ಕರ್ನಾಟಕ, ಕೇರಳದಲ್ಲಿ ಐಸಿಸ್‌ ಉಗ್ರರ ನೆಲೆ ; ಭಟ್ಕಳದ ಯುವಕ ವಿಶ್ವದ ಮೋಸ್ಟ್‌ ವಾಂಟೆಡ್‌ ಉಗ್ರ

ವಿಶ್ವಸಂಸ್ಥೆಯಿಂದಲೇ ಎಚ್ಚರಿಕೆ; ದೇಶದ ವಿವಿಧೆಡೆ ದಾಳಿಗೆ ಸಂಚು

Team Udayavani, Jul 26, 2020, 7:00 AM IST

ಕರ್ನಾಟಕ, ಕೇರಳದಲ್ಲಿ ಐಸಿಸ್‌ ಉಗ್ರರ ನೆಲೆ ; ಭಟ್ಕಳದ ಯುವಕ ವಿಶ್ವದ ಮೋಸ್ಟ್‌ ವಾಂಟೆಡ್‌ ಉಗ್ರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಿಶ್ವಸಂಸ್ಥೆ: ಕರ್ನಾಟಕ ಮತ್ತು ನೆರೆಯ ಕೇರಳದಲ್ಲಿ ಸಾಕಷ್ಟು ಐಸಿಸ್‌ ಉಗ್ರರಿದ್ದಾರೆ.

ದೇಶದ ವಿವಿಧೆಡೆ ದಾಳಿ ನಡೆಸಲು ಅವರು ಹೊಂಚು ಹಾಕುತ್ತಿದ್ದಾರೆ ಎಂದು ಬೆಚ್ಚಿ ಬೀಳಿಸುವ ವರದಿಯೊಂದನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದೆ.

ವಿಶ್ವಸಂಸ್ಥೆಯ 26ನೇ ‘ಅನಾಲಿಟಿಕಲ್‌ ಸಪೋರ್ಟ್‌ ಆ್ಯಂಡ್‌ ಸ್ಯಾಂಕ್ಷನ್ಸ್‌ ಮಾನಿಟರಿಂಗ್‌’ ತಂಡದ ವರದಿಯಲ್ಲಿ ಈ ಸಂಗತಿ ಬಹಿರಂಗಗೊಂಡಿದೆ.

2019ರ ಮೇಯಲ್ಲಿ ಐಸಿಸ್‌, ಭಾರತದಲ್ಲಿ ‘ಹಿಂದ್‌ ವಿಲಾಯಾ’ ಎಂಬ ಹೊಸ ಪ್ರಾಂತ್ಯವನ್ನು ಹುಟ್ಟು ಹಾಕಿದ್ದಾಗಿ ಹೇಳಿಕೊಂಡಿದೆ.

ಇದು 180-200 ಸದಸ್ಯರನ್ನು ಹೊಂದಿದ್ದು, ಕರ್ನಾಟಕ, ಕೇರಳದ ವಿವಿಧ ಪ್ರದೇಶಗಳಲ್ಲಿ ನೆಲೆ ಕಂಡುಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಉಸಾಮಾ ಮೊಹಮ್ಮದ್‌ ಭಾರತದಲ್ಲಿ ಅಲ್‌ ಕಾಯಿದಾ ಗುಂಪಿನ ನಾಯಕ. ಈತ ಆಸೀಮ್‌ ಉಮರ್‌ ಹತ್ಯೆಯ ಪ್ರತೀಕಾರ ತೀರಿಸಿಕೊಳ್ಳಲು ಹೊಂಚು ಹಾಕುತ್ತಿದ್ದಾನೆ. ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡ ಬಳಿಕ ದೇಶದ ಇತರೆಡೆಗಳಲ್ಲಿ ದಾಳಿ ನಡೆಸಲು ‘ಹಿಂದ್‌ ವಿಲಾಯಾ’ ಹುಟ್ಟು ಹಾಕಿದ್ದಾಗಿ ಐಸಿಸ್‌ ಹೇಳಿಕೊಳ್ಳುತ್ತಿದೆ ಎಂದು ವರದಿ ಹೇಳಿದೆ.

17 ಮಂದಿ ವಿರುದ್ಧ ಚಾರ್ಜ್‌ ಶೀಟ್‌
ಐಸಿಸ್‌ ಕಾರ್ಯಕರ್ತರಾದ ಬೆಂಗಳೂರಿನ ಮೆಹಬೂಬ್‌ ಪಾಷಾ ಮತ್ತು ತಮಿಳುನಾಡಿನ ಕಡಲೂರಿನ ಖಜಾ ಮೊಯಿದ್ದೀನ್‌ ತಮ್ಮದೇ ಆದ ಭಯೋತ್ಪಾದಕ ಸಂಘಟನೆ ಆರಂಭಿಸಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಿಳಿಸಿದೆ. ಈ ಸಂಘಟನೆ ಜತೆ ಗುರುತಿಸಿಕೊಂಡ 17 ಮಂದಿ ವಿರುದ್ಧ ಅದು ಇತ್ತೀಚೆಗೆ ಆರೋಪ ಪಟ್ಟಿ ಸಲ್ಲಿಸಿದೆ. ಬೆಂಗಳೂರು ಪೊಲೀಸರು ಪಾಷಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಳಿಕ ಎನ್‌ಐಎಗೆ ಹಸ್ತಾಂತರಿಸಲಾಗಿದೆ.

ಭಟ್ಕಳದ ಯುವಕ ವಿಶ್ವದ ಮೋಸ್ಟ್‌ ವಾಂಟೆಡ್‌ ಉಗ್ರ
ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಮೊಹಮ್ಮದ್‌ ಶಫಿ ಅರ್ಮರ್‌, ಉಸಾಮಾ ಅಹಮದ್‌ ಅಟಾರ್‌ ಮತ್ತು ಮೊಹಮ್ಮದ್‌ ಇಸಾ ಯೂಸಿಫ್ ಸಾಕರ್‌ ಅಲ್‌ ಬಿನಾಲಿಯನ್ನು ಅಮೆರಿಕ ಗುರುವಾರ ವಿಶ್ವದ ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಿದೆ. ಯೂಸುಫ್ ಅಲ್‌ ಹಿಂದಿ ಎಂಬ ಹೆಸರನ್ನೂ ಹೊಂದಿದ್ದ ಅರ್ಮರ್‌, ಐಸಿಸ್‌ಗೆ ಭಾರತದ ಯುವಕರನ್ನು ನೇಮಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ.

ಭಾರತದಲ್ಲಿ ಉಗ್ರ ದಾಳಿ ಎಸಗುವ ಹೊಣೆ ಹೊತ್ತಿದ್ದ ಎಂದು ಅಮೆರಿಕದ ಗೃಹ ಇಲಾಖೆ ತಿಳಿಸಿದೆ. ಈತ ಭಾರತೀಯ ಮುಜಾಹಿದೀನ್‌ ಸೇರಿ, ಬಳಿಕ ಪಾಕ್‌ಗೆ ಪಲಾಯನಗೈದಿದ್ದ. ಅನಂತರ ಐಸಿಸ್‌ ಸೇರಿದ್ದ. 2015ರಲ್ಲಿ ಸಿರಿಯಾದಲ್ಲಿ ಈತ ಮೃತಪಟ್ಟಿದ್ದ ಎನ್ನಲಾಗಿತ್ತು. ಅಮೆರಿಕ ಆತನ ಹೆಸರನ್ನು ಉಗ್ರರ ಪಟ್ಟಿಗೆ ಸೇರಿಸಿದ್ದರಿಂದ ಆತ ಜೀವಂತ ಇರುವುದು ದೃಢಪಟ್ಟಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.