ಅಂತರ್ಜಾತಿ ವಿವಾಹವಾದ ಜೋಡಿ ಬರ್ಬರ ಹತ್ಯೆ
3 ತಿಂಗಳ ಗರ್ಭಿಣಿಯ ಕೊಚ್ಚಿ ಕೊಲೆ, ಯುವತಿಯ ತಂದೆ ಅರೆಸ್ಟ್
Team Udayavani, Jul 5, 2019, 9:57 AM IST
ತೂತುಕುಡಿ: ಇಲ್ಲಿನ ತಾಂತೈ ಪೆರಿಯಾರ್ ನಗರ ಎಂಬಲ್ಲಿ ಅಂತರ್ಜಾತಿ ವಿವಾಹವಾದ ದಂಪತಿಗಳನ್ನು ಬರ್ಬರವಾಗಿ ಕಡಿದು ಹತ್ಯೆಗೈಯಲಾಗಿದೆ. 3 ತಿಂಗಳ ಗರ್ಭಿಣಿಯ ಮೇಲೂ ಕರುಣೆ ತೋರದ ಈ ಮರ್ಯಾದಾ ಹತ್ಯೆ ತಮಿಳು ನಾಡನೇ ಬೆಚ್ಚಿಬೀಳಿಸಿದೆ.
ಸೋಲೈರಾಜ್ ಎನ್ನುವ 24 ವರ್ಷದ ಯುವಕ ತನ್ನೊಂದಿಗೆ ಕೆಲಸ ಮಾಡುತ್ತಿದ್ದ 24 ವರ್ಷದ ಜ್ಯೋತಿ ಎಂಬಾಕೆಯನ್ನು ಪ್ರೇಮ ವಿವಾಹವಾಗಿದ್ದ. ಕೆಳ ಜಾತಿಯ ಯುವಕ ಎಂಬ ಕಾರಣಕ್ಕೆ ಜ್ಯೋತಿ ಮನೆಯವರ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧದ ನಡುವೆಯೂ ಸೋಲೈರಾಜ್ ಮನೆಯವರ ಬೆಂಬದೊಂದಿಗೆ ವಿವಾಹವಾಗಿ ಜೊತೆಯಾಗಿ ಸಿಂಗಲ್ ಬೆಡ್ರೂಂನ ಮನೆಯೊಂದರಲ್ಲಿ ವಾಸವಾಗಿದ್ದರು.
ಜುಲೈ 3 ರ ಬೆಳಗ್ಗೆ 6 ಗಂಟೆಯ ವೇಳೆಗೆ ಇನ್ನೂ ಯಾಕೆ ಎದ್ದೇಳಲಿಲ್ಲ ಎಂದು ಸೋಲೈ ರಾಜ್ ಅವರ ತಾಯಿ ರೂಂನ ಒಳಗೆ ತೆರಳಿ ನೋಡಿದಾಗ ಇಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಇಬ್ಬರ ಕತ್ತನ್ನು ಕಡಿದು ಬರ್ಬರವಾಗಿ ಹತ್ಯೆಗೈಯಲಾಗಿದೆ. ಜ್ಯೋತಿಯ ಮೊಣಕೈ ಕತ್ತರಿಸಿ ಹಾಕಲಾಗಿತ್ತು.
ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿ ತಕ್ಷಣ ಜ್ಯೋತಿಯ ತಂದೆಯನ್ನು ಬಂಧಿಸಿದ್ದಾರೆ.
ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಬ್ಬರನ್ನು ಮಲಗಿದ್ದಲ್ಲೇ ಕಡಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ