Former Bihar CM; ಜನನಾಯಕ ಕರ್ಪೂರಿ ಠಾಕೂರ್ ಭಾರತ ರತ್ನ
ಬಿಹಾರದ ಮಾಜಿ ಮುಖ್ಯಮಂತ್ರಿಗೆ ದೇಶದ ಅತ್ಯುನ್ನತ ಪ್ರಶಸ್ತಿ
Team Udayavani, Jan 24, 2024, 6:25 AM IST
ಹೊಸದಿಲ್ಲಿ: ಬಿಹಾರದ ಮಾಜಿ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ಆಂದೋಲನಕ್ಕೆ ಗಣನೀಯ ಕೊಡುಗೆ ನೀಡಿದ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ಭಾರತ ರತ್ನ’ (ಮರಣೋತ್ತರ) ಸಂದಿದೆ. ಮಂಗಳವಾರ ಸಂಜೆ ರಾಷ್ಟ್ರಪತಿ ಭವನ ಈ ಕುರಿತು ಘೋಷಣೆ ಮಾಡಿದೆ.
ಬಿಹಾರದಾದ್ಯಂತ “ಜನನಾಯಕ’ ಎಂದೇ ಜನಪ್ರಿಯರಾಗಿದ್ದ ಕರ್ಪೂರಿ ಠಾಕೂರ್ ರಾಜ್ಯದ ಅತ್ಯಂತ ಹಿಂದುಳಿದ ವರ್ಗದ ನಾಯಕರಾಗಿದ್ದರು. ಎರಡು ಬಾರಿ, 1970ರ ಡಿಸೆಂಬರ್ನಿಂದ 1971ರ ಜೂನ್ವರೆಗೆ ಮತ್ತು 1977ರ ಡಿಸೆಂಬರ್ನಿಂದ 1979ರ ಎಪ್ರಿಲ್ವರೆಗೆ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಸಿಎಂ ಆಗಿದ್ದಾಗ ಸರಕಾರಿ ಉದ್ಯೋಗಗಳಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಮುಂಗೇರಿ ಲಾಲ್ ಸಮಿತಿ ವರದಿಯನ್ನು ಜಾರಿಗೊಳಿಸಿದ್ದರು. ಮೀಸಲಾತಿ ಒದಗಿಸಲು “ಕರ್ಪೂರಿ ಠಾಕೂರ್ ಸೂತ್ರ’ವನ್ನು ಪರಿ ಚಯಿಸುವ ಮೂಲಕ ದೇಶಾದ್ಯಂತ ಮನೆ ಮಾತಾದರು. ಸ್ವಾತಂತ್ರ್ಯ ಹೋರಾಟದ ವೇಳೆ “ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳವಳಿಯಲ್ಲಿ ಸಕ್ರಿಯ ವಾಗಿ ಭಾಗವಹಿಸಿ, ಜೈಲುವಾಸವನ್ನೂ ಅನುಭವಿಸಿದ್ದರು.
ಬಿಹಾರದಲ್ಲಿ ಸಂಪೂರ್ಣವಾಗಿ ಸಾರಾಯಿ ನಿಷೇಧಿಸಿದ ಮೊದಲ ಸಿಎಂ ಎಂಬ ಖ್ಯಾತಿಯೂ ಅವರದು. 1924ರ ಜ. 24ರಂದು ಜನಿಸಿದ ಠಾಕೂರ್ ಅವರ ಜನ್ಮಶತಮಾನೋತ್ಸವದ ಒಂದು ದಿನ ಮುಂಚಿತವಾಗಿಯೇ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆಯಾಗಿರುವುದು ವಿಶೇಷ.
ಕರ್ಪೂರಿಜಿ ಹಿನ್ನೆಲೆ
-ಕರ್ಪೂರಿ ಠಾಕೂರ್ಜಿ ಬಿಹಾರದ ಅತ್ಯಂತ ಹಿಂದುಳಿದ ವರ್ಗದ ಜನನಾಯಕ.
-ಬಿಹಾರದ ಮುಖ್ಯಮಂತ್ರಿ ಯಾಗಿದ್ದ ಅವರು ಹಿಂದುಳಿದ ವರ್ಗಕ್ಕೆ ಮೀಸಲಾತಿ ಜಾರಿ ಗೊಳಿಸಿದ ಹರಿಕಾರ.
-ಮೆಟ್ರಿಕ್ಯುಲೇಷನ್ನಲ್ಲಿ ಇಂಗ್ಲಿಷ್ ಕಡ್ಡಾಯವನ್ನು ನಿಷೇಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!