Rajya Sabha; ಋತುಸ್ರಾವ ಅಂಗವಿಕಲತೆಯಲ್ಲ: ವೇತನ ಸಹಿತ ಮುಟ್ಟಿನ ರಜೆಗೆ ಸ್ಮೃತಿ ಇರಾನಿ ವಿರೋಧ
Team Udayavani, Dec 14, 2023, 11:22 AM IST
ಹೊಸದಿಲ್ಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮತಿ ಇರಾನಿ ಅವರು ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ವೇತನ ಸಹಿತ ಮುಟ್ಟಿನ ರಜೆಯ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಬುಧವಾರ ರಾಜ್ಯಸಭೆಯಲ್ಲಿ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಹಿಳೆಯರಿಗೆ ಮುಟ್ಟು ಎನ್ನುವುದು ಜೀವನದ ನೈಸರ್ಗಿಕ ಭಾಗವಾಗಿದ್ದು, ಅದನ್ನು ವಿಶೇಷ ರಜೆ ನಿಬಂಧನೆಗಳ ಅಗತ್ಯವಿರುವ ಅಂಗವಿಕಲತೆ ಎಂದು ಪರಿಗಣಿಸಬಾರದು ಎಂದಿದ್ದಾರೆ.
“ಋತುಸ್ರಾವದ ಮಹಿಳೆಯಾಗಿ, ಋತುಚಕ್ರವು ಅಂಗವಿಕಲತೆ ಅಲ್ಲ, ಇದು ಮಹಿಳೆಯರ ಜೀವನ ಪ್ರಯಾಣದ ನೈಸರ್ಗಿಕ ಭಾಗವಾಗಿದೆ” ಎಂದು ಇರಾನಿ ಹೇಳಿದರು.
ಮುಟ್ಟಿನ ರಜೆಯು ಉದ್ಯೋಗಿಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದ ಅವರು, “ಋತುಸ್ರಾವವಾಗದ ಯಾರಾದರೂ ಮುಟ್ಟಿನ ಬಗ್ಗೆ ನಿರ್ದಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂಬ ಕಾರಣಕ್ಕಾಗಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಿರಾಕರಿಸುವ ಸಮಸ್ಯೆಗಳನ್ನು ನಾವು ಪ್ರಸ್ತಾಪಿಸಬಾರದು.” ಎಂದರು.
ಇದನ್ನೂ ಓದಿ:ʼJigarthanda Double Xʼ ಸಿನಿಮಾ ನೋಡುತ್ತೇನೆ: ಹಾಲಿವುಡ್ ನಟ ಈಸ್ಟ್ವುಡ್ ಟ್ವೀಟ್ ವೈರಲ್
ಮುಟ್ಟಿನ ನೈರ್ಮಲ್ಯದ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದ ಸ್ಮೃತಿ ಇರಾನಿ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕರಡು ರಾಷ್ಟ್ರೀಯ ನೀತಿಯನ್ನು ರೂಪಿಸುವುದಾಗಿ ಘೋಷಿಸಿದರು. ದೇಶದಾದ್ಯಂತ ಸರಿಯಾದ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಬಗ್ಗೆ ಜಾಗೃತಿ ನೀಡುವ ಗುರಿಯನ್ನು ಇದು ಹೊಂದಿದೆ.
ಋತುಚಕ್ರದ ರಜೆಯ ವಿಷಯವು ಚರ್ಚೆಯ ವಿಚಾರವಾಗಿದೆ. ಸ್ಪೇನ್ ಇತ್ತೀಚೆಗೆ ಶಾಸನವನ್ನು ಅಂಗೀಕರಿಸಿದ್ದು ಮುಟ್ಟಿನ ಸಮಯದಲ್ಲಿ ಮಹಿಳೆಯರಿಗೆ ವೇತನ ಸಹಿತ ರಜೆ ನೀಡಲು ಅನುಮತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ