ಗುಲಾಂ ನಬಿ ಆಯ್ತು ಈಗ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಯೆಚೂರಿಗೆ ತಡೆ, ವಶಕ್ಕೆ
Team Udayavani, Aug 9, 2019, 1:25 PM IST
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಹಿನ್ನೆಲೆಯಲ್ಲಿ ಪಕ್ಷದ ಸದಸ್ಯರನ್ನು ಭೇಟಿಯಾಗಲು ಆಗಮಿಸಿದ್ದ ಸಿಪಿಐ(ಎಂ)ನ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಶುಕ್ರವಾರ ಶ್ರೀನಗರ ವಿಮಾನ ನಿಲ್ದಾಣದಲ್ಲಿಯೇ ತಡೆಯಾಗಿದೆ ಎಂದು ವರದಿ ತಿಳಿಸಿದೆ.
ಶ್ರೀನಗರ ವಿಮಾನ ನಿಲ್ದಾಣದಲ್ಲಿ ಯೆಚೂರಿ ಬಂದಿಳಿಯುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿರುವ ಸಿಪಿಐಎಂ ಶಾಸಕ ಟಾರಿಗಾಮಿ ಅವರನ್ನು ಭೇಟಿಯಾಗಲು ಬರುವುದಾಗಿ ಯೆಚೂರಿ ಅವರು ಗವರ್ನರ್ ಗೆ ಮಾಹಿತಿ ನೀಡಿದ್ದರು. ಆದರೆ ಈ ಬಂಧನವನ್ನು ಖಂಡಿಸುವುದಾಗಿ ಸಿಪಿಐಎಂ ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.
ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿ ರದ್ದು ಹಿನ್ನೆಲೆಯಲ್ಲಿ ಕಾಶ್ಮೀರಕ್ಕೆ ತೆರಳಲು ಯತ್ನಿಸಿದ್ದ ಕಾಂಗ್ರೆಸ್ ಮುಖಂಡ, ರಾಜ್ಯಸಭೆ ಸದಸ್ಯ ಗುಲಾಂ ನಬಿ ಆಜಾದ್ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ತಡೆದು ವಾಪಸ್ ಕಳುಹಿಸಲಾಗಿತ್ತು