ಶ್ರೀನಗರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ,ಆರು ಯೋಧರಿಗೆ ಗಾಯ


Team Udayavani, Oct 27, 2019, 6:05 AM IST

graned-attack

ಶ್ರೀನಗರ/ಹೊಸದಿಲ್ಲಿ: ದೇಶವಿಡೀ ದೀಪದ ಹಬ್ಬದ ಖುಷಿಯಲ್ಲಿ ತೇಲುತ್ತಿದ್ದರೆ, ಕಣಿವೆ ರಾಜ್ಯದಲ್ಲಿ ಉಗ್ರರು ಅಟ್ಟಹಾಸ ಮುಂದುವರಿಸಿದ್ದಾರೆ. ಶ್ರೀನಗರದಲ್ಲಿ ಶನಿವಾರ ಭದ್ರತಾ ಪಡೆಯ ಯೋಧರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗ್ರೆನೇಡ್‌ ದಾಳಿ ನಡೆಸಿದ್ದು, 6 ಮಂದಿ ಯೋಧರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶನಿವಾರ ಸಂಜೆ 6.50ರ ವೇಳೆಗೆ ಈ ಘಟನೆ ನಡೆದಿದೆ. ಶ್ರೀನಗರದ ಕರನ್‌ ನಗರ್‌ ಪ್ರದೇಶದಲ್ಲಿ ಸಿಆರ್‌ಪಿಎಫ್ ಯೋಧರ ತಂಡದತ್ತ ಗ್ರೆನೇಡ್‌ ಎಸೆದ ಉಗ್ರರು, ಏಕಾಏಕಿ ಗುಂಡಿನ ದಾಳಿಯನ್ನೂ ಶುರುವಿಟ್ಟುಕೊಂಡಿದ್ದಾರೆ. ದಿಢೀರ್‌ ಗ್ರೆನೇಡ್‌ ಸ್ಫೋಟಗೊಂಡ ಕಾರಣ ಆ ಪ್ರದೇಶದಲ್ಲಿದ್ದವರು ಗೊಂದಲಕ್ಕೀಡಾಗಿ ಓಡತೊಡಗಿ ದ್ದಾರೆ. ಕೂಡಲೇ ಭದ್ರತಾ ಪಡೆ ಯೋಧರು ಪ್ರತಿ ದಾಳಿ ಆರಂಭಿಸಿದ್ದಾರೆ. 6 ಯೋಧರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಭಿವೃದ್ಧಿಗೆ ಪೂರಕ: ಜಮ್ಮು ಮತ್ತು ಕಾಶ್ಮೀರದ ಸ್ಥಿತಿಗತಿ ಕುರಿತು ಶನಿವಾರ ಮಾತನಾಡಿರುವ ಕೇಂದ್ರ ಸಚಿವ ಅಮಿತ್‌ ಶಾ, 370ನೇ ವಿಧಿ ರದ್ದತಿಯು ಜಮ್ಮು-ಕಾಶ್ಮೀರದ ಅಭಿವೃದ್ಧಿಗೆ ಅವಕಾಶ ಕಲ್ಪಿಸಿತು ಎಂದಿದ್ದಾರೆ. ವಿಶೇಷ ಸ್ಥಾನಮಾನ ವಾಪಸ್‌ ಪಡೆದರೆ ರಕ್ತಪಾತವಾಗುತ್ತದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಾರೆ. ಆದರೆ, ಅಂಥದ್ದೇನೂ ನಡೆದಿಲ್ಲ. ಒಂದೇ ಒಂದು ಬುಲೆಟ್‌ ಕೂಡ ಫೈರ್‌ ಆಗಿಲ್ಲ. ಒಂದೇ ಒಂದು ಸಾವೂ ಸಂಭವಿಸಿಲ್ಲ ಎಂದಿದ್ದಾರೆ. ಇನ್ನೊಂದೆಡೆ, ಮುಂದಿನ ವಾರ ಅಸ್ತಿತ್ವಕ್ಕೆ ಬರಲಿರುವ ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ ಕೇಂದ್ರಾಡಳಿತ ಪ್ರದೇಶಗಳಿಗೆ ಸಮಾನ ಸೌಲಭ್ಯಗಳು ಹಾಗೂ ಅನುಕೂಲತೆಗಳನ್ನು ಕಲ್ಪಿಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಭರವಸೆ ನೀಡಿದ್ದಾರೆ.

ಯುದ್ಧಕ್ಕೆ ಪ್ರಚೋದನೆ ಎಂದ ಪಾಕ್‌: ಇದೇ ವೇಳೆ, “ಪಿಒಕೆಯನ್ನು ಉಗ್ರರು ನಿಯಂತ್ರಿಸುತ್ತಿದ್ದಾರೆಯೇ ಹೊರತು ಪಾಕ್‌ ಸರಕಾರವಲ್ಲ’ ಎಂಬ ಸೇನಾ ಮುಖ್ಯಸ್ಥ ಜ| ಬಿಪಿನ್‌ ರಾವತ್‌ ಅವರ ಶುಕ್ರವಾರದ ಹೇಳಿಕೆಗೆ ಪಾಕ್‌ ಸೇನೆ ಶನಿವಾರ ಪ್ರತಿಕ್ರಿಯೆ ನೀಡಿದೆ. ಭಾರತದ ಸೇನಾ ಮುಖ್ಯಸ್ಥರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುವ ಮೂಲಕ ಯುದ್ಧಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಪಾಕ್‌ ಸೇನೆ ಆರೋಪಿಸಿದೆ.

ಒಳನುಸುಳುವಿಕೆ 5 ವರ್ಷಗಳಲ್ಲೇ ಅಧಿಕ
2018ರಲ್ಲಿ ಪಾಕ್‌ ಮೂಲದ ಉಗ್ರ ಸಂಘಟನೆಗಳು ಭಾರತದೊಳಕ್ಕೆ ನುಸುಳಲು 328 ಬಾರಿ ಪ್ರಯತ್ನಿಸಿದ್ದು, ಈ ಪೈಕಿ 143 ಯತ್ನಗಳು ಸಫ‌ಲವಾಗಿವೆ. ಹಿಂದಿನ 5 ವರ್ಷಗಳಿಗೆ ಹೋಲಿಸಿದರೆ ಉಗ್ರರ ಒಳನುಸುಳುವಿಕೆಯು ಕಳೆದ ವರ್ಷವೇ ಅಧಿಕ ಎಂದು ಕೇಂದ್ರ ಗೃಹ ಸಚಿವಾಲಯದ ವರದಿ ತಿಳಿಸಿದೆ. ಅಷ್ಟೇ ಅಲ್ಲ, ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ 257 ಭಯೋತ್ಪಾದಕರು ಮತ್ತು 91 ಮಂದಿ ಭದ್ರತಾ ಸಿಬಂದಿ ಮೃತಪಟ್ಟಿದ್ದು, ಇದು ಕೂಡ 5 ವರ್ಷಗಳಲ್ಲೇ ಅತ್ಯಧಿಕ ಎಂದೂ ಹೇಳಲಾಗಿದೆ. ಈ ಅವಧಿಯಲ್ಲಿ 9 ಮಂದಿ ನಾಗರಿಕರು ಕೂಡ ಸಾವಿಗೀಡಾಗಿದ್ದಾರೆ ಎಂದಿದೆ ವರದಿ. 2017ರಲ್ಲಿ 419 ನುಸುಳು ಯತ್ನಗಳು ನಡೆದಿದ್ದು, 136 ಯಶಸ್ವಿಯಾಗಿವೆ. 2016ರಲ್ಲಿ 371 ಯತ್ನ ನಡೆದಿದ್ದು, 119 ಸಫ‌ಲವಾಗಿವೆ ಎಂದೂ ವರದಿ ಹೇಳಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.