ಉತ್ತರ ಪ್ರದೇಶ: ವಿಷ ಮದ್ಯ ಸೇವಿಸಿ 6 ಸಾವು, 10 ಅಬಕಾರಿ ಸಿಬಂದಿ ಸಸ್ಪೆಂಡ್
Team Udayavani, May 28, 2019, 12:32 PM IST
ಬಾರಾಬಂಕಿ, ಉತ್ತರ ಪ್ರದೇಶ : ಬಾರಾಬಂಕಿ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ವಿಷ ಮದ್ಯ ಸೇವಿಸಿ ಕನಿಷ್ಠ ಆರು ಮಂದಿ ಮೃತಪಟ್ಟು ಇತರ ಅನೇಕರು ಅಸ್ವಸ್ಥರಾಗಿರುವುದಾಗಿ ರಾಜ್ಯ ಅಬಕಾರಿ ಸಚಿವ ಜೈ ಪ್ರಕಾಶ್ ಸಿಂಗ್ ಇಂದು ಮಂಗಳವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 10 ಅಬಕಾರಿ ಸಿಬಂದಿಗಳನ್ನು ಅಮಾನತು ಮಾಡಲಾಗಿದೆ.
ರಾಮನಗರ ಸಮೀಪ ದನ್ವೀರ್ ಸಿಂಗ್ ಎಂಬಾತನ ಅಂಗಡಿಯಲ್ಲಿ ನಿನ್ನೆ ಸೋಮವಾರ ರಾತ್ರಿ ಮದ್ಯ ಖರೀದಿಸಿ ಸೇವಿಸಿದವರ ಪೈಕಿ ಆರು ಮಂದಿ ಮೃತಪಟ್ಟರೆಂದು ಸಚಿವರು ತಿಳಿಸಿದ್ದಾರೆ.
ರಾಣಿಗಂಜ್ ಮತ್ತು ಆಸುಪಾಸಿನ ಹಳ್ಳಿಗರು ಈ ವಿಷ ಮದ್ಯ ಸೇವಿಸಿದ್ದು ಹಲವರು ಅಸ್ವಸ್ಥರಾಗಿದ್ದಾರೆ. ಇವರನ್ನು ರಾಮನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರು ಮಂದಿ ಮೃತರಲ್ಲಿ ನಾಲ್ಕು ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಘಟನೆಗೆ ಸಂಬಂಧಿಸಿ ಅಬಕಾರಿ ಇಲಾಖೆಯ ಜಿಲ್ಲಾ ಅಬಕಾರಿ ಅಧಿಕಾರಿ, ಇನ್ಸ್ಪೆಕ್ಟರ್, ಮೂವರು ಹೆಡ್ ಕಾನ್ಸ್ಟೆಬಲ್ಗಳು ಮತ್ತು ಐವರು ಕಾನ್ಸ್ಟೆಬಲ್ಗಳನ್ನು ಅಮಾನತು ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ