ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ: 6 ಪ್ರಯಾಣಿಕರಿಗೆ ಗಾಯ
Team Udayavani, May 29, 2018, 10:37 AM IST
ಹೊಸದಿಲ್ಲಿ : ಸಿಯಾಲ್ಡಾ – ನ್ಯೂಡೆಲ್ಲಿ ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಮಾನ್ಪುರದಲ್ಲಿ ಅಪರಿಚಿತ ದುಷ್ಕರ್ಮಿಗಳು ನಿನ್ನೆ ಸೋಮವಾರ ತಡ ರಾತ್ರಿ ಕಲ್ಲೆಸೆದ ಕಾರಣ ಆರು ಮಂದಿ ಪ್ರಯಾಣಿಕರು ಗಾಯಗೊಂಡರು.
ಅಪರಿಚಿತ ದುಷ್ಕರ್ಮಿಗಳಿಂದ ನಡೆದಿರುವ ಈ ಕಲ್ಲೆಸೆತಕ್ಕೆ ಕಾರಣವೇನೆಂದು ಗೊತ್ತಾಗಿಲ್ಲ; ಆ ಬಗ್ಗೆ ಈಗ ತನಿಖೆ ನಡೆಯುತ್ತಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
ದುಷ್ಕರ್ಮಿಗಳ ಕಲ್ಲೆಸೆತಕ್ಕೆ ಎರಡು ಬೋಗಿಗಳು ಗುರಿಯಾದ ಕಾರಣ ಅವುಗಳ ಕಿಟಕಿ ಗಾಜು ಪುಡಿಯಾಯಿತು. ಕನಿಷ್ಠ ಆರು ಮಂದಿ ಪ್ರಯಾಣಿಕರು ಗಾಯಗೊಂಡರು. ಕೂಡಲೇ ಗಾಯಾಳು ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಗಯಾದಲ್ಲಿ ಕಿಟಕಿ ಗಾಜುಗಳನ್ನು ಬದಲಾಯಿಸಲಾಯಿತು.
ದುಷ್ಕರ್ಮಿಗಳು ಕಲ್ಲೆ ಸೆದಾಕ್ಷಣವೇ ಅವರನ್ನು ಹಿಡಿಯುವ ಪ್ರಯತ್ನವನ್ನು ಸ್ಥಳೀಯ ಅಧಿಕಾರಿಗಳು ನಡೆಸಿದರು; ಆದರೆ ದುಷ್ಕರ್ಮಿಗಳು ಕತ್ತಲೆಯ ಲಾಭ ಪಡೆದು ಪಲಾಯನ ಮಾಡಿದರು.
ರೈಲ್ವೇ ರಕ್ಷಣಾ ಪಡೆಯ ಸಿಬಂದಿಗಳು ಈಗ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!