ಸೇನೆ ನಿಯೋಜನೆ ಸ್ನೇಹಕ್ಕೆ ಅಡ್ಡಿ; ಚೀನ ವಿದೇಶಾಂಗ ಸಚಿವರಿಗೆ ಭಾರತದ ಖಡಕ್‌ ಮಾತು

ಉಭಯ ದೇಶಗಳ ಸಂಬಂಧ ಸಹಜವಾಗಿಲ್ಲ ಎಂದ ಜೈಶಂಕರ್‌

Team Udayavani, Mar 26, 2022, 7:05 AM IST

ಸೇನೆ ನಿಯೋಜನೆ ಸ್ನೇಹಕ್ಕೆ ಅಡ್ಡಿ; ಚೀನ ವಿದೇಶಾಂಗ ಸಚಿವರಿಗೆ ಭಾರತದ ಖಡಕ್‌ ಮಾತು

ಹೊಸದಿಲ್ಲಿ: ಗಡಿಯಲ್ಲಿ ಹೆಚ್ಚು ವರಿ ಸೇನೆಯನ್ನು ಜಮಾಯಿಸಿ ಸ್ನೇಹವನ್ನು ಉತ್ತಮ ಗೊಳಿಸಬೇಕು ಎಂದು ಬಯಸುವುದು ಸರಿಯಲ್ಲ. ಇಂಥ ಕ್ರಮದಿಂದ ಉಭಯ ದೇಶಗಳ ಸ್ನೇಹ ಗಟ್ಟಿಯಾಗಲು ಖಂಡಿತಾ ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್‌ ಶುಕ್ರವಾರ ಚೀನದ ವಿದೇಶಾಂಗ ಸಚಿವರಿಗೆ ಹೇಳಿದರು.

ಪೂರ್ವ ಲಡಾಖ್‌ನಲ್ಲಿ ನಿಯೋಜನೆಗೊಂಡಿರುವ ಸೇನೆಯನ್ನು ಚೀನ ಸಂಪೂರ್ಣವಾಗಿ ಹಿಂಪಡೆಯುವ ವರೆಗೂ ಉಭಯ ದೇಶಗಳ ನಡುವೆ “ಸಹಜ’ ಬಾಂಧವ್ಯ ಏರ್ಪಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಚೀನದ ವಿದೇಶಾಂಗ ಸಚಿವ ವಾಂಗ್‌ ಯಿ ಅವರು ಗುರುವಾರ ರಾತ್ರಿ ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದು, ಶುಕ್ರವಾರ ಸಚಿವ ಜೈಶಂಕರ್‌ ಹಾಗೂ ಎನ್‌ಎಸ್‌ಎ ದೋವಲ್‌ ಜತೆ ಮಾತುಕತೆ ನಡೆಸಿದ್ದಾರೆ.

ಈ ಮೂಲಕ 2020ರಲ್ಲಿ ಪೂರ್ವ ಲಡಾಖ್‌ನಲ್ಲಿ ಆರಂಭವಾದ ಗಡಿ ಸಂಘರ್ಷದ ಬಳಿಕ ಇದೇ ಮೊದಲ ಬಾರಿಗೆ ಎರಡೂ ದೇಶಗಳ ನಡುವೆ ಉನ್ನತ ಮಟ್ಟದ ಮಾತುಕತೆ ನಡೆದಂತಾಗಿದೆ.

ಸಂಬಂಧ ಸಹಜವಾಗಿಲ್ಲ
ಸುಮಾರು 3 ತಾಸುಗಳ ಮಾತುಕತೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೈಶಂಕರ್‌, ಸದ್ಯಕ್ಕೆ ಎರಡೂ ದೇಶಗಳ ನಡುವಿನ ಸಂಬಂಧವು “ಸಹಜ’ವಾಗಿದೆಯೇ ಎಂದು ನೀವು ಪ್ರಶ್ನಿಸಿದರೆ, ನಾನು “ಇಲ್ಲ’ ಎಂದು ಉತ್ತರಿಸುತ್ತೇನೆ. ಗಡಿಯಲ್ಲಿ ಚೀನ ಸೇನೆ ಜಮಾವಣೆ ಯಾಗಿರುವುದೇ ಉಭಯ ದೇಶಗಳ ನಡುವಿನ ಸಹಜ ಸಂಬಂಧಕ್ಕೆ ಪ್ರಮುಖ ತಡೆಯಾಗಿದೆ. 2020ರ ಎಪ್ರಿಲ್‌ನಿಂದಲೂ ಗಡಿಯಲ್ಲಿ ಚೀನದ ಸೇನೆ ನಿಯೋಜನೆ ಗೊಂಡಿರುವುದು ಹಲವು ರೀತಿಯ ಉದ್ವಿಗ್ನತೆ, ಸಂಘರ್ಷಕ್ಕೆ ಕಾರಣವಾಗಿದೆ. ಅದನ್ನು ನಾವು ಸಹಜ ಸಂಬಂಧ ಎನ್ನಲಾಗುವುದಿಲ್ಲ. ಈ ಸಮಸ್ಯೆಯನ್ನು ಪೂರ್ಣಪ್ರಮಾಣದಲ್ಲಿ ಪರಿಹರಿಸಿಕೊಳ್ಳುವ ಪ್ರಯತ್ನವನ್ನು ಮಾತುಕತೆ ವೇಳೆ ಮಾಡಲಾಗಿದೆ. ಈ ವಿಚಾರದ ಬಗ್ಗೆ ವಾಂಗ್‌ ಯಿ ಅವರಿಗೆ ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಭಾರತದ 16 ಮಂದಿ ಮೀನುಗಾರರನ್ನು ವಾಪಸ್‌ ಕರೆಯಿಸಿಕೊಳ್ಳಲು ಭಾರತ ಬದ್ಧ: ಕೇಂದ್ರ

ಕಾಮಗಾರಿ ಪ್ರಗತಿಯಲ್ಲಿದೆ
ಪೂರ್ವ ಲಡಾಖ್‌ನ ಪ್ರಸ್ತುತ ಪರಿಸ್ಥಿತಿಯು “ಪ್ರಗತಿಯಲ್ಲಿರುವ ಕಾಮಗಾರಿ’ಯಂತಿದೆ. ಆದರೆ, ಈ ಪ್ರಗತಿಯು ಅಗತ್ಯಕ್ಕಿಂತ ನಿಧಾನಗತಿಯಲ್ಲಿದೆ. ಅದಕ್ಕೆ ವೇಗ ನೀಡಬೇಕು ಎನ್ನುವುದೇ ಇಂದಿನ ಮಾತುಕತೆಯ ಉದ್ದೇಶವಾಗಿತ್ತು ಎಂದೂ ಜೈಶಂಕರ್‌ ಹೇಳಿದ್ದಾರೆ.

ಉಭಯ ದೇಶಗಳ ಹಿರಿಯ ಸೇನಾ ಕಮಾಂಡರ್‌ಗಳ ನಡುವೆ ಈಗಾಗಲೇ 15 ಸುತ್ತುಗಳ ಮಾತುಕತೆ ನಡೆದಿವೆ. ಕೆಲವು ಸಂಘರ್ಷ ವಲಯಗಳಿಂದ ಎರಡೂ ದೇಶಗಳ ಸೇನೆಗಳು ವಾಪಸಾಗಿವೆ. ಆದರೆ ಇನ್ನೂ ಕೆಲವು ಪ್ರದೇಶಗಳಲ್ಲಿ ಪರಿಸ್ಥಿತಿ ಹಾಗೆಯೇ ಇದೆ. ಮಾತುಕತೆ ನಡೆಯಬೇಕೆಂದರೆ, ಸೇನೆ ಜಮಾವಣೆಯನ್ನು ಹಿಂಪಡೆಯ ಬೇಕು. ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯೇ ಸ್ಥಿರ ಹಾಗೂ ಸಹಕಾರಯುತ ಬಾಂಧವ್ಯದ ಅಡಿಪಾಯವಾಗಿದೆ ಎಂದಿದ್ದಾರೆ.

ಶೀಘ್ರ ಪರಿಹಾರಕ್ಕೆ ಆಗ್ರಹ
ಪೂರ್ವ ಲಡಾಖ್‌ನ ಉಳಿದ ಕಡೆಗಳಿಂದಲೂ ಸೇನೆಗಳನ್ನು ಹಿಂಪಡೆ ಯುವ ನಿಟ್ಟಿನಲ್ಲಿ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಚೀನ ವಿದೇಶಾಂಗ ಸಚಿವ ವಾಂಗ್‌ ಯಿ ಅವರಿಗೆ ದೋವಲ್‌ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.