ಜಾರ್ಖಂಡ್ ವಿಧಾನಸಭಾ ಚುನಾವಣೆಗೂ ಮುನ್ನ ವಿಪಕ್ಷಗಳ 6 ಶಾಸಕರು ಬಿಜೆಪಿ ತೆಕ್ಕೆಗೆ
Team Udayavani, Oct 23, 2019, 12:54 PM IST
ರಾಂಚಿ:ಮುಂಬರುವ ವಿಧಾನಸಭಾ ಚುನಾವಣೆಯ ನಡುವೆಯೇ ಜಾರ್ಖಂಡ್ ನಲ್ಲಿ ವಿರೋಧ ಪಕ್ಷದ ಆರು ಮಂದಿ ಶಾಸಕರು ಬುಧವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ರಘುವರ್ ದಾಸ್ ಸಮ್ಮುಖದಲ್ಲಿ ಆರು ಶಾಸಕರು ಬಿಜೆಪಿ ಸೇರ್ಪಡೆಗೊಂಡರು.
ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ)ದ ಶಾಸಕ ಕುನಾಲ್ ಸಾರಂಗಿ, ಜೆಪಿ ಭಾಯಿ ಪಟೇಲ್ ಮತ್ತು ಛಾಮ್ರಾ ಲಿಂಡಾ, ಕಾಂಗ್ರೆಸ್ ಪಕ್ಷದ ಸುಖ್ ದೇವೋ ಭಗತ್ ಹಾಗೂ ನವ ಜವಾನ್ ಸಂಘರ್ಷ ಮೋರ್ಚಾದ ಮನೋಜ್ ಯಾದವ್, ಭಾನು ಪ್ರತಾಪ್ ಶಾಹಿ ಆಡಳಿತಾರೂಢ ಬಿಜೆಪಿ ಪಕ್ಷದ ತೆಕ್ಕೆಗೆ ಸೇರ್ಪಡೆಗೊಂಡಿದ್ದಾರೆ.
ವಿರೋಧ ಪಕ್ಷಗಳ ಶಾಸಕರ ಪಕ್ಷಾಂತರದಿಂದಾಗಿ ಜಾರ್ಖಂಡ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷಗಳ ಬಲ ಕುಗ್ಗಿದಂತಾಗಿದೆ ಎಂದು ವರದಿ ವಿವರಿಸಿದೆ. ಬಿಜೆಪಿ ಈಗಾಗಲೇ ಜನ್ ಆಶೀರ್ವಾದ್ ಯಾತ್ರಾ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ