ಸಿಧು-ಅಕಾಲಿ ವಾಗ್ಯುದ್ಧ
Team Udayavani, Feb 19, 2019, 12:30 AM IST
ಪುಲ್ವಾಮಾ ಘಟನೆಗೆ ಸಂಬಂಧಿಸಿ ವಿವಾದಕ್ಕೆ ಸಿಲುಕಿರುವ ಪಂಜಾಬ್ ಸಚಿವ, ನವಜೋತ್ ಸಿಂಗ್ ಸಿಧು ಹಾಗೂ ಪ್ರತಿ ಪಕ್ಷ ಶಿರೋಮಣಿ ಅಕಾಲಿ ದಳದ ನಾಯಕ ಬಿಕ್ರಂ ಸಿಂಗ್ ಮಜೀತಿಯಾ ನಡುವೆ ಭಾರೀ ವಾಗ್ಯುದ್ಧ ನಡೆದಿದೆ. ಮಜೀತಿಯಾ ಮಾತನಾಡಿ, “”ಕಾಂಗ್ರೆಸ್ ಮತ್ತು ಪಂಜಾಬ್ ಸರಕಾರವು ಪಾಕಿಸ್ಥಾನದ ಸೇನಾ ಮುಖ್ಯಸ್ಥ, ಪ್ರಧಾನಿ ಇಮ್ರಾನ್ ಖಾನ್ರನ್ನು ಖಂಡಿಸುತ್ತದೆಯೋ, ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕು. ಸಿಧು ಅವರನ್ನು ವಜಾ ಮಾಡಬೇಕು” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಧು, “”1999ರಲ್ಲಿ ಏರ್ ಇಂಡಿಯಾ ವಿಮಾನ ಅಪಹರಣವಾದಾಗ, ಅದರಲ್ಲಿದ್ದ 180 ಭಾರತೀಯ ಪ್ರಯಾಣಿಕರನ್ನು ರಕ್ಷಿಸಲು ಸಲುವಾಗಿ, ಅಂದು ಅಧಿಕಾರದಲ್ಲಿದ್ದ ಪ್ರಧಾನಿ ವಾಜಪೇಯಿ, ಭಾರತದಲ್ಲಿ ಜೈಲಿನಲ್ಲಿದ್ದ ಉಗ್ರ ಮಸೂದ್ ಅಜರ್ನನ್ನು ಬಿಡುಗಡೆ ಮಾಡಿತ್ತು. ಅದೇ ಮಸೂದ್, ಜೈಷ್-ಎ-ಮೊಹಮ್ಮದ್ ಸಂಘಟನೆ ಕಟ್ಟಿ ಪುಲ್ವಾಮಾ ದಾಳಿಗೆ ಕಾರಣನಾಗಿದ್ದಾನೆ. ಹಾಗಾಗಿ, ಪುಲ್ವಾಮಾ ಘಟನೆಯ ನೈತಿಕ ಹೊಣೆ ಯಾರದ್ದು” ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ