ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು
Team Udayavani, Oct 17, 2021, 8:46 AM IST
ಹೊಸದಿಲ್ಲಿ: ಸಿಂಘು ಗಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಹಾಂಗ್ ಸಮುದಾಯದ ಮತ್ತಿಬ್ಬರು ಹರ್ಯಾಣ ಪೊಲೀಸರೆದುರು ಶರಣಾಗಿದ್ದಾರೆ. ನಿಹಾಂಗ್ ಸಮುದಾಯದ ಭಗವಂತ್ ಸಿಂಗ್ ಮತ್ತು ಗೋವಿಂದ್ ಸಿಂಗ್ ಶರಣಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ನಿಹಾಂಗ್ ಸರಬಿತ್ 7 ದಿನ ಕಸ್ಟಡಿಗೆ: ಸಿಂಘು ಗಡಿಯಲ್ಲಿ ದಲಿತ ವ್ಯಕ್ತಿಯೊಬ್ಬನ ಎಡಗೈ ಕತ್ತರಿಸಿ ಅತ್ಯಂತ ಕ್ರೂರವಾಗಿ ಕೊಲೆಗೈದ ಪ್ರಕರಣದ ಆರೋಪಿ ನಿಹಾಂಗ್ ಸಿಖ್ ಸರಬ್ಜಿತ್ನನ್ನು ಶನಿವಾರ ಸ್ಥಳೀಯ ನ್ಯಾಯಾಲಯವು 7 ದಿನಗಳ ಕಾಲ ಪೊಲೀಸ್ ವಶಕ್ಕೊಪ್ಪಿಸಿದೆ. ಜತೆಗೆ, ಪ್ರಕರಣ ಸಂಬಂಧ ನಾರಾಯಣ ಸಿಂಗ್ ಎಂಬಾತನನ್ನೂ ಬಂಧಿಸಲಾಗಿದೆ.
ಇನ್ನೂ ನಾಲ್ವರು ಆರೋಪಿಗಳ ಬಗ್ಗೆ ಸರಬ್ಜಿತ್ ಮಾಹಿತಿ ನೀಡಿದ್ದು, ಅವರನ್ನು ವಶಕ್ಕೆ ಪಡೆಯಲು ನಾವು ಈತನನ್ನು ಪಂಜಾಬ್ನ ಗುರುದಾಸ್ಪುರಕ್ಕೆ ಕರೆದೊಯ್ಯಬೇಕಾಗುತ್ತದೆ. ಅಲ್ಲದೇ, ಲಖ್ಬೀರ್ ಸಿಂಗ್ ಕೊಲೆಗೆ ಬಳಸಲಾದ ಕತ್ತಿಯೂ ಸಿಕ್ಕಿದ್ದು, ಸರಬ್ಜಿತ್ನನ್ನು 14 ದಿನಗಳ ಕಾಲ ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟ್ಗೆ ಮನವಿ ಮಾಡಿದ್ದರು. ಕೊನೆಗೆ ಕೋರ್ಟ್ 7 ದಿನಗಳ ಕಾಲ ವಶಕ್ಕೆ ನೀಡಿ ಆದೇಶ ಹೊರಡಿಸಿತು.
ಇದೇ ವೇಳೆ ಶನಿವಾರ ಮಾತನಾಡಿರುವ ಲಖ್ಬೀರ್ ಅವರ ಸೋದರಿ ರಾಜ್ ಕೌರ್, “ಲಖ್ಬೀರ್ ನನ್ನಿಂದ 50 ರೂ. ಪಡೆದು ಛಾಬಾಲ್ನಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದ. 7 ದಿನಗಳಲ್ಲಿ ವಾಪಸ್ ಬರುವುದಾಗಿಯೂ ತಿಳಿಸಿದ್ದ. ಅವನು ಗುರು ಗ್ರಂಥ ಸಾಹಿಬ್ ಅನ್ನು ವಿರೂಪಗೊಳಿಸುವಂಥ ವ್ಯಕ್ತಿಯಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ