38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಮೂಳೆ! ಅಂತಿಮ ನಮನಕ್ಕಾಗಿ ಕಾಯುತ್ತಿದೆ ಕುಟುಂಬ


Team Udayavani, Aug 15, 2022, 7:30 AM IST

38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಮೂಳೆ! ಅಂತಿಮ ನಮನಕ್ಕಾಗಿ ಕಾಯುತ್ತಿದೆ ಕುಟುಂಬ

ಶ್ರೀನಗರ: ಇಡೀ ದೇಶವೇ ಸ್ವಾತಂತ್ರ್ಯದ ಸಂಭ್ರಮಾಚರಣೆಯಲ್ಲಿದೆ. ಆದರೆ ಆ ಒಂದು ಕುಟುಂಬ ಮಾತ್ರ ಎಂದೋ ಹುತಾತ್ಮನಾದ ತಮ್ಮ ಮನೆ ಮಗನ ದೇಹದ ಪಳೆಯುಳಿಕೆಯ ಬರುವಿಕೆಗೆ ಕಾಯುತ್ತಾ ಕುಳಿತಿದೆ.

ಹೌದು! 1984ರ ಮೇ 29ರಂದು ಸಿಯಾಚಿನ್‌ ಗಡಿಯಲ್ಲಿ ಹಿಮಪಾತದಿಂದ ಸಾವನ್ನಪ್ಪಿದ್ದ ಯೋಧ ಲ್ಯಾನ್ಸ್‌ ನಾಯಕ್‌ ಚಂದ್ರಶೇಖರ್‌ ಅವರ ಮೃತ ದೇಹದ ಪಳೆಯುಳಿಕೆ ಆ.13ರಂದು ಪತ್ತೆಯಾಗಿದೆ. ಬಂಕರ್‌ ಒಳಗೆ ಕೆಲ ಮೂಳೆಗಳು ಪತ್ತೆಯಾಗಿದ್ದು ಅದರೊಟ್ಟಿಗೆ ಚಂದ್ರಶೇಖರ್‌ ಅವರ ಸೇನೆಯ ಸಂಖ್ಯೆಯಿರುವ ಡಿಸ್ಕ್ ಕೂಡ ಸಿಕ್ಕಿದೆ. ಹೀಗಾಗಿ ಅದು 38 ವರ್ಷಗಳ ಹಿಂದೆ ಹುತಾತ್ಮರಾದ ಚಂದ್ರಶೇಖರ್‌ ಅವರದ್ದೇ ಮೂಳೆಗಳು ಎನ್ನುವುದು ದೃಢಪಟ್ಟಿದೆ.

ಈಗ ಆ ಪಳೆಯುಳಿಕೆಯನ್ನು ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ಅವರ ಮನೆಗೆ ಕಳುಹಿಸಿಕೊಡುವ ಪ್ರಕ್ರಿಯೆ ನಡೆಯುತ್ತಿದೆ.

ಚಂದ್ರಶೇಖರ್‌ ಅವರ 65 ವರ್ಷದ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು, ಪಳೆಯುಳಿಕೆಗಾಗಿ ಕಾಯಲಾರಂಭಿಸಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸುವುದಕ್ಕೂ ಸಿದ್ಧತೆಗಳು ನಡೆದಿವೆ. ಚಂದ್ರಶೇಖರ್‌ ಅವರು ಹುತಾತ್ಮರಾಗುವಾಗ ಹಿರಿಯ ಮಗಳು 9 ವರ್ಷದವಳಾಗಿದ್ದು, ಕಿರಿಯವಳು 4 ವರ್ಷದವಳಾಗಿದ್ದಳು ಎಂದು ತಿಳಿಸಲಾಗಿದೆ.

ಸಿಯಾಚಿನ್‌ಗೆ ಕಾವಲಾಗಿದ್ದ ಚಂದ್ರಶೇಖರ್‌:
ಪಾಕ್‌ ಪಡೆಯು ದೃಷ್ಟಿ ನೆಟ್ಟಿದ್ದ ಸಿಯಾಚಿನ್‌ ಅನ್ನು ಉಳಿಸಿಕೊಳ್ಳಲೆಂದು 1984ರಲ್ಲಿ ನಡೆದ ಆಪರೇಷನ್‌ ಮೇಘದೂತದ ಭಾಗವಾಗಿ ಸಿಯಾಚಿನ್‌ 5965 ಕೇಂದ್ರವನ್ನು ರಕ್ಷಿಸಲು ಯೋಧರು ತೆರಳಿದ್ದರು. ಅದರಲ್ಲಿ ಚಂದ್ರಶೇಖರ್‌ ಕೂಡ ಒಬ್ಬರು. ಯೋಧರು ರಾತ್ರಿ ಮಲಗಿದ್ದ ಸಮಯದಲ್ಲಿ ಭಾರೀ ಹಿಮಪಾತ ಉಂಟಾಗಿತ್ತು. ಶಿಬಿರದಲ್ಲಿದ್ದ 18 ಯೋಧರು ಹುತಾತ್ಮರಾಗಿ, ಆ ಪೈಕಿ 14 ಮಂದಿಯ ಮೃತದೇಹಗಳು ಮಾತ್ರ ಪತ್ತೆಯಾಗಿತ್ತು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.