IITಯಲ್ಲಿ ಹುಡುಗಿಯರಿಗೆ ಮೀಸಲಾತಿ ಇರಬೇಕೇ ? ಇಲ್ಲಿವೆ ಶಿಫಾರಸುಗಳು
Team Udayavani, Jan 16, 2017, 3:16 PM IST
ಹೊಸದಿಲ್ಲಿ : ವಿದ್ಯಾರ್ಥಿನಿಯರಿಗೆ IIT ಯಲ್ಲಿ ಮೀಸಲಾತಿ ಇರಬೇಕೇ ? ಮಂಡಳಿಯೊಂದು ವಿದ್ಯಾರ್ಥಿನಿಯರಿಗೆ IITಯಲ್ಲಿ ಮೀಸಲಾತಿ ಶಿಫಾರಸು ಮಾಡಿದೆ.
ಪ್ರತಿಷ್ಠಿತ ಉನ್ನತ ಶಿಕ್ಷಣಾಲಯಗಳಿಗೆ ವಿದ್ಯಾರ್ಥಿನಿಯರ ಸೇರ್ಪಡೆ ಸಂಖ್ಯೆ ಇಳಿಮುಖವಾಗುತ್ತಿರುವ ಸಮಸ್ಯೆಗೆ ಐಐಟಿಯಂತಹ ಉನ್ನತ ವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರಿಗೆ ಮೀಸಲಾತಿ ಕಲ್ಪಿಸುವುದರಲ್ಲೇ ಪರಿಹಾರವಿದೆ ಎಂದು ಮಂಡಳಿಯು ತನ್ನ ಶಿಫಾರಸಿನಲ್ಲಿ ಹೇಳಿದೆ.
ಐಐಟಿಯಲ್ಲಿ ಲಭ್ಯವಿರುವ ಒಟ್ಟು ಸೀಟುಗಳಲ್ಲಿ ವಿದ್ಯಾರ್ಥಿನಿಯರಿಗೆ ಶೇ.20 ಸೂಪರ್ ನೂಮ್ಯರಿ (supernumerary) ಸೀಟುಗಳನ್ನು ಸೃಷ್ಟಿಸುವಂತೆ ಮಂಡಳಿಯು ಶಿಫಾರಸು ಮಾಡಿದೆ.
ಮಂಡಳಿಯ ಈ ಶಿಫಾರಸಿನ ಬಗೆಗಿನ ಅಂತಿಮ ನಿರ್ಧಾರವನ್ನು ಜಂಟಿ ಪ್ರವೇಶ ಮಂಡಳಿಯು ತನ್ನ ಸಭೆಯಲ್ಲಿ ಕೈಗೊಳ್ಳಲಿದೆ. ಈ ಮಂಡಳಿಯು ವಿದ್ಯಾರ್ಥಿನಿಯರಿಗೆ ಮೀಸಲಾತಿ ಕಲ್ಪಿಸುವುದನ್ನು 2018ರಿಂದ ಆರಂಭಿಸಬೇಕೇ ಬೇಡವೇ ಎಂಬುದನ್ನು ತೀರ್ಮಾನಿಸಲಿದೆ.
ಐಐಟಿಗೆ ವಿದ್ಯಾರ್ಥಿನಿಯರು ಸೇರುವ ಸಂಖ್ಯೆಯು ಈಚಿನ ವರ್ಷಗಳಲ್ಲಿ ಇಳಿಮುಖವಾಗುತ್ತಿರುವ ಬಗ್ಗೆ ಕಳವಳ ಹೊಂದಿರುವ ಜಂಟಿ ಪ್ರವೇಶ ಮಂಡಳಿಯು, ಪ್ರೊ| ತಿಮೋಥಿ ಗೊನ್ಸಾಲ್ವಿಸ್ ಅಧ್ಯಕ್ಷತೆಯಲ್ಲಿ ಉಪ ಸಮಿತಿಯೊಂದನ್ನು ರೂಪಿಸಿದೆ. ಈ ಉಪಸಮಿತಿಯು ವಿದ್ಯಾರ್ಥಿನಿಯರ ಪ್ರವೇಶಕ್ಕೆ ಸಂಬಂಧಿಸಿದ ಲೋಪದೋಷಗಳು ಹಾಗೂ ನ್ಯೂನತೆಗಳನ್ನು ಸರಿಪಡಿಸಲಿದೆ.
ವಿದ್ಯಾರ್ಥಿನಿಯರಿಗೆ ಐಐಟಿಯಲ್ಲಿ ಮೀಸಲಾತಿ ಕಲ್ಪಿಸುವುದರಿಂದ ಪುರುಷ ವಿದ್ಯಾರ್ಥಿಗಳಿಗೆ ಲಭ್ಯವಿರುವ ಸೀಟುಗಳ ಪ್ರಮಾಣ ಕಡಿಮೆಯಾಗುವುದಿಲ್ಲ; 2020ರೊಳಗೆ ಒಂದು ಲಕ್ಷ ಸೀಟುಗಳ ಐಐಟಿ ಗುರಿಯನ್ನು ತಲುಪುವುದು, ವಿದ್ಯಾರ್ಥಿನಿಯರಿಗೆ ಮೀಸಲಾತಿ ಕಲ್ಪಿಸುವುದರಿಂದ ಸುಲಭವೇ ಆಗಲಿದೆ ಎಂದು ಮಂಡಳಿ ಹೇಳಿದೆ. ಅಲ್ಲದೆ ಜೆಇಇ-ಅಡ್ವಾನ್ಸ್ಡ್ ಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳನ್ನು ಕೂಡ ಪರಿಗಣಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ