ಸೀತೆ ಪ್ರನಾಳ ಶಿಶುವಂತೆ
Team Udayavani, Jun 2, 2018, 10:06 AM IST
ಲಕ್ನೋ: ಮಹಾಭಾರತ ಕಾಲದಲ್ಲೂ ಅಂತರ್ಜಾಲ ಇತ್ತು ಎಂದು ತ್ರಿಪುರಾ ಸಿಎಂ ಬಿಪ್ಲಬ್ ದೇಬ್ ಹೇಳಿಕೆ ನೀಡಿದ ಬೆನ್ನಲ್ಲೇ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರು, “ಸೀತಾ ಮಾತೆ ಜನಿಸಿದ್ದು ಪ್ರನಾಳ ಶಿಶು ತಂತ್ರಜ್ಞಾನದಿಂದ’ ಎಂಬ ಹೇಳಿಕೆ ನೀಡಿ ಹಾಸ್ಯಕ್ಕೆ ಗುರಿಯಾಗಿದ್ದಾರೆ.
ಮಥುರಾದಲ್ಲಿ ಮಾತನಾಡಿದ ಅವರು, “ರಾಮಾಯಣದಲ್ಲಿ ಸೀತೆ ಜನಕನಿಗೆ ಸಿಕ್ಕಿದ್ದು ಗಡಿಗೆಯಲ್ಲಿ. ಆಗಲೇ ಪ್ರನಾಳ ಶಿಶು ತಂತ್ರಜ್ಞಾನ ಇತ್ತು ಎಂಬುದಕ್ಕೆ ಇದೇ ಸಾಕ್ಷಿ’ ಎಂದಿದ್ದಾರೆ. ಅಲ್ಲದೇ, ಪತ್ರಿಕೋದ್ಯಮವೂ ಕೂಡ ಮಹಾಭಾರತದ ಕಾಲದಲ್ಲಿತ್ತು. ಅಂದಿನ ನಾರದನೇ ಇಂದಿನ ಗೂಗಲ್ ಎಂದೂ ಹೇಳಿದ್ದಾರೆ.
ಶರ್ಮಾ ಅವರ ಈ ಹೇಳಿಕೆಗೆ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದರ್ ಯಾದವ್ ಅವರು ಶರ್ಮಾ ಜತೆ ಮಾತನಾಡಿ, ಪಕ್ಷದ ನಾಯಕತ್ವ ನಿಮ್ಮ ಹೇಳಿಕೆಯಿಂದ ಅಸಮಾಧಾನಗೊಂಡಿದ್ದು, ಇಂಥ ಹೇಳಿಕೆಗಳಿಂದ ದೂರವಿರಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಇದೆಲ್ಲದರ ನಡುವೆ, ಗುಜರಾತ್ನ 12ನೇ ತರಗತಿ ಪಠ್ಯದಲ್ಲಿ, “ಸೀತೆಯನ್ನು ಅಪಹರಿಸಿಕೊಂಡು ಹೋಗಿ ರಾಮ’ ಎಂದು ಉಲ್ಲೇಖೀಸಲಾಗಿದೆ. ಈ ವಿಷಯ ಕೂಡ ಈಗ ವಿವಾದಕ್ಕೆ ಒಳಗಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ