ಸಿಕ್ಕಿಂನಲ್ಲಿ ಮೊದಲ ಪ್ರಕರಣ: ದೇಶದಲ್ಲಿ 1.30 ಲಕ್ಷ ದಾಟಿದ ಕೋವಿಡ್-19 ಸೋಂಕಿತರ ಸಂಖ್ಯೆ
Team Udayavani, May 24, 2020, 8:00 AM IST
ನವದೆಹಲಿ: ದೇಶದಲ್ಲಿ ಕೋವಿಡ್ 19 ಆರ್ಭಟ ಆರಂಭವಾದಗಿನಿಂದ ಸಿಕ್ಕಿಂ ರಾಜ್ಯದಲ್ಲಿ ಒಂದೂ ಪ್ರಕರಣಗಳು ಕಂಡುಬಂದಿರಲಿಲ್ಲ. ಇದೀಗ ದೆಹಲಿಯಿಂದ ಮರಳಿದ ಓರ್ವ ವ್ಯಕ್ತಿಗೆ ಸೋಂಕು ಧೃಡಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 6,654 ಹೊಸ ಪ್ರಕರಣಗಳು ಧೃಡಪಟ್ಟು ದಾಖಲೆ ಸೃಷ್ಟಿಯಾಗಿದೆ. ಆ ಮೂಲಕ ದೇಶದಲ್ಲಿ ಒಟ್ಟಾರೆಯಾಗಿ 1.30 ಲಕ್ಷ ಜನರು ವೈರಾಣು ಪೀಡಿತರಾಗಿದ್ದು, ಮೃತರ ಸಂಖ್ಯೆ 3,720ಕ್ಕೆ ಏರಿಕೆಯಾಗಿದೆ. ಕಳೆದ ಒಂದು ದಿನದಲ್ಲಿ 137 ಜನರು ಮೃತಪಟ್ಟಿದ್ದರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ ರಾಜ್ಯದಲ್ಲಿ ಅತೀ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿದ್ದು 44,000 ಜನರು ವೈರಾಣುವಿನಿಂದ ಬಳಲುತ್ತಿದ್ದಾರೆ. ನಂತರದಲ್ಲಿ ತಮಿಳುನಾಡುವಿನಲ್ಲಿ 15,512 ಜನರು ಸೋಂಕುವಿಗೆ ತುತ್ತಾದರೆ, ಗುಜರಾತ್ ನಲ್ಲಿ 13,268, ಮತ್ತು ದೆಹಲಿಯಲ್ಲಿ 12,910 ವೈರಸ್ ನಿಂದ ಭಾಧಿತರಾಗಿದ್ದಾರೆ.
ಗಮನಾರ್ಹ ಸಂಗತಿಯೆಂದರೇ 1,15,364 ಜನರ ಗಂಟಲು ದ್ರವ ಮಾದರಿಗಳನ್ನು ಕಳೆದ 24 ಗಂಟೆಗಳಲ್ಲಿ ಪರೀಕ್ಷಿಸಲಾಗಿದೆ. ಈಗಾಗಲೇ ಸೋಂಕಿನಿಂದ 54,385 ಜನರು ಗುಣಮುಖರಾಗಿದ್ದಾರೆ.
ಮತ್ತೋಂದೆಡೆ ಅಮೆರಿಕಾದಲ್ಲಿ ಮರಣ ಮೃದಂಗ ಮುಂದುವರೆದಿದ್ದು, ಒಂದೇ ದಿನ 1,127 ಜನರು ಮೃತಪಟ್ಟಿದ್ದಾರೆ. ಈ ದೇಶದಲ್ಲಿ ಮೃತರ ಪ್ರಮಾಣ 97 ಸಾವಿರದ ಗಡಿ ದಾಟಿದ್ದು, ಸೋಂಕಿತರ ಸಂಖ್ಯೆ ಕೂಡ ಗಣನೀಯ ಏರಿಕೆ (16,21,658) ಕಂಡಿದೆ.
ಜಗತ್ತಿನಾದ್ಯಂತ ಕೋವಿಡ್ 19 ಮಹಾಮಾರಿಗೆ 3,43,823 ಜನರು ಬಲಿಯಾಗಿದ್ದು ಸೋಂಕಿತರ ಪ್ರಮಾಣ 54,02,198ಕ್ಕೆ ಏರಿಕೆಯಾಗಿದೆ. ವೈರಾಣುವಿಗೆ ತುತ್ತಾದವರಲ್ಲಿ ಸುಮಾರು 22,47,237 ಜನರು ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ