ರಾಂಚಿಯಲ್ಲಿ ಗುಂಡಿನ ಮಳೆ: ಮಾಜಿ ಮೇಯರ್ ಸೇರಿ ನಾಲ್ವರ ಭೀಕರ ಹತ್ಯೆ
Team Udayavani, Mar 22, 2017, 9:16 AM IST
ರಾಂಚಿ : ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಧನ್ಬಾದ್ನ ಮಾಜಿ ಮೇಯರ್,ಕಾಂಗ್ರೆಸ್ ನಾಯಕ ನೀರಜ್ ಸಿಂಗ್ ಮತ್ತು ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ.
ನೀರಜ್ ಸಿಂಗ್ ಅವರು ಬರುತ್ತಿದ್ದ ಕಾರನ್ನು ಗುರಿಯಾಗಿರಿಸಿಕೊಂಡು ಎಕೆ 47 ಧಾರಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಕಾರಿನಲ್ಲಿದ್ದ ಮಾಜಿ ಉಪ ಮೆಯರ್ ಅಶೋಕ್ ಯಾದವ್ , ಕಾರಿನ ಚಾಲಕ ಮತ್ತು ಗನ್ಮ್ಯಾನ್ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಾಲ್ವರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಕೊನೆಯುಸಿರೆಳೆದಿದ್ದರು.
ನೀರಜ್ ಸಿಂಗ್ ಅವರ ದೇಹದಲ್ಲಿ 17 ಗುಂಡುಗಳು ಹೊಕ್ಕಿದ್ದು ,ಸ್ಥಳದಲ್ಲಿ 50 ಗುಂಡುಗಳು ಪತ್ತೆಯಾಗಿರುವುದು ದಾಳಿಯ ಭೀಕರತೆಯನ್ನು ಸೂಚಿಸುತ್ತಿತ್ತು.
ದಾಳಿಕೋರರ ಪತ್ತೆಗಾಗಿ ವಿಶೇಷ ತನಿಖಾ ತಂಡ ಮತ್ತು ಪೊಲೀಸರ ತಂಡಗಳು ವ್ಯಾಪಕ ಶೋಧ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು