ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿ, ಟಿಪ್ಪು ಆರಾಧಕ; ಕಟಿಯಾರ್
Team Udayavani, Dec 23, 2017, 3:48 PM IST
ನವದೆಹಲಿ: ಭಾರತೀಯ ಜನತಾ ಪಕ್ಷ ಹಿಂದುತ್ವವನ್ನು ಗುತ್ತಿಗೆಗೆ ತೆಗೆದುಕೊಂಡಿದೆಯೇ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಶ್ನೆಗೆ ಬಿಜೆಪಿ ಸಂಸದ ವಿನಯ್ ಕಟಿಯಾರ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಹಿಂದೂ ವಿರೋಧಿ, ಟಿಪ್ಪು ಸುಲ್ತಾನ್ ಆರಾಧಕ ಎಂದು ತಿರುಗೇಟು ನೀಡಿದ್ದಾರೆ.
ಯಾರು ಟಿಪ್ಪು ಸುಲ್ತಾನ್ ನನ್ನು ಆರಾಧಿಸುತ್ತಾರೋ ಅವರು ಹಿಂದೂಗಳನ್ನು ಬೆಂಬಲಿಸುವುದಿಲ್ಲ ಎಂದು ಕಟಿಯಾರ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಆರಾಧಕರೊಬ್ಬರು, ಈ ಕಾರಣದಿಂದಾಗಿ ಹಿಂದೂ ಸಮುದಾಯಕ್ಕೆ ಬಹಳಷ್ಟು ತೊಂದರೆಯಾಗಿದೆ. ಇದು ಸಹಜವಾದದ್ದು ಯಾಕೆಂದರೆ ಇಂತಹ ವ್ಯಕ್ತಿಗಳು ಹಿಂದೂಗಳ ಅಥವಾ ಹಿಂದೂಧರ್ಮವನ್ನು ಬೆಂಬಲಿಸುವುದಾಗಲಿ, ಶ್ರೇಯೋಭಿವೃದ್ಧಿ ಬಗ್ಗೆ ಚಿಂತಿಸಲ್ಲ ಎಂದು ಹೇಳಿರುವುದಾಗಿ ಎಎನ್ ಐ ವರದಿ ತಿಳಿಸಿದೆ.
ಕಳೆದ ವಾರ ಹುಬ್ಬಳ್ಳಿಯ ಬಿಜೆಪಿ ಪರಿವರ್ತನಾ ರಾಲಿಯಲ್ಲಿ ಭಾಗವಹಿಸಿದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಾತನಾಡುತ್ತ, ಕರ್ನಾಟಕ ಹನುಮನ ನಾಡು, ಆದರೆ ಅದನ್ನು ಟಿಪ್ಪು ಸುಲ್ತಾನ್ ಆರಾಧಕರು ಟಿಪ್ಪು ಭೂಮಿಯನ್ನಾಗಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯನವರು, ಹಿಂದೂತ್ವವನ್ನು ಬಿಜೆಪಿಯವರು ಗುತ್ತಿಗೆಗೆ ತೆಗೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್