ಆ್ಯಂಬುಲೆನ್ಸ್ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ
Team Udayavani, Oct 26, 2021, 6:45 AM IST
ಸಾಂದರ್ಭಿಕ ಚಿತ್ರ.
ಅಲಿರಾಜಪುರ: ರಾಜ್ಯ ಸರ್ಕಾರದ 108 ಸಹಾಯವಾಣಿಯ ಆ್ಯಂಬುಲೆನ್ಸ್ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ ಮಾಡಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯಲ್ಲಿ ನಡೆದಿದೆ.
ಅಲಿರಾಜಪುರದ ಭವ್ರಾದಿಂದ ಕತ್ತಿವಾಡಕ್ಕೆ ಶನಿವಾರ ರಾತ್ರಿ ಸಾಗುವಾನಿ ಮರದ ತುಂಡುಗಳನ್ನು ಆ್ಯಂಬುಲೆನ್ಸ್ನಲ್ಲಿ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಅದನ್ನು ಸ್ಥಳೀಯರು ತಡೆದಿದ್ದು, ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು, ಆ್ಯಂಬುಲೆನ್ಸ್ನಲ್ಲಿದ್ದ 15,000 ರೂ. ಬೆಲೆಯ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಗಾಡಿ ಬಿಟ್ಟು ಓಡಿಹೋಗಿದ್ದ ಚಾಲಕ ವಿಕ್ರಂ ಧಾಕತ್(29) ಮತ್ತು ಆತನ ಸಹಾಯಕ ಅರುಣ್ ಬಮಾನಿಯಾ(30)ನನ್ನು ಬಂಧಿಸಲಾಗಿದೆ.
ಆ ನಾಟವನ್ನು ಪೊಲೀಸ್ ಪೇದೆಯೊಬ್ಬರ ಸ್ಥಳಕ್ಕೆ ಕೊಂಡೊಯ್ಯುತ್ತಿದ್ದುದ್ದಾಗಿ ಅವರಿಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಆ್ಯಂಬುಲೆನ್ಸ್ನಲ್ಲಿ ಆಕ್ಸಿಜನ್ ಸಿಲಿಂಡರ್ಗಳೂ ಇದ್ದಿದ್ದಾಗಿ ವರದಿಯಾಗಿದೆ.
ಇದನ್ನೂ ಓದಿ:ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ