ಸೊಹ್ರಾಬುದ್ದೀನ್ ಎನ್ಕೌಂಟರ್:ಎಲ್ಲಾ 22 ಆರೋಪಿಗಳು ನಿರ್ದೋಷಿಗಳು
Team Udayavani, Dec 21, 2018, 3:08 PM IST
ಹೊಸದಿಲ್ಲಿ: 2005 ರಲ್ಲಿ ಗುಜರಾತ್ನಲ್ಲಿ ನಡೆದಿದ್ದ ಶಂಕಿತ ಉಗ್ರ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ಕೌಂಟರ್ ಪ್ರಕರಣದ ಎಲ್ಲಾ 22 ಆರೋಪಿಗಳನ್ನು ನಿರ್ದೋಷಿಗಳು ಎಂದು ವಿಶೇಷ ಸಿಬಿಐ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.
ಅಪಹರಣ ಮತ್ತು ಹತ್ಯೆಯ ಕುರಿತು ದಾಖಲೆಗಳು ಮತ್ತು ಸೂಕ್ತ ಸಾಕ್ಷಾಧಾರಗಳ ಕೊರತೆ ಹಿನ್ನಲೆಯಲ್ಲಿ ಆರೋಪಿಗಳನ್ನು ನಿರ್ದೋಷಿಗಳು ಎಂದು ವಿಶೇಷ ಕೋರ್ಟ್ ನ ನ್ಯಾಯಾಧೀಶ ಎಸ್.ಜೆ.ಶರ್ಮ ತೀರ್ಪು ನೀಡಿದ್ದಾರೆ.
ನಿರ್ದೋಷಿಗಳೆನಿಸಿದ 22 ಮಂದಿಯ ಪೈಕಿ 21 ಮಂದಿ ಗುಜರಾತ್ ಮತ್ತು ರಾಜಸ್ಥಾನದ ಜ್ಯೂನಿಯಲ್ ಶ್ರೇಣಿಯ ಪೊಲೀಸ್ ಅಧಿಕಾರಿಗಳು.
2005 ರಲ್ಲಿ ಗ್ಯಾಂಗ್ಸ್ಟರ್ ಸೊಹ್ರಾಬುದ್ದೀನ್ ಶೇಖ್ ಮತ್ತು ಪತ್ನಿ ಕೌಸರ್ ಬಿ ಅವರನ್ನು ಗುಜರಾತ್ನ ಎಟಿಎಸ್ ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಅಪಹರಿಸಿ ಗಾಂಧಿನಗರದಲ್ಲಿ ನಕಲಿ ಎನ್ಕೌಂಟರ್ನಲ್ಲಿ ಹತ್ಯೆಗೈದಿದ್ದರು, ಪತ್ನಿಯನ್ನು ಅತ್ಯಾಚಾರಗೈದು ಹತ್ಯೆಗೈಯಲಾಗಿತ್ತು ಎಂದು ಸಿಬಿಐ ಹೇಳಿತ್ತು.
ಅಪಹರಣಕ್ಕೆ ಸೊಹ್ರಾಬುದ್ದೀನ್ ಆಪ್ತ ತುಳಸಿ ಪ್ರಜಾಪತಿ ಪ್ರತ್ಯಕ್ಷ ದರ್ಶಿಯಾಗಿದ್ದು,ಆತನನ್ನೂ 2006ರಲ್ಲಿ ಬನಸ್ಕಾಂತದ ಚಪ್ರಿ ಎಂಬಲ್ಲಿ ಹತ್ಯೆಗೈಯಲಾಗಿತ್ತು.
2013ರಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಚಾರ್ಜ್ ಶೀಟ್ ದಾಖಲು ಮಾಡಿತ್ತು. ಬಳಿಕ ಶಾ ಅವರಿಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ