ನಭೋಮಂಡಲದಲ್ಲಿ “ಕಂಕಣ ಸೂರ್ಯಗ್ರಹಣ” ಕೌತುಕ, ರಾಜ್ಯದ ಹಲವೆಡೆ ಗೋಚರ
ಬೆಂಗಳೂರು ಸೇರಿದಂತೆ ಇತರೆಡೆ ಭಾಗಶಃ ಕಂಕಣ ಸೂರ್ಯಗ್ರಹಣ ಗೋಚರಿಸಿದೆ.
Team Udayavani, Jun 21, 2020, 12:33 PM IST
ನವದೆಹಲಿ/ಬೆಂಗಳೂರು: ನವದೆಹಲಿ, ರಾಜಸ್ಥಾನ್, ಹರ್ಯಾಣ ಮತ್ತು ಉತ್ತರಾಖಂಡ್ ನಲ್ಲಿ ಜೂನ್ 21ರಂದು ಬೆಳಗ್ಗೆ ಆರಂಭಗೊಂಡ ಕಂಕಣ ಸೂರ್ಯಗ್ರಹಣ ಗೋಚರಿಸಿದೆ. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಭಾಗಶಃ ಸೂರ್ಯಗ್ರಹಣ ಗೋಚರಿಸಿದೆ ಎಂದು ವರದಿ ತಿಳಿಸಿದೆ.
ಭಾರತ ಹೊರತುಪಡಿಸಿ ಈ ಸೂರ್ಯಗ್ರಹಣ ಕಾಂಗೋ, ಸೂಡಾನ್, ಇಥಿಯೋಪಿಯಾ, ಯೆಮೆನ್, ಸೌದಿ ಅರೇಬಿಯಾ, ಓಮಾನ್, ಪಾಕಿಸ್ತಾನ ಹಾಗೂ ಚೀನಾದಲ್ಲಿಯೂ ಗೋಚರವಾಗಿದೆ ಎಂದು ವರದಿ ವಿವರಿಸಿದೆ.
ದಿಲ್ಲಿ, ಮುಂಬೈ, ಕೋಲ್ಕತಾ, ಚೆನ್ನೈ, ಬೆಂಗಳೂರು ಸೇರಿದಂತೆ ಇತರೆಡೆ ಭಾಗಶಃ ಕಂಕಣ ಸೂರ್ಯಗ್ರಹಣ ಗೋಚರಿಸಿದೆ. ಮೊದಲ ಹಂತದ ಗ್ರಹಣ 2ಗಂಟೆ 2 ನಿಮಿಷಕ್ಕೆ ಮೋಕ್ಷವಾಗಲಿದ್ದು, ಭಾಗಶಃ ಸೂರ್ಯಗ್ರಹಣ 3.04 ನಿಮಿಷಕ್ಕೆ ಅಂತ್ಯವಾಗಲಿದೆ.
ಮೋಡ ಮುಸುಕಿದ ಹಾಗೂ ಮಳೆಯ ವಾತಾವರಣದಿಂದಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಂಕಣ ಸೂರ್ಯ ಗ್ರಹಣ ಕೌತುಕ ವೀಕ್ಷಣೆಗೆ ಅಡ್ಡಿಯಾಗಿದ್ದರೆ, ರಾಜ್ಯದ ಹಲವೆಡೆ ಖಂಡಗ್ರಾಸ ಸೂರ್ಯಗ್ರಹಣ ಗೋಚರವಾಗಿದೆ. ಭಾನುವಾರ(ಜೂನ್ 21) ಬೆಳಗ್ಗೆ 10 ಗಂಟೆ 5ನಿಮಿಷಕ್ಕೆ ಆರಂಭಗೊಂಡ ಈ ಖಂಡಗ್ರಾಸ ಗ್ರಹಣ ಮಧ್ಯಾಹ್ನ 1.31ರವರೆಗೆ ಗೋಚರಿಸಲಿದೆ. ಬರಿಗಣ್ಣಿನಿಂದ ಸೂರ್ಯಗ್ರಹಣ ವೀಕ್ಷಣೆ ಅಪಾಯಕಾರಿ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ