ಅಮೇಠಿಯಲ್ಲಿ ಸ್ಮತಿ ಇರಾನಿ ಆಪ್ತನ ಹತ್ಯೆ


Team Udayavani, May 27, 2019, 6:20 AM IST

smruthi-irani

ಅಮೇಠಿ: ಉತ್ತರಪ್ರದೇಶದಲ್ಲಿ ಮೊದಲ ಚುನಾವಣೋತ್ತರ ಹಿಂಸಾಚಾರ ಎಂಬಂತೆ ಅಮೇಠಿಯಲ್ಲಿ ಸಂಸದೆ ಸ್ಮತಿ ಇರಾನಿ ಅವರ ಆಪ್ತ, ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್‌(50) ಎಂಬವರನ್ನು ಶನಿವಾರ ರಾತ್ರಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ.

ಶನಿವಾರ ರಾತ್ರಿ 11.30ರ ವೇಳೆಗೆ ಅಮೇಠಿಯ ತಮ್ಮ ಮನೆಯ ಹೊರಗೆ ಕುಳಿತಿದ್ದಾಗ ಅಲ್ಲಿಗೆ ಬಂದ ಇಬ್ಬರು ದುಷ್ಕರ್ಮಿಗಳು ಸುರೇಂದ್ರ ಸಿಂಗ್‌ಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಇದೊಂದು ರಾಜಕೀಯ ದ್ವೇಷದ ಹತ್ಯೆ ಆಗಿರಲೂಬಹುದು ಎಂದು ಹೇಳಿರುವ ಹೆಚ್ಚುವರಿ ಎಸ್‌ಪಿ ದಯಾ ರಾಮ್‌, ಎಲ್ಲ ಕೋನಗಳಿಂದಲೂ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

“ಹಳೆಯ ದ್ವೇಷದ ಕುರಿತೂ ಮಾಹಿತಿ ಬಂದಿದೆ. ಜತೆಗೆ, ರಾಜಕೀಯ ದ್ವೇಷದಿಂದಾಗಿ ಕೊಲೆಯಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. 7 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆದಷ್ಟು ಬೇಗನೆ ತಪ್ಪಿತಸ್ಥರನ್ನು ಬಂಧಿಸುತ್ತೇವೆ’ ಎಂದು ಉತ್ತರಪ್ರದೇಶದ ಡಿಜಿಪಿ ಓಂಪ್ರಕಾಶ್‌ ಸಿಂಗ್‌ ಹೇಳಿದ್ದಾರೆ.

ಘಟನೆಗೆ ತೀವ್ರ ಖಂಡನೆ: ಸಿಂಗ್‌ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಉ.ಪ್ರದೇಶ ಉಪಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ, “ನಮ್ಮ ಪಕ್ಷದ ಕಾರ್ಯಕರ್ತನ ಸಾವು ದುರದೃಷ್ಟಕರ. ಅವರ ಕೊಲೆಗಾರರು ಭೂಮಿಯಡಿಯಲ್ಲಿ ಅವಿತಿದ್ದರೂ, ಅವರನ್ನು ಹಿಡಿದು ತರುತ್ತೇವೆ’ ಎಂದಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರ ಕೃತ್ಯ?: ಇದೇ ವೇಳೆ, ಇದು ಕಾಂಗ್ರೆಸ್‌ ಕಾರ್ಯಕರ್ತರ ಕೃತ್ಯವಿರಬಹುದು ಎಂಬ ಶಂಕೆಯೂ ಮೂಡಿದೆ. ಮೃತರ ಪುತ್ರ ಅಭಯ್‌ ಸಿಂಗ್‌ ಮಾತನಾಡಿ, “ಅಮೇಠಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಅವರನ್ನು ಸ್ಮತಿ ಇರಾನಿ ಅವರು ಸೋಲಿಸಿದ ಬೆನ್ನಲ್ಲೇ ಬಿಜೆಪಿ ಸಂಭ್ರಮಾಚರಣೆ ನಡೆಸಿತು. ಇದನ್ನು ಸಹಿಸಲಾಗದ ಕಾಂಗ್ರೆಸ್‌ ಪರ ಸಮಾಜವಿದ್ರೋಹಿ ಶಕ್ತಿಗಳೇ ಈ ಕೃತ್ಯ ಎಸಗಿರಬಹುದು’ ಎಂದಿದ್ದಾರೆ.

ಸ್ಮೃತಿ ಅವರಿಗೆ ಆಪ್ತರಾಗಿದ್ದ ಕಾರಣ ಸುರೇಂದ್ರ ಸಿಂಗ್‌ ಚುನಾವಣೆ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಶೂಗಳನ್ನು ವಿತರಿಸುವ ಮೂಲಕ ರಾಹುಲ್‌ಗಾಂಧಿಗೆ ಅವಮಾನ ಮಾಡಿದ್ದರು. ಇದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾರ ಕೋಪಕ್ಕೂ ಕಾರಣವಾಗಿತ್ತು.

ರಾಹುಲ್‌ ವಿರುದ್ಧ ವಾಗ್ಧಾಳಿ
ಅಮೇಠಿಯಲ್ಲಿ ಮಾತನಾಡಿದ ಸ್ಮತಿ, ಶಾಂತಿ ಕಾಪಾಡುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಜತೆಗೆ ರಾಹುಲ್‌ಗಾಂಧಿ ವಿರುದ್ಧವೂ ವಾಗ್ಧಾಳಿ ನಡೆಸಿದ್ದಾರೆ. ಅಮೇಠಿ ಜನರಲ್ಲಿ ಭಯ ಹುಟ್ಟಿಸಿ, ಮಂಡಿಯೂರುವಂತೆ ಮಾಡಲು ಈ ರೀತಿಯ ಕೃತ್ಯ ಎಸಗಲಾಗುತ್ತಿದೆ. ಮೇ 23ರಂದು ಅಮೇಠಿಯನ್ನು ಪ್ರೀತಿಯಿಂದ ನೋಡಿಕೊಳ್ಳಿ ಎಂದು ವ್ಯಕ್ತಿಯೊಬ್ಬರು ನನಗೆ ಸಂದೇಶ ರವಾನಿಸಿದ್ದಾರೆ. ಅವರಿಗೆ ನಾನು, ನಿಮ್ಮ ಸಂದೇಶವು ನನಗೆ ಈಗ ಸ್ಪಷ್ಟವಾಗಿ ಸಿಕ್ಕಿದೆ ಎಂದು ಹೇಳಬಯಸುತ್ತೇನೆ ಎಂದಿದ್ದಾರೆ.

ಮೃತದೇಹಕ್ಕೆ ಹೆಗಲುಕೊಟ್ಟ ಸ್ಮತಿ ಇರಾನಿ
ತಮ್ಮ ಆಪ್ತ ಸುರೇಂದ್ರ ಸಿಂಗ್‌ ಹತ್ಯೆಯಾಗಿದೆ ಎಂಬ ವಿಚಾರ ತಿಳಿದೊಡನೆ ರವಿವಾರ ಬೆಳಗ್ಗೆ ಸಂಸದೆ ಸ್ಮತಿ ಇರಾನಿ ಅಮೇಠಿಗೆ ಧಾವಿಸಿದರು. ಬರೌಲಿ ಗ್ರಾಮದ ಮಾಜಿ ಮುಖ್ಯಸ್ಥರೂ ಆಗಿದ್ದ ಸುರೇಂದ್ರ ಸಿಂಗ್‌ ಅಂತ್ಯಕ್ರಿಯೆಯಲ್ಲೂ ಸ್ಮತಿ ಪಾಲ್ಗೊಂಡರು. ಬಳಿಕ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಸಿಂಗ್‌ ಅವರ ಮೃತದೇಹಕ್ಕೆ ಸ್ಮತಿ ಹೆಗಲು ಕೊಟ್ಟಿದ್ದೂ ಕಂಡುಬಂತು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.