲ್ಲಿ ಮಾತನಾಡಿದ ಯೋಗಿ, ಬಂಗಾಳದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಇದರಿಂದಾಗಿ ಬಂಗಾಳದ ಜನರು ಬೇಸತ್ತು ಹೋಗಿದ್ದಾರೆ  ಬಂಗಾಳದಲ್ಲಿ ನಾವು ಬದಲಾವಣೆಯನ್ನು ತರಲಿದ್ದೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ವಾಗ್ದಾಳಿ ಮಾಡಿದರು.

ಇನ್ನು, ಕ್ಯಾಬಿನೆಟ್ ಮಿನಿಸ್ಟರ್ ಫಿರ್ಹಾದ್ ಹಕಿಮ್ ಹಾಗೂ ಸಂಸದ ಡಾ. ಕಾಕೋಲಿ ಘೋಷ್ ದಸ್ತಿದಾರ್ ಇಬ್ಬರು ಕೂಡ ಹತ್ರಾಸ್ ಘಟನೆಯ ವರದಿಯನ್ನು ಟ್ವೀಟ್ ಮಾಡುವುದರೊಂದಿಗೆ ಹ್ಯಾಶ್ ಟ್ಯಾಗ್ ನಲ್ಲಿ ಬಿಜೆಪಿ ಹಟಾವೊ, ಬೇಟಿ ಬಚಾವೋ ಎಂದು ಬರೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪ್ರಮುಖ ಯೋಜನೆಗಳಲ್ಲಿ ಒಂದಾದ “ಬೇಟಿ ಬಚಾವೋ ಬೇಟಿ ಪಡಾವೋ”ವನ್ನು ವ್ಯಂಗ್ಯ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಭೀಕರ ಘಟನೆಗಳ ಲೆಕ್ಕಕ್ಕೆ ಅಂತ್ಯವಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಸಂಕೊಲೆಯಲ್ಲಿರುವಾಗ ಅಲ್ಲಿನ ಜನರು ಬಳಲುತ್ತಿದ್ದಾರೆ. ಆದರೂ, ಯೋಗಿ ಆದಿತ್ಯನಾಥ್ ಬಂಗಾಳದಲ್ಲಿದ್ದಾರೆಯೆ..? ಎಂದು ಸಂಸದ ಡಾ. ದಸ್ತದಾರ್ ಟ್ವೀಟ್ ಮಾಡಿದ್ದಾರೆ.

ಈ ಮಹಿಳೆಯ ಕುಟುಂಬದ ಸುರಕ್ಷತೆಗೆ ಆದ್ಯತೆ ನೀಡಲಾಗುವುದಿಲ್ಲ, ಬಂಗಾಳದ ಚುನಾವಣೆ..? ಏನೆನ್ನುವುದನ್ನು ನಾನು ಅರ್ಥ ಮಾಡಿಕೊಳ್ಳಲು ವಿಫಲನಾಗಿದ್ದೇನೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಗಾಳದ ಮಹಿಳಾ ಸುರಕ್ಷತೆ ಮತ್ತು ಹಕ್ಕುಗಳ ರಕ್ಷಕ ಎಂದು ಭಾವಿಸಿದರೇ ಕುತೂಹಲವಾಗಿದೆ ಎಂದು ಹಕೀಮ್ ಟ್ವೀಟ್ ಮಾಡಿದ್ದಾರೆ.

ಓದಿ : ಅಮೇಜಾನ್ ತನ್ನ ಲೋಗೋ ಬದಲಾಯಿಸಿದ್ದು ಇದೇ ಕಾರಣಕ್ಕಾ..?

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.