ಈ ಹುಡುಗಿ ಉತ್ತರಾ ಖಂಡದ ಏಕ್‌ ದಿನ್‌ ಕಾ ಸಿಎಂ!

ದಿನದ ಮಟ್ಟಿಗೆ ಮುಖ್ಯಮಂತ್ರಿಯಾದ 19ರ ಸೃಷ್ಟಿ | ಹಲವು ಯೋಜನೆಗಳ ಪರಿಶೀಲನೆ | "ಹೆಣ್ಣು ಮಕ್ಕಳ ದಿನ' ಹಿನ್ನೆಲೆ ಈ ಕ್ರಮ

Team Udayavani, Jan 25, 2021, 7:15 AM IST

ಈ ಹುಡುಗಿ ಉತ್ತರಾ ಖಂಡದ ಏಕ್‌ ದಿನ್‌ ಕಾ ಸಿಎಂ!

ಡೆಹ್ರಾಡೂನ್‌: ಮಕ್ಕಳನ್ನು ಒಂದು ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಯನ್ನಾಗಿಸುವ ಸುದ್ದಿಗಳನ್ನು ಓದುತ್ತಿರುತ್ತೇವೆ. “ನಾಯಕ್‌’ ಸಿನೆಮಾದಲ್ಲಿ ಮುಖ್ಯಮಂತ್ರಿ ಪಾತ್ರಧಾರಿ ಅಮರೀಶ್‌ ಪುರಿಯ ಪಿತ್ತ ನೆತ್ತಿಗೇರಿಸಿ, ಒಂದು ದಿನದ ಮಟ್ಟಿಗೆ ಮುಖ್ಯಮಂತ್ರಿಯಾಗುವ ಅವಕಾಶ ಪಡೆಯುವ ಅನಿಲ್‌ ಕಪೂರ್‌ ಕಥೆಯನ್ನೂ ನೋಡಿದ್ದೇವೆ. ಈಗ ಒಂದು ದಿನದ ಮುಖ್ಯಮಂತ್ರಿಯಾಗುವ ಇಂಥದ್ದೇ ಅವಕಾಶ ಉತ್ತರಾಖಂಡದ 19 ವರ್ಷದ ವಿದ್ಯಾರ್ಥಿನಿ ಸೃಷ್ಟಿ ಗೋಸ್ವಾಮಿಗೆ ಒಲಿದಿತ್ತು. ಆದರೆ, ಇಲ್ಲಿ ವಿಲನ್‌ಗಳಿರಲಿಲ್ಲ!

“ರಾಷ್ಟ್ರೀಯ ಹೆಣ್ಣುಮಕ್ಕಳ ದಿನ’ವಾದ ರವಿವಾರ ಉತ್ತರಾಖಂಡ ಸರಕಾರ ಇಂಥದ್ದೊಂದು ವಿನೂತನ ಹೆಜ್ಜೆ ಇಟ್ಟಿದೆ. ಹರಿದ್ವಾರದಲ್ಲಿ ಮೂರನೇ ವರ್ಷದ ಬಿಎಸ್‌ಸಿ ವಿದ್ಯಾರ್ಥಿನಿಯಾಗಿರುವ ಸೃಷ್ಟಿ ಗೋಸ್ವಾಮಿಯನ್ನು “ಒಂದು ದಿನದ ಮುಖ್ಯಮಂತ್ರಿ’ಯಾಗಿ ನೇಮಿ­ಸಿತ್ತು ಉತ್ತರಾಖಂಡ ಸರಕಾರ. ಅಧಿಕಾರ ಸ್ವೀಕರಿಸಿದ ಸೃಷ್ಟಿ, ಅಟಲ್‌ ಆಯುಷ್ಮಾನ್‌ ಯೋಜನೆ, ಸ್ಮಾರ್ಟ್‌ ಸಿಟಿ, ಹೋಂಸ್ಟೇ ಯೋಜನೆ, ಮಕ್ಕಳು ಮತ್ತು ಮಹಿಳಾ ರಕ್ಷಣೆ ಯೋಜನೆಗಳನ್ನು ಪರಿಶೀಲಿಸಿದ್ದಾಳೆ!

ಈ ಹಿಂದೆ 2018ರಲ್ಲಿ ಉತ್ತರಾಖಂಡ ಮಕ್ಕಳ ಸದನದ ಶಾಸಕಿಯಾಗಿಯೂ ಸೃಷ್ಟಿ ಆಯ್ಕೆಯಾಗಿದ್ದಳು. 2019ರಲ್ಲಿ  ಥಾಯ್ಲೆಂ ಡ್‌ನಲ್ಲಿ ನಡೆದ ಹೆಣ್ಣುಮಕ್ಕಳ ಅಂತಾರಾಷ್ಟ್ರೀಯ ನಾಯಕತ್ವ ಅಧಿವೇಶನದಲ್ಲಿ ಪಾಲ್ಗೊಂಡು ಭಾಷಣ ಮಾಡಿ ಶ್ಲಾಘನೆಗೆ ಪಾತ್ರಳಾಗಿದ್ದಳು.

 

ಹೆಣ್ಣುಮಕ್ಕಳ ಅಭಿವೃದ್ಧಿಗಾಗಿ ಹಲವು ಕ್ರಮ: ಮೋದಿ :

ಹೆಣ್ಣುಮಕ್ಕಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರಕಾರ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಅವರ ಶಿಕ್ಷಣ, ಆರೋಗ್ಯ, ಹೆಣ್ಣು-ಗಂಡು ಮಕ್ಕಳ ನಡುವೆ ಗೌರವ ಭಾವ ಹೆಚ್ಚಿಸುವುದಕ್ಕೆ ಆದ್ಯತೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರೀಯ ಹೆಣ್ಣುಮಗುವಿನ ದಿನದ ಹಿನ್ನೆಲೆ ಮೋದಿ ಈ ಮಾತುಗಳನ್ನಾಡಿದ್ದಾರೆ. ಹೆಣ್ಣುಮಕ್ಕಳ ಶ್ರೇಯೋಭಿವೃದ್ಧಿಗಾಗಿ ಯಾರ್ಯಾರು ದುಡಿಯುತ್ತಿದ್ದಾರೋ ಅವರೆಲ್ಲರನ್ನೂ ಅಭಿನಂದಿಸುವುದಕ್ಕೆ ಈ ದಿನ ಸದಾವಕಾಶ. ಈ ದಿನ ಭಾರತದ ಹೆಣ್ಣುಮಕ್ಕಳನ್ನು ಗೌರವಿಸಬೇಕು, ಅವರ ಸಾಧನೆಯನ್ನು ಗುರುತಿಸಬೇಕು ಎಂದು ಮೋದಿ ಹೇಳಿದ್ದಾರೆ.

ಸೆಲ್ಫಿ ಪ್ರಕಟಿಸಿದ ಗಣ್ಯರು :

ಪ್ರತೀ ವರ್ಷ ಜ.24ನ್ನು ಕೇಂದ್ರ ಸಚಿವರು, ಚಿತ್ರನಟರು, ಕ್ರೀಡಾಪಟುಗಳು; ಹೆಣ್ಣುಮಕ್ಕಳ ಗೌರವ ಹೆಚ್ಚಿಸುವುದಕ್ಕೆ ಒಂದು ಸದಾವಕಾಶವನ್ನಾಗಿ ಬಳಸಿಕೊಳ್ಳುತ್ತಾರೆ. ಜನಸಾಮಾನ್ಯರಲ್ಲಿ ಹೆಣ್ಣುಮಗುವಿನ ಬಗ್ಗೆ ಇರುವ ತಿರಸ್ಕಾರ ಹೋಗಬೇಕು ಎನ್ನುವುದು ಇದರ ಉದ್ದೇಶ. ಈ ಹಿನ್ನೆಲೆಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮತಿ ಇರಾನಿ, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌, ಕ್ರಿಕೆಟ್‌ ದೇವರೆಂದೇ ಕರೆಸಿಕೊಳ್ಳುವ ಸಚಿನ್‌ ತೆಂಡುಲ್ಕರ್‌ ಸೇರಿದಂತೆ ಅನೇಕರು ತಮ್ಮ ಹೆಣ್ಣುಮಕ್ಕಳ ಜತೆಗಿನ ಸೆಲ್ಫಿಯನ್ನು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.