ಸಹೋದರಿಯರಿಬ್ಬರ ಗ್ಯಾಂಗ್ ರೇಪ್, ಬರ್ಬರ ಹತ್ಯೆ ; ಆರು ಮಂದಿ ಬಂಧನ
ಶವಗಳನ್ನು ಮರಕ್ಕೆ ನೇತು ಹಾಕಲಾಗಿತ್ತು...ಯುಪಿ ಪೊಲೀಸರ ರಾತ್ರೋರಾತ್ರಿ ಕಾರ್ಯಾಚರಣೆ
Team Udayavani, Sep 15, 2022, 2:48 PM IST
ಲಖಿಂಪುರ ಖೇರಿ: ಅತ್ಯಾಚಾರ ಎಸಗಿ ಇಬ್ಬರು ಬಾಲಕಿಯರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
15 ಮತ್ತು 17 ವರ್ಷದ ಸಹೋದರಿಯರಿಬ್ಬರ ಮೃತ ದೇಹಗಳನ್ನು ಅವರ ಮನೆಯಿಂದ ಒಂದು ಕಿ.ಮೀ ದೂರವಿರುವ ಕಬ್ಬಿಣ ಗದ್ದೆಗಳ ಪಕ್ಕದಲ್ಲಿರುವ ಮರದಲ್ಲಿ ನೇತು ಹಾಕಲಾಗಿತ್ತು. ನಿಘಾಸಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಈ ಪ್ರಕರಣ ನಡೆದಿದೆ.
”ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಜುನೈದ್, ಸೊಹೈಲ್, ಹಫೀಜುರ್ ರೆಹಮಾನ್, ಕರೀಮುದ್ದೀನ್, ಆರಿಫ್ ಮತ್ತು ಚೋಟು ಎಂಬ ಆರೋಪಿಗಳನ್ನು ಬಂಧಿಸಿದ್ದೇವೆ” ಎಂದು ಲಖಿಂಪುರ ಖೇರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
“ಪ್ರಾಥಮಿಕ ತನಿಖೆಯ ಪ್ರಕಾರ, ಜುನೈದ್ ಮತ್ತು ಸೊಹೈಲ್ ಇಬ್ಬರು ಸಹೋದರಿಯರೊಂದಿಗೆ ಸಂಬಂಧ ಹೊಂದಿದ್ದರು.ಜುನೈದ್ ಮತ್ತು ಸೊಹೈಲ್ ಅವರ ಮನವೊಲಿಸಿದ ನಂತರ ಇಬ್ಬರು ಸಹೋದರಿಯರು ಬುಧವಾರ ಮಧ್ಯಾಹ್ನ ತಮ್ಮ ಮನೆಯಿಂದ ಹೊರಬಂದಿದ್ದರು. ಜುನೈದ್ ಮತ್ತು ಸೊಹೈಲ್ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ನಂತರ ಕತ್ತು ಹಿಸುಕಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ” ಎಂದು ಎಸ್ಪಿ ಹೇಳಿದರು.
”ಹತ್ಯೆಯ ನಂತರ ದೇಹಗಳನ್ನು ವಿಲೇವಾರಿ ಮಾಡಲು ಇಬ್ಬರೂ ಕರೀಮುದ್ದೀನ್ ಮತ್ತು ಆರಿಫ್ ಅವರನ್ನುಕರೆದಿದ್ದು ಎಲ್ಲರೂ ಸೇರಿ ದೇಹಗಳನ್ನು ಮರಕ್ಕೆ ನೇಣು ಹಾಕಿಕೊಂಡ ರೀತಿಯಲ್ಲಿ ನೇತು ಹಾಕಿ, ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ” ಎಂದು ಸುಮನ್ ಹೇಳಿದ್ದಾರೆ.
ಬಾಲಕಿಯರ ತಾಯಿ ತನ್ನ ಮಕ್ಕಳನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ