ಸಿನಿಮೀಯ ರೀತಿಯಲ್ಲಿ 22 ಕಿ.ಮೀ ಬೆನ್ನಟ್ಟಿ ಗೋಕಳ್ಳರ ಬಂಧನ!

ಚಲಿಸುತ್ತಿದ್ದ ವಾಹನದಿಂದ ಗೋವುಗಳನ್ನು ಹೊರಕ್ಕೆಸೆದ ಆರೋಪಿಗಳು

Team Udayavani, Apr 10, 2022, 2:39 PM IST

ಸಿನಿಮೀಯ ರೀತಿಯಲ್ಲಿ 22 ಕಿ.ಮೀ ಬೆನ್ನಟ್ಟಿ ಗೋಕಳ್ಳರ ಬಂಧನ!

ಹೊಸದಿಲ್ಲಿ: ಗೋವು ಕಳ್ಳಸಾಗಾಣಿಕೆ ಜಾಲವನ್ನು ಬೇಧಿಸಿರುವ ಪೊಲೀಸರು ಐವರು ಗೋಕಳ್ಳರನ್ನು ಬಂಧಿಸಿರುವ ಘಟನೆ ದಿಲ್ಲಿ ಸಮೀಪದ ಗುರುಗ್ರಾಮದಲ್ಲಿ ನಡೆದಿದೆ. ಗೋರಕ್ಷಕರು ಸುಮಾರು 22 ಕಿ.ಮೀ ಬೆನ್ನಟ್ಟಿ ಕಳ್ಳರನ್ನು ಹಿಡಿದಿದ್ದು, ತಪ್ಪಿಸಿಕೊಳ್ಳುವ ಭರದಲ್ಲಿ ಆರೋಪಿಗಳು ಕೆಲವು ಗೋವುಗಳನ್ನು ಚಲಿಸುತ್ತಿದ್ದ ವಾಹನದಿಂದ ಹೊರಗೆಸೆದಿದ್ದಾರೆ.

ಶನಿವಾರ ಮುಂಜಾನೆ ಗುರುಗ್ರಾಮದ ಸೈಬರ್ ಸಿಟಿ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಗೋವು ಕಳ್ಳಸಾಗಣೆದಾರರಿಂದ ಕೆಲವು ದೇಶ ನಿರ್ಮಿತ ಬಂದೂಕುಗಳು ಮತ್ತು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳ್ಳಸಾಗಣೆದಾರರು ದೆಹಲಿ ಗಡಿಯಿಂದ ಗುರುಗ್ರಾಮಕ್ಕೆ ಪ್ರವೇಶಿಸುವಾಗ ವಾಹನವನ್ನು ನಿಲ್ಲಿಸಲು ಕೇಳಿದರೂ ನಿಲ್ಲಿಸದೆ ವೇಗವಾಗಿ ಓಡಿಸಿದ್ದರು. ಹೀಗಾಗಿ ಚೇಸ್ ಪ್ರಾರಂಭವಾಯಿತು. ಗೋರಕ್ಷಕರು ಕಳ್ಳಸಾಗಾಣಿಕೆದಾರ ವಾಹನದ ಟೈರ್‌ಗಳನ್ನು ಪಂಕ್ಚರ್ ಮಾಡಿದರೂ ಆರೋಪಿಗಳು ವಾಹನವನ್ನು ಅತಿವೇಗದಲ್ಲಿ ಚಲಾಯಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

22 ಕಿಮೀ ಬೆನ್ನಟ್ಟಿದ ಸಂದರ್ಭದಲ್ಲಿ ಹಲವು ಹಂತಗಳಲ್ಲಿ ಕಳ್ಳಸಾಗಾಣಿಕೆದಾರರು ಗೋರಕ್ಷಕರ ಗಮನವನ್ನು ಬೇರೆಡೆ ಸೆಳೆಯಲು ಹಸುಗಳನ್ನು ಓಡುವ ವಾಹನದಿಂದ ಹೊರಕ್ಕೆ ಎಸೆದಿದ್ದಾರೆ.

ಇದನ್ನೂ ಓದಿ:ನಟಿ ರೇಖಾ ವಿವಾಹವಾಗಲು ಮುಂದಾಗಿದ್ದ ಇಮ್ರಾನ್ ಖಾನ್: ಸುದ್ದಿ ಮತ್ತೆ ಮುನ್ನೆಲೆಗೆ

22 ಕಿ.ಮೀ. ಬೆನ್ನಟ್ಟಿದ ನಂತರ ಗೋವು ಕಳ್ಳಸಾಗಣೆದಾರರನ್ನು ಹಿಡಿಯಲಾಯಿತು. ಅವರ ವಾಹನದಿಂದ ಅಕ್ರಮ ಬಂದೂಕುಗಳು ಮತ್ತು ಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಗುರುಗ್ರಾಮ ಪೊಲೀಸರ ತಂಡವು ಹಸು ಕಳ್ಳಸಾಗಣೆದಾರರನ್ನು ಬಂಧಿಸಿದೆ.

ಹರ್ಯಾಣ ಸರ್ಕಾರವು ಗೋವು ಕಳ್ಳಸಾಗಣೆ ವಿರುದ್ಧ ಕಠಿಣ ಕಾನೂನುಗಳನ್ನು ಮಾಡಿದೆ. ಗೋವುಗಳ ರಕ್ಷಣೆಗಾಗಿ ಆಯೋಗವನ್ನು ಸಹ ರಚಿಸಿದೆ. ಆದರೆ ಈ ಕ್ರಮಗಳ ಹೊರತಾಗಿಯೂ, ಹರ್ಯಾಣ ರಾಜ್ಯದಲ್ಲಿ ಜಾನುವಾರು ಕಳ್ಳಸಾಗಣೆ ಹೆಚ್ಚುತ್ತಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.