
ಅಂಧರಿಗಾಗಿ ಸಾಫ್ಟ್ ವೇರ್ ಅಭಿವೃದ್ಧಿ: ಸುಪ್ರೀಂ ಕೋರ್ಟ್
Team Udayavani, Nov 25, 2022, 11:54 PM IST

ಹೊಸದಿಲ್ಲಿ: ಅಂಧರು ಬಳಸಲು ಅನುಕೂಲವಾಗುವಂತೆ ಸುಪ್ರೀಂ ಕೋರ್ಟ್ ವೆಬ್ಸೈಟ್ನ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲು ಸಿಜೆಐ ಡಿ.ವೈ.ಚಂದ್ರಚೂಡ್ ಸೂಚಿಸಿದ್ದಾರೆ.
ಈ ಪ್ರಯತ್ನದ ಭಾಗವಾಗಿ ಅಂಧರಾದ ಹಿರಿಯ ನ್ಯಾಯವಾದಿ ಎಸ್.ಕೆ. ರುಂಗ್ಟ ಅವರ ಸಲಹೆ, ಸಹಕಾರ ಪಡೆಯುವ ನಿಟ್ಟಿನಲ್ಲಿ ಅವರಿಗೆ ಕೆಲವು ಪ್ರಶ್ನೆಗಳನ್ನು ಸಿಜೆಐ ಗುರುವಾರ ಕೇಳಿದರು.
“ಇದೊಂದು ವೈಯಕ್ತಿಕ ಪ್ರಶ್ನೆ. ನೀವು ಏನು ಭಾವಿಸುವುದಿಲ್ಲ ಎಂದು ನಾನು ತಿಳಿದುಕೊಳ್ಳುತ್ತೇನೆ. ನೀವು ಇತರ ನ್ಯಾಯವಾದಿಗಳ ಲಿಖಿತ ವಾದವನ್ನು ಹೇಗೆ ಗ್ರಹಿಸುತ್ತೀರಿ? ಅದನ್ನು ಬ್ರೈಲ್ ಲಿಪಿಗೆ ಹೇಗೆ ಪರಿವರ್ತಿಸಿಕೊಳ್ಳುತ್ತೀರಿ,’ ಎಂದು ಸಿಜೆಐ ಅವರು ನ್ಯಾಯವಾದಿ ರುಂಗ್ಟ ಅವರನ್ನು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರುಂಗ್ಟ, ಅಂಧರಿಗೆ ಅನುಕೂಲವಾಗುವ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ರುಂಗ್ಟ ಅವರು ಚಿಕ್ಕ ವಯಸ್ಸಿನಲ್ಲೇ ದೃಷ್ಟಿ ಕಳೆದುಕೊಂಡರು. ಅನೇಕ ವರ್ಷಗಳಿಂದ ಸುಪ್ರೀಂ ಕೋರ್ಟ್ ವಕೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್ಪಾಲ್ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ

ಜಮೀನು,ಚಿನ್ನ,ಟ್ರ್ಯಾಕ್ಟರ್, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು
MUST WATCH
ಹೊಸ ಸೇರ್ಪಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

ಐಸಿಸಿ ಏಕದಿನ ರ್ಯಾಂಕಿಂಗ್ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು