ಶ್ರದ್ದಾ ಪ್ರಕರಣ…ಎಲ್ಲಾ ಪುರಾವೆ ನಾಶಗೊಳಿಸಿದ್ದ ಅಫ್ತಾಬ್? ನೀರಿನ ಶುಲ್ಕ ಬಾಕಿ ಇಟ್ಟಿದ್ದೇಕೆ
ಅಫ್ತಾಬ್ ಗೆ ಮರಣದಂಡನೆ ವಿಧಿಸುವವರೆಗೆ ತನ್ನ ಹೋರಾಟ ಮುಂದುವರಿಯಲಿದೆ
Team Udayavani, Nov 17, 2022, 11:54 AM IST
ನವದೆಹಲಿ: ಶ್ರದ್ದಾ ವಾಲ್ಕರ್ ಳನ್ನು ಕ್ರೂರವಾಗಿ ಕೊಂದು ಹಾಕಿರುವ ಹಂತಕ ಅಫ್ತಾಬ್ ಅಮಿನ್ ಪೂನಾವಾಲನನ್ನು ನ್ಯಾಯಾಲಯ ಗಲ್ಲಿಗೇರಿಸುವವರೆಗೆ ವಿರಮಿಸುವುದಿಲ್ಲ ಎಂದು ಶ್ರದ್ದಾ ತಂದೆ ವಿಕಾಸ್ ವಾಲ್ಕರ್ ತಿಳಿಸಿದ್ದಾರೆ.
ಇದನ್ನೂ ಓದಿ:ವಿಡಿಯೋ: ಚಾಲಕನ ಅಶ್ಲೀಲ ಪ್ರಶ್ನೆಗೆ ಹೆದರಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಬಾಲಕಿ ಗಂಭೀರ
ಸುದ್ದಿಗಾರರ ಜತೆ ಮಾತನಾಡಿದ ವಿಕಾಸ್ ವಾಲ್ಕರ್, ಕೊಲೆಗಡುಕ ಅಫ್ತಾಬ್ ತುಂಬಾ ಚಾಣಾಕ್ಷ್ಯನಾಗಿದ್ದು, ಆತ ತನ್ನ ವಿರುದ್ಧದ ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡಿದ್ದಾನೆ. ಕಳೆದ ಐದಾರು ತಿಂಗಳಿನಿಂದ ಆತ ಎಲ್ಲಾ ಪುರಾವೆ ನಾಶ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಸಾಕ್ಷ್ಯ ನಾಶಗೊಳಿಸಿದ್ದರಿಂದ ಸತ್ಯವನ್ನು ಹೊರತರುವುದು ಪೊಲೀಸರಿಗೆ ಕಷ್ಟವಾಗಬಹುದು. ಏನೇ ಆದರೂ ಅಫ್ತಾಬ್ ಗೆ ಮರಣದಂಡನೆ ವಿಧಿಸುವವರೆಗೆ ತನ್ನ ಹೋರಾಟ ಮುಂದುವರಿಯಲಿದೆ ಎಂದು ವಿಕಾಸ್ ವಾಲ್ಕರ್ ಎಎನ್ ಐಗೆ ತಿಳಿಸಿದ್ದಾರೆ.
ಅಫ್ತಾಬ್ ವಿಚಾರಣೆ ವೇಳೆ ಕೆಲವೊಮ್ಮೆ ಸುಳ್ಳು ಮತ್ತೆ ಕೆಲವು ಬಾರಿ ಸತ್ಯ ಹೇಳುತ್ತಿದ್ದಾನೆ ಎಂಬುದು ಪೊಲೀಸರಿಗೆ ತಿಳಿದಿದೆ. ಈಗಾಗಲೇ ಕೋರ್ಟ್ ಕೂಡಾ ಆತನ ಮಂಪರು ಪರೀಕ್ಷೆಗೆ ಅನುಮತಿ ನೀಡಿದ್ದು, ಇದರಿಂದ ನ್ಯಾಯ ಸಿಗಬಹುದು ಎಂದು ಭರವಸೆ ಹೊಂದಿರುವುದಾಗಿ ವಿಕಾಸ್ ಹೇಳಿದರು.
ಒಂದು ವೇಳೆ ಆತ ಆರೋಪಿ ಎಂದಾದಲ್ಲಿ, ಅಫ್ತಾಬ್ ನನ್ನು ಗಲ್ಲಿಗೇರಿಸಬೇಕು. ಆತ ಯಾವಾಗಲೂ ಸುಳ್ಳನ್ನೇ ಹೇಳುತ್ತಾನೆ ಎಂಬುದಾಗಿ ಮುಂಬೈ ಮತ್ತು ದೆಹಲಿ ಪೊಲೀಸರಿಗೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ತನಿಖೆಗೆ ಸಹಕಾರಿಯಾಗಲಿದೆಯಾ ನೀರಿನ ಶುಲ್ಕ ಬಾಕಿ?
ಶ್ರದ್ದಾ ವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಹೊಸ ತಿರುವು ಲಭ್ಯವಾಗಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಅಫ್ತಾಬ್ ಪೂನಾವಾಲ ತನ್ನ ಫ್ಲ್ಯಾಟ್ ನ ನೀರಿನ ಶುಲ್ಕ ಪಾವತಿ ಬಾಕಿ ಇಟ್ಟಿರುವುದು ಪತ್ತೆಯಾಗಿದೆ. ಮೂಲಗಳ ಪ್ರಕಾರ, ದೆಹಲಿ ಸರ್ಕಾರ 20,000 ಲೀಟರ್ ಅನ್ನು ಉಚಿತವಾಗಿ ನೀಡುತ್ತಿದೆ. ನೆರೆಹೊರೆಯವರ ಹೇಳಿಕೆ ಪ್ರಕಾರ, ಅಫ್ತಾಬ್ ನ 300 ರೂಪಾಯಿ ನೀರಿನ ಶುಲ್ಕ ಬಾಕಿ ಇದ್ದಿರುವುದಾಗಿ ತಿಳಿಸಿದ್ದಾರೆ. ದೆಹಲಿ ಸರ್ಕಾರ 20,000 ಲೀಟರ್ ಉಚಿತವಾಗಿ ನೀಡಿದರೂ ಕೂಡಾ ಅತ್ಯಧಿಕ ನೀರು ಬಳಸಿರುವುದು ಯಾಕೆ ಎಂಬ ಆಯಾಮದಲ್ಲಿ ತನಿಖೆ ನಡೆಸಲು ಸಹಕಾರಿಯಾಗಲಿದೆ ಎಂದು ವರದಿ ತಿಳಿಸಿದೆ.
ಶ್ರದ್ದಾಳ ಕೊಲೆಯ ನಂತರ ಅಫ್ತಾಬ್ ರಕ್ತದ ಕಲೆಯನ್ನು ತೊಳೆಯಲು ಭಾರೀ ಪ್ರಮಾಣದ ನೀರನ್ನು ಉಪಯೋಗಿಸಿದ್ದು, ಈ ಹಿನ್ನೆಲೆಯಲ್ಲಿ ನೀರಿನ ಶುಲ್ಕ ಬಾರಿಯಾಗಲು ಕಾರಣವಾಗಿರಬಹುದು ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!