ಕಿವಿಗೆ ಇಯರ್ ಫೋನ್ ಹಾಕಿಕೊಂಡಿದ್ದ 6 ಯುವಕರು ರೈಲಿಗೆ ಬಲಿ
Team Udayavani, Feb 26, 2018, 3:35 PM IST
ಲಕ್ನೋ : ಕಿವಿಗೆ ಇಯರ್ ಫೋನ್ ಸಿಕ್ಕಿಸಿಕೊಂಡು ಸಂಗೀತ ಕೇಳುತ್ತಾ ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದ ಆರು ಮಂದಿ ಯುವಕರು ರೈಲು ಹರಿದು ದಾರುಣವಾಗಿ ಮೃತ ಪಟ್ಟ ದಾರುಣ ಘಟನೆ ಇಂದು ಸೋಮವಾರ ನಸುಕಿನ ವೇಳೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೀಲಾಖುಂವಾ ಸಮೀಪ ರೈಲು ಹಳಿಯಲ್ಲಿ ನಡದಿರುವ ಈ ಘಟನೆಯಲ್ಲಿ ಒಟ್ಟು ಏಳು ಮಂದಿ ಯುವಕರು ರೈಲು ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಇವರೆಲ್ಲರೂ ತಮ್ಮ ಕಿವಿಗೆ ಇಯರ್ ಫೋನ್ ಸಿಕ್ಕಿಸಿಕೊಂಡು ಸಂಗೀತ ಆಲಿಸುತ್ತಾ ಹೋಗುತ್ತಿದ್ದರು. ಹಾಗಾಗಿ ಇವರಿಗೆ ರೈಲು ತಮ್ಮ ಮೈಮೇಲೆ ಏರಿ ಬರುವ ತನಕವೂ ಗೊತ್ತಾಗಲೇ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಮೃತಪಟ್ಟ ಆರು ಮಂದಿ ಪೇಂಟಿಂಗ್ ವೃತ್ತಿ ಮಾಡಿಕೊಂಡಿದ್ದ ಕೂಲಿ ಕಾರ್ಮಿಕರು. ಇವರು ಗಾಜಿಯಾಬಾದ್ ನಿಂದ ಬರುವ ರೈಲನ್ನು ಹತ್ತುವವರಿದ್ದರು. ಹೈದರಾಬಾದ್ನಲ್ಲಿ ಇವರಿಗೆ ಪೇಂಟಿಂಗ್ ಗುತ್ತಿಗೆ ಸಿಕ್ಕಿತ್ತು. ಆದರೆ ಇವರಿಗೆ ಆ ರೈಲು ತಪ್ಪಿಹೋಗಿತ್ತು. ಹಾಗಾಗಿ ಇವರು ಪೀಲಾಖುಂವಾ ಗೆ ಮರಳಲು ರೈಲು ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದರು.
ಮೃತ ಯುವಕರನ್ನು ಸಲೀಂ, ಆರಿಫ್, ಸಮೀರ್, ಆಕಾಶ್, ರಾಹುಲ್ ಮತ್ತು ವಿಜಯ್ ಎಂದು ಗುರುತಿಸಲಾಗಿದೆ. ಇನ್ನೊಬ್ಬ, ಏಳನೇ ವ್ಯಕ್ತಿ, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ