Sikkim Flash Flood: ಮೃತರ ಸಂಖ್ಯೆ 19ಕ್ಕೆ ಏರಿಕೆ, 103 ಮಂದಿಯ ಪತ್ತೆಗೆ ಶೋಧ ಕಾರ್ಯಾಚರಣೆ
Team Udayavani, Oct 6, 2023, 9:04 AM IST
ಗ್ಯಾಂಗ್ಟಾಕ್: ಸಿಕ್ಕಿಂನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿದೆ, ಇನ್ನೂ 103 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಶುಕ್ರವಾರ ಮಾಹಿತಿ ನೀಡಿದೆ.
ಉತ್ತರ ಸಿಕ್ಕಿಂನಲ್ಲಿ ಬುಧವಾರ ಲೊನಾಕ್ ಸರೋವರದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿ ಸಂಭವಿಸಿದ ದುರಂತದಲ್ಲಿ ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.
ಅಲ್ಲದೆ ಪ್ರವಾಹ ಪೀಡಿತ ಪ್ರದೇಶಗಳಿಂದ ಸುಮಾರು 2,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸೇನೆ ಮತ್ತು ಎನ್ಡಿಆರ್ಎಫ್ ತಂಡಗಳು ತೀಸ್ತಾ ನದಿ ಜಲಾನಯನ ಪ್ರದೇಶದಲ್ಲಿ ನಾಪತ್ತೆಯಾದವರ ಕಾರ್ಯಾಚರಣೆ ನಡೆಸುತ್ತಿದ್ದು ಸೇನೆಯ ದೊಡ್ಡ ದೊಡ್ಡ ಟ್ರಕ್ ಗಳು ಕೆಸರಿನಲ್ಲಿ ಹೂತು ಹೋಗಿದ್ದು ಅವುಗಳನ್ನು ಹೊರತೆಗೆಯುವ ಕೆಲಸಗಳು ಸಾಗುತ್ತಿದೆ, ಜೊತೆಗೆ ನಾಪತ್ತೆಯಾದವರ ಕಾರ್ಯಾಚರಣೆಯನ್ನು ತಂಡ ನಡೆಸುತ್ತಿದೆ.
ಮೇಘತ ಸ್ಪೋಟದ ತೀವ್ರತೆಗೆ ಕೆಸರು ಮಣ್ಣಿನಡಿ ದೊಡ್ಡ ದೊಡ್ಡ ವಾಹನಗಳುಸಿಲುಕಿಕೊಂಡಿವೆ, ಮೇಘಸ್ಫೋಟದಿಂದಾಗಿ 22 ಸೇನಾ ಸಿಬ್ಬಂದಿ ಸೇರಿದಂತೆ 103 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ವಿ ಬಿ ಪಾಠಕ್ ತಿಳಿಸಿದ್ದಾರೆ.
ಸಿಕ್ಕಿರುವ 18 ಮೃತದೇಹಗಳಲ್ಲಿ ನಾಲ್ವರನ್ನು ‘ಸೇನಾ ಜವಾನರು’ ಎಂದು ಗುರುತಿಸಲಾಗಿದೆ ಎಂದು ನೆರೆಯ ಪಶ್ಚಿಮ ಬಂಗಾಳ ಸರ್ಕಾರ ಹೇಳಿದೆ. ಅಲ್ಲದೆ ಗಾಯಗೊಂಡವರು ಸಿಕ್ಕಿಂನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ನಡುವೆ ಉತ್ತರ ಸಿಕ್ಕಿಂನ ಲಾಚೆನ್, ಲಾಚುಂಗ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಸಿಲುಕಿರುವ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Goregaon: 7 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮೃತ್ಯು, 40ಕ್ಕೂ ಹೆಚ್ಚು ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್