ನೀರಲ್ಲೇ ನಿಂತು ಅಹವಾಲು ಆಲಿಕೆ: ಅಸ್ಸಾಂ ಸಿಲ್ಚಾರ್ನಲ್ಲಿ ಸಿಎಂ ಹಿಮಾಂತ ಪರಿಶೀಲನೆ
Team Udayavani, Jun 27, 2022, 7:10 AM IST
ಗುವಾಹಟಿ: ಅಸ್ಸಾಂನಲ್ಲಿ ಒಂದು ವಾರದಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, 27 ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಇನ್ನೂ ತಗ್ಗಿಲ್ಲ. ಇದರಿಂದಾಗಿ ಬರೋಬ್ಬರಿ 25 ಲಕ್ಷ ಜನರ ಜೀವನ ಸಂಕಷ್ಟದಲ್ಲಿದೆ ಎಂದು ರಾಜ್ಯ ಸರ್ಕಾರ ಭಾನುವಾರ ತಿಳಿಸಿದೆ.
ನೆರೆಯಿಂದಾಗಿ ಮುಳುಗಿರುವ ಚಚಾರ್ ಜಿಲ್ಲೆಯ ಸಿಲ್ಚಾರ್ ನಗರಕ್ಕೆ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಭಾನುವಾರ ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವಾರದಲ್ಲಿ ಈ ನಗರಕ್ಕೆ ಸಿಎಂ ಅವರ 2ನೇ ಭೇಟಿ ಇದಾಗಿದೆ. ಹರಿಯುತ್ತಿರುವ ಪ್ರವಾಹದ ನೀರಿನ ನಡುವೆಯೇ ನಡೆದು, ಸ್ಥಳೀಯರ ಅಳಲು ಆಲಿಸಿದರು.
ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯ ನಡೆಸುತ್ತಿದೆ ಎಂದು ತಿಳಿಸಿ 27 ಜಿಲ್ಲೆಗಳ 79 ನಗರಗಳು ಮತ್ತು 2,894 ಗ್ರಾಮಗಳು ಪ್ರವಾಹ ಎದುರಿಸುತ್ತಿವೆ. 637 ಗಂಜಿ ಕೇಂದ್ರಗಳಲ್ಲಿ 2.33 ಲಕ್ಷ ಜನರಿಗೆ ವಸತಿ ಕಲ್ಪಿಸಲಾಗಿದೆ ಎಂದು ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ರಾಜ್ಯದಲ್ಲಿ ಈಗಾಗಲೇ 121 ಮಂದಿ ಪ್ರವಾಹಕ್ಕೆ ಬಲಿಯಾಗಿದ್ದಾರೆ.
ಶಾಲು ಕೊಡಲು ಬಂದ:
ಮುಖ್ಯಮಂತ್ರಿ ಪರಿಶೀಲನೆ ನಡೆಸುತ್ತಿದ್ದಾಗ ಮನೆಯೊಂದರ ಗೇಟಿನ ಮೇಲೆ ನಿಂತ ವ್ಯಕ್ತಿ ಶಾಲನ್ನು ಸಿಎಂ ಕೊಡಲು ಮುಂದಾಗಿದ್ದಾನೆ. ಆಯ ತಪ್ಪಿ ನೀರಿನೊಳಗೆ ಬಿದ್ದಿದ್ದಾನೆ. ನಂತರ ರಕ್ಷಣಾ ಸಿಬ್ಬಂದಿ ಆತನನ್ನು ಸಿಎಂ ಬಳಿ ಕರೆತಂದಿದ್ದಾರೆ. ಆತ ಸಿಎಂಗೆ ಶಾಲು ಕೊಟ್ಟು ನಮಸ್ಕರಿಸಿದ್ದಾನೆ. ಮುಂದಿನ ಬಾರಿ ನಗರಕ್ಕೆ ಬಂದಾಗ ಮನೆಗೆ ಬಂದು ಚಹಾ ನಿಮ್ಮೊಂದಿಗೆ ಚಹಾ ಕುಡಿಯುತ್ತೇನೆಂದು ಸಿಎಂ ಹಿಮಾಂತ ವಾಗ್ಧಾನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ